AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಸ್ಕಾಂ‌ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್ ಸಾವು, ಚೀಮಸಂದ್ರ ಬಳಿ ದುರ್ಘಟನೆ

ಲೈನ್‌ಮ್ಯಾನ್ ಸಿದ್ದರಾಜು ಮಧ್ಯಾಹ್ನ ಲೈನ್ ಸರಿಪಡಿಸಲು ಹೋಗಿದ್ದರು. ಲೈನ್ ಸರಿಪಡಿಸುವುದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಹೇಳಿದ್ದರು. ಬೆಸ್ಕಾಂ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ, ಸಿದ್ದರಾಜು ಅವರು ದುರಸ್ತಿ ಮಾಡಲಿರುವ ಲೈನ್‌ ಬದಲಾಗಿ ಬೇರೆ ಲೈನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು

ಬೆಂಗಳೂರು: ಬೆಸ್ಕಾಂ‌ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್ ಸಾವು, ಚೀಮಸಂದ್ರ ಬಳಿ ದುರ್ಘಟನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 25, 2023 | 4:08 PM

Share

ಬೆಂಗಳೂರು, ನವೆಂಬರ್ 25: ಬೆಸ್ಕಾಂ (BESCOM) ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್​ ಬಲಿಯಾದ ದುರ್ಘಟನೆ ಬೆಂಗಳೂರು ಪೂರ್ವ ತಾಲೂಕಿನ ಚೀಮಸಂದ್ರ (Cheemasandra) ಬಳಿ ನಡೆದಿದೆ. ಫ್ಯೂಸ್‌ ಬದಲಾವಣೆ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಿದ್ದರಾಜು (32) ಮೃತಪಟ್ಟಿದ್ದಾರೆ. ವಿದ್ಯುತ್ ತಂತಿ ತಗುಲಿ ಮಹಿಳೆ ಮತ್ತು ಮಗು ಮೃತಪಟ್ಟ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಈ ದುರಂತ ಸಂಭವಿಸಿದೆ.

ಲೈನ್‌ಮ್ಯಾನ್ ಸಿದ್ದರಾಜು ಮಧ್ಯಾಹ್ನ ಲೈನ್ ಸರಿಪಡಿಸಲು ಹೋಗಿದ್ದರು. ಲೈನ್ ಸರಿಪಡಿಸುವುದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಹೇಳಿದ್ದರು. ಬೆಸ್ಕಾಂ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ, ಸಿದ್ದರಾಜು ಅವರು ದುರಸ್ತಿ ಮಾಡಲಿರುವ ಲೈನ್‌ ಬದಲಾಗಿ ಬೇರೆ ಲೈನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು ಎಂಬ ಅನುಮಾನ ಇದಿಗ ವ್ಯಕ್ತವಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆಂದು ಕಂಬ ಹತ್ತಿದ್ದ ಲೈನ್‌ಮ್ಯಾನ್, ವಿದ್ಯುತ್‌ ಶಾಕ್‌ನಿಂದ ಲೈನ್‌ಮ್ಯಾನ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿದರಹಳ್ಳಿಯ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಗೊಳಿಸಲಾಗಿದೆ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಹೋಪ್​ ಫಾರ್ಮ್​ ಜಂಕ್ಷನ್ ಬಳಿಯ ಗೋಪಾಲ್ ಕಾಲೊನಿ ನಿವಾಸಿ ಸೌಂದರ್ಯ, ಮಗು ಸುವಿಕ್ಷಾ ಜತೆ ಭಾನುವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದಿದ್ದರು. ವಿದ್ಯುತ್​ ಪ್ರವಹಿಸಿ ಮೃತಪಟ್ಟಿದ್ದರು. ಇದಾದ ಕೆಲವೇ ದಿನಗಳಲ್ಲಿ, ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟರೆ, ಮತ್ತೊಬ್ಬ ಬಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ