AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಸ್ಕಾಂ‌ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್ ಸಾವು, ಚೀಮಸಂದ್ರ ಬಳಿ ದುರ್ಘಟನೆ

ಲೈನ್‌ಮ್ಯಾನ್ ಸಿದ್ದರಾಜು ಮಧ್ಯಾಹ್ನ ಲೈನ್ ಸರಿಪಡಿಸಲು ಹೋಗಿದ್ದರು. ಲೈನ್ ಸರಿಪಡಿಸುವುದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಹೇಳಿದ್ದರು. ಬೆಸ್ಕಾಂ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ, ಸಿದ್ದರಾಜು ಅವರು ದುರಸ್ತಿ ಮಾಡಲಿರುವ ಲೈನ್‌ ಬದಲಾಗಿ ಬೇರೆ ಲೈನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು

ಬೆಂಗಳೂರು: ಬೆಸ್ಕಾಂ‌ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್ ಸಾವು, ಚೀಮಸಂದ್ರ ಬಳಿ ದುರ್ಘಟನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 25, 2023 | 4:08 PM

Share

ಬೆಂಗಳೂರು, ನವೆಂಬರ್ 25: ಬೆಸ್ಕಾಂ (BESCOM) ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್​ ಬಲಿಯಾದ ದುರ್ಘಟನೆ ಬೆಂಗಳೂರು ಪೂರ್ವ ತಾಲೂಕಿನ ಚೀಮಸಂದ್ರ (Cheemasandra) ಬಳಿ ನಡೆದಿದೆ. ಫ್ಯೂಸ್‌ ಬದಲಾವಣೆ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಿದ್ದರಾಜು (32) ಮೃತಪಟ್ಟಿದ್ದಾರೆ. ವಿದ್ಯುತ್ ತಂತಿ ತಗುಲಿ ಮಹಿಳೆ ಮತ್ತು ಮಗು ಮೃತಪಟ್ಟ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಈ ದುರಂತ ಸಂಭವಿಸಿದೆ.

ಲೈನ್‌ಮ್ಯಾನ್ ಸಿದ್ದರಾಜು ಮಧ್ಯಾಹ್ನ ಲೈನ್ ಸರಿಪಡಿಸಲು ಹೋಗಿದ್ದರು. ಲೈನ್ ಸರಿಪಡಿಸುವುದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಹೇಳಿದ್ದರು. ಬೆಸ್ಕಾಂ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ, ಸಿದ್ದರಾಜು ಅವರು ದುರಸ್ತಿ ಮಾಡಲಿರುವ ಲೈನ್‌ ಬದಲಾಗಿ ಬೇರೆ ಲೈನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು ಎಂಬ ಅನುಮಾನ ಇದಿಗ ವ್ಯಕ್ತವಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆಂದು ಕಂಬ ಹತ್ತಿದ್ದ ಲೈನ್‌ಮ್ಯಾನ್, ವಿದ್ಯುತ್‌ ಶಾಕ್‌ನಿಂದ ಲೈನ್‌ಮ್ಯಾನ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿದರಹಳ್ಳಿಯ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಗೊಳಿಸಲಾಗಿದೆ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಹೋಪ್​ ಫಾರ್ಮ್​ ಜಂಕ್ಷನ್ ಬಳಿಯ ಗೋಪಾಲ್ ಕಾಲೊನಿ ನಿವಾಸಿ ಸೌಂದರ್ಯ, ಮಗು ಸುವಿಕ್ಷಾ ಜತೆ ಭಾನುವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದಿದ್ದರು. ವಿದ್ಯುತ್​ ಪ್ರವಹಿಸಿ ಮೃತಪಟ್ಟಿದ್ದರು. ಇದಾದ ಕೆಲವೇ ದಿನಗಳಲ್ಲಿ, ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟರೆ, ಮತ್ತೊಬ್ಬ ಬಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್