Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಸ್ಕಾಂ‌ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್ ಸಾವು, ಚೀಮಸಂದ್ರ ಬಳಿ ದುರ್ಘಟನೆ

ಲೈನ್‌ಮ್ಯಾನ್ ಸಿದ್ದರಾಜು ಮಧ್ಯಾಹ್ನ ಲೈನ್ ಸರಿಪಡಿಸಲು ಹೋಗಿದ್ದರು. ಲೈನ್ ಸರಿಪಡಿಸುವುದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಹೇಳಿದ್ದರು. ಬೆಸ್ಕಾಂ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ, ಸಿದ್ದರಾಜು ಅವರು ದುರಸ್ತಿ ಮಾಡಲಿರುವ ಲೈನ್‌ ಬದಲಾಗಿ ಬೇರೆ ಲೈನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು

ಬೆಂಗಳೂರು: ಬೆಸ್ಕಾಂ‌ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್ ಸಾವು, ಚೀಮಸಂದ್ರ ಬಳಿ ದುರ್ಘಟನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Nov 25, 2023 | 4:08 PM

ಬೆಂಗಳೂರು, ನವೆಂಬರ್ 25: ಬೆಸ್ಕಾಂ (BESCOM) ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್​ ಬಲಿಯಾದ ದುರ್ಘಟನೆ ಬೆಂಗಳೂರು ಪೂರ್ವ ತಾಲೂಕಿನ ಚೀಮಸಂದ್ರ (Cheemasandra) ಬಳಿ ನಡೆದಿದೆ. ಫ್ಯೂಸ್‌ ಬದಲಾವಣೆ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಿದ್ದರಾಜು (32) ಮೃತಪಟ್ಟಿದ್ದಾರೆ. ವಿದ್ಯುತ್ ತಂತಿ ತಗುಲಿ ಮಹಿಳೆ ಮತ್ತು ಮಗು ಮೃತಪಟ್ಟ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಈ ದುರಂತ ಸಂಭವಿಸಿದೆ.

ಲೈನ್‌ಮ್ಯಾನ್ ಸಿದ್ದರಾಜು ಮಧ್ಯಾಹ್ನ ಲೈನ್ ಸರಿಪಡಿಸಲು ಹೋಗಿದ್ದರು. ಲೈನ್ ಸರಿಪಡಿಸುವುದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಹೇಳಿದ್ದರು. ಬೆಸ್ಕಾಂ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ, ಸಿದ್ದರಾಜು ಅವರು ದುರಸ್ತಿ ಮಾಡಲಿರುವ ಲೈನ್‌ ಬದಲಾಗಿ ಬೇರೆ ಲೈನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು ಎಂಬ ಅನುಮಾನ ಇದಿಗ ವ್ಯಕ್ತವಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆಂದು ಕಂಬ ಹತ್ತಿದ್ದ ಲೈನ್‌ಮ್ಯಾನ್, ವಿದ್ಯುತ್‌ ಶಾಕ್‌ನಿಂದ ಲೈನ್‌ಮ್ಯಾನ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿದರಹಳ್ಳಿಯ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಗೊಳಿಸಲಾಗಿದೆ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಹೋಪ್​ ಫಾರ್ಮ್​ ಜಂಕ್ಷನ್ ಬಳಿಯ ಗೋಪಾಲ್ ಕಾಲೊನಿ ನಿವಾಸಿ ಸೌಂದರ್ಯ, ಮಗು ಸುವಿಕ್ಷಾ ಜತೆ ಭಾನುವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದಿದ್ದರು. ವಿದ್ಯುತ್​ ಪ್ರವಹಿಸಿ ಮೃತಪಟ್ಟಿದ್ದರು. ಇದಾದ ಕೆಲವೇ ದಿನಗಳಲ್ಲಿ, ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟರೆ, ಮತ್ತೊಬ್ಬ ಬಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ