AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ?

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ ರೀಲ್ಸ್ ಮಾಡುವ ಮಹಿಳೆಯ ಜೊತೆ ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವಿನ್ ರಿಲೇಷನ್ ಶಿಪ್‌ನಲ್ಲಿದ್ದ ಯುವಕ ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಕೆಯ ಮಾನಸಿಕ ಕಿರುಕುಳವೇ ಈ ಸಾವಿಗೆ ಕಾರಣ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ. ಸದ್ಯ ನಾಪತ್ತೆಯಾಗಿರುವ ಮಹಿಳೆಗಾಗಿ ರಾಜಗೋಪಾಲನಗರ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ?
ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ?
ಭಾವನಾ ಹೆಗಡೆ
|

Updated on: May 09, 2026 | 1:09 PM

Share

ಬೆಂಗಳೂರು, ಮೇ 09: ನಗರದಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದವರು (Live-in Relationship) ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ.

ಮುಖ್ಯಾಂಶಗಳು

  • ರೀಲ್ಸ್ ಮಾಡುವ ಮಹಿಳೆ ಜೊತೆ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವಕ ತಿಪ್ಪೇಸ್ವಾಮಿ ಆತ್ಮಹತ್ಯೆ
  • ಪತಿ-ಮಕ್ಕಳನ್ನು ಬಿಟ್ಟು ಬಂದಿದ್ದ ಮಹಿಳೆಯಿಂದ ಕಿರುಕುಳ ನೀಡುತ್ತಿದ್ದ ಆರೋಪ
  • ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲು

ನಡೆದಿದ್ದೇನು?

ತಿಪ್ಪೇಸ್ವಾಮಿ ಹಾಗೂ ದಾವಣಗೆರೆ ಮೂಲದ ಮಹಿಳೆಯೊಬ್ಬರಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈಕೆ ರೀಲ್ಸ್ ಮಾಡುವುದರಲ್ಲಿ ಸಕ್ರಿಯಳಾಗಿದ್ದು, ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಬಂದಿದ್ದ ಈಕೆ, ಕಳೆದ ಎರಡು ತಿಂಗಳಿನಿಂದ ತಿಪ್ಪೇಸ್ವಾಮಿ ಜೊತೆ ಶ್ರೀಗಂಧನಗರದ ಬಾಡಿಗೆ ಮನೆಯಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದಳು. ಮನೆ ಮಾಲೀಕರಿಗೆ ತಾವು ದಂಪತಿಗಳೆಂದು ಸುಳ್ಳು ಹೇಳಿ ವಾಸವಿದ್ದರು ಎನ್ನಲಾಗಿದೆ.

ಇದನ್ನೂ ಓದಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವತಿ ನೇಣಿಗೆ ಶರಣು! ಪ್ರಿಯಕರನ ಮೇಲಿನ ಅನುಮಾನವೇ ಮುಳುವಾಯ್ತಾ?

ಕಿರುಕುಳದ ಆರೋಪ

ನನ್ನನ್ನು ಮೇಂಟೇನ್ ಮಾಡಲು ನಿನ್ನಿಂದ ಸಾಧ್ಯವಿಲ್ಲ, ನನ್ನನ್ನು ಬಿಟ್ಟು ಹೋಗು ಎಂದು ಮಹಿಳೆ ತಿಪ್ಪೇಸ್ವಾಮಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮನನೊಂದ ತಿಪ್ಪೇಸ್ವಾಮಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಕುಟುಂಬಸ್ಥರು ಮಹಿಳೆಯ ಕಿರುಕುಳವೇ ಸಾವಿಗೆ ನೇರ ಕಾರಣ ಎಂದು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಘಟನೆ ನಡೆದ ಬಳಿಕ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಆಕೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ