AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸ್ಟೈಲ್​​ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್: ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ

ಐಷರಾಮಿ ಲ್ಯಾಬೋರ್ಗಿನಿ ಕಾರು ಚಾಲಕ ರಸ್ತೆ ಮಧ್ಯೆ ಭಯಾನಕ ಸ್ಟಂಟ್​​ ಮಾಡಿರುವಂತಹ ಘಟನೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಬೆಳಗಿನ ಜಾವ ನಡೆದಿದೆ. ಡ್ರಿಫ್ಟಿಂಗ್ ವಿಡಿಯೋ ವೈರಲ್​​ ಬೆನ್ನಲ್ಲೇ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್​​ ದಾಖಲಾಗಿದ್ದು, ಚಾಲಕನ ಪತ್ತೆಗೆ ಬಲೆ ಬಿಸಿದ್ದಾರೆ.

ಸಿನಿಮಾ ಸ್ಟೈಲ್​​ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್: ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ
ಕಾರು ಡ್ರಿಫ್ಟಿಂಗ್Image Credit source: tv9 kannada
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 21, 2026 | 6:16 PM

Share

ಬೆಂಗಳೂರು, ಮಾರ್ಚ್​ 21: ಹೈಫೈ ಲೈಫ್​ ಹೊಂದಿರುವ ಕೆಲವರ ಶೋಕಿ ಬೇರೆನೇ ಇರುತ್ತೆ. ಅದರಲ್ಲೂ ಕಾರುಗಳಿರುವ ಕೆಲವರು ಓವರ್​ ಮಾಡುತ್ತಾರೆ. ಕಳೆದ ಎರಡು ತಿಂಗಳ‌ ಹಿಂದೆ ಗ್ರೀನ್ ಕಲರ್ ಲ್ಯಾಂಬೋರ್ಗಿನಿ (Lamborghini) ಜಿಗ್ ಜಾಗ್ ಜರ್ನಿ ಮಾಡಿ ಸುದ್ದಿಯಾಗಿತ್ತು. ಇದೀಗ ವೈಟ್ ಕಲರ್ ಲ್ಯಾಂಬೋರ್ಗಿನಿ ಕಾರವೊಂದು ಸದ್ದು ಮಾಡುತ್ತಿದೆ. ಸರ್ಕಲ್ ನಡುವೆಯೇ ರಾಜಾ ರೋಷವಾಗಿ ಡ್ರಿಫ್ಟಿಂಗ್ ಮಾಡಲಾಗಿದೆ. ಪೊಲೀಸರ ಬಗ್ಗೆ ಗೊತ್ತಿದ್ದೂ, ಸಿನಿಮಾ ಸ್ಟೈಲ್​​ನಲ್ಲಿ ಶೋಕಿ ಮಾಡಲಾಗಿದೆ.

ಸರ್ಕಲ್ ನಡುವೆಯೇ ಡ್ರಿಫ್ಟಿಂಗ್

ಬೆಂಗಳೂರಿನ ಪ್ರಸಿದ್ಧ ಅನಿಲ್ ಕುಂಬ್ಳೆ ಸರ್ಕಲ್​​ನ ಮಧ್ಯೆದಲ್ಲಿ ಹೀಗೆ ರಾಜಾರೋಷವಾಗಿ ಕಾರಿನ ಡ್ರಿಫ್ಟಿಂಗ್​​ ಮಾಡಲಾಗಿದೆ. ಲ್ಯಾಂಬೋರ್ಗಿನಿ ಕಾರು ಚಾಲಕನೊಬ್ಬ ಸಿನಿಮಾ ಸ್ಟೈಲ್​ನಲ್ಲಿ ಡ್ರಿಫ್ಟಿಂಗ್ ಮಾಡಿ ಸುದ್ದಿಯಾಗಿದ್ದಾನೆ. ಇಂದು ಬೆಳಗಿನ ಜಾವ 2 ಅಥವಾ 3ಗಂಟೆ ಸುಮಾರಿಗೆ ಈ ರೀತಿಯಾಗಿ ಕಾರು ಸ್ಟಂಟ್ ಮಾಡಲಾಗಿದೆ. ಸುತ್ತಮುತ್ತ ಸಿಸಿಟಿವಿ, ಪೊಲೀಸ್​ ಕಣ್ಗಾವಲು, ಎಂಜಿ ರೋಡ್ ಆಗಿರುವುದರಿಂದ ರಾತ್ರಿಯಾದರೂ ವಾಹನಗಳು ಸಂಚರಿಸುತ್ತಿರುತ್ತವೆ. ಈ ಮಧ್ಯೆ ಬಳಿ ಬಣ್ಣದ ಲ್ಯಾಂಬೋರ್ಗಿನಿ ಕಾರು ಮಾಲೀಕ ಹೀಗೆ ಸಿನಿಮಾ ಸ್ಟೈಲ್​ನಲ್ಲಿ ಸರ್ಕಲ್ ನಡುವೆಯೇ ಡ್ರಿಫ್ಟಿಂಗ್ ಮಾಡಿದ್ದಾನೆ. ಅಲ್ಲದೆ ಜೋರಾಗಿ ಕೂಗಾಡುತ್ತಾ ಎಂಜಾಯ್ ಮಾಡಿದ್ದಾನೆ.

ಇದನ್ನೂ ಓದಿ: ಕಾರು ಖರೀದಿಸಿದ್ದು ಯಾರೋ, ನೋಂದಣಿ ಮಾಡಿಸಿದ್ದು ಇನ್ಯಾರದೋ ಹೆಸರಿಗೆ: ಲ್ಯಾಂಬೋರ್ಗಿನಿ ರಹಸ್ಯ ಬಯಲು

ಚಾಲಕನ ಈ ಸಾಹಸವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದು, ಪೊಲೀಸರಿಗೂ ರವಾನಿಸಿದ್ದಾರೆ. ಮಾಹಿತಿ ಬಂದ ಕೂಡಲೇ ಎಫ್​ಐಆರ್ ದಾಖಲಿಸಿಕೊಂಡಿ ಪರಿಶೀಲನೆ ಮಾಡಿದ್ದು, ಸದ್ಯ KA-05 NR 0009 ಕಾರು ನಂಬರ್​​ ಪತ್ತೆಯಾಗಿದೆ. ಆದರೆ ಮಾಲೀಕ ಯಾರು? ರಸ್ತೆಯುದ್ದಕ್ಕೂ ಈ ರೀತಿ ಜಾಲಿ ರೈಡ್ ಮಾಡಲಾಗಿದೆ, ಹೀಗೆ ಹಲವು ಆಯಾಮಗಳಲ್ಲಿ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ತನಿಖೆ ನಡೆಸಿದ್ದಾರೆ. ಚಾಲಕನನ್ನ ಪತ್ತೆ ಮಾಡಿ ಆರ್.ಸಿ ರದ್ದು ಮಾಡಿ ಕಾರು ವಶಪಡೆಯುವುದುಕ್ಕೆ ಖಾಕಿ ಮುಂದಾಗಿದೆ.

ಡಿಸಿಪಿ ಸಾಹಿಲ್ ಬಾಗ್ಲಾ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಪಶ್ಚಿಮ ವಿಭಾಗದ ಸಂಚಾರ ಪ್ರಭಾರ ಡಿಸಿಪಿ ಸಾಹಿಲ್ ಬಾಗ್ಲಾ ಪ್ರತಿಕ್ರಿಯಿಸಿದ್ದು, ಬೆಳಗಿನಜಾವ 2-3 ಗಂಟೆ ಸುಮಾರಿಗೆ ಈ ರೀತಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡು ಮಾಲೀಕನ ಪತ್ತೆ ಕಾರ್ಯ ನಡೆಸುತ್ತಿದ್ದೇವೆ. ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಯನ್ನು ಪತ್ತೆ ಹಚ್ಚುತ್ತೇವೆ. ಘಟನೆ ಸಂಬಂಧ ಆರ್​ಸಿ ಕೂಡ ಕ್ಯಾನ್ಸಲ್ ಮಾಡಲು ನಿರ್ಧರಿಸಿದ್ದೇವೆ. ಈ ರೀತಿ ರಸ್ತೆಯಲ್ಲಿ ಯಾರೂ ಕೂಡ ಸ್ಟಂಟ್ ಮಾಡಲು ಅವಕಾಶ ಇಲ್ಲ, ಹೀಗೆ ಮಾಡಿದರೆ ಆರ್​ಸಿ ರದ್ದುಗೊಳಿಸಿ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ಆಧರಿಸಿ ಚಾಲಕನ ವಿರುದ್ಧ ಎಫ್‌ಐಆರ್

ಪೊಲೀಸರು ಕೇಸ್ ಹಾಕಿ ವಾರ್ನ್ ಮಾಡಿದರೂ ಕೆಲವರು ಹಣವಿದೆ ಅಂತಾ ಈ ರೀತಿ ಶೋಕಿ ಮಾಡುವುದು ಮಾತ್ರ ನಿಲ್ಲುತ್ತಿಲ್ಲ. ಆದರೆ ಶೋಕಿಗೆ ಬೇರೆಯವರ ಪ್ರಾಣಕ್ಕೆ ತೊಂದರೆ ಆದರೆ ಯಾರು ಹೊಣೆ?

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Sat, 21 March 26

Follow Us
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!