AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಮುರುಘಾಶ್ರೀಗೆ ಮತ್ತೊಂದು ಸಂಕಷ್ಟ: ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​​ನಿಂದ ಬಾಡಿ ವಾರಂಟ್‌

ಬೆಂಗಳೂರಿನ ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ ಆರೋಪದಡಿ ವಿಚಾರಣೆಗೆ ಹಾಜರಾಗದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿಗೆ ನ್ಯಾಯಾಲಯ ಬಾಡಿ ವಾರಂಟ್‌ ಜಾರಿ ಮಾಡಿದೆ.

ಚಿತ್ರದುರ್ಗ ಮುರುಘಾಶ್ರೀಗೆ ಮತ್ತೊಂದು ಸಂಕಷ್ಟ: ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​​ನಿಂದ ಬಾಡಿ ವಾರಂಟ್‌
murugha shree, NIA
TV9 Web
| Edited By: ವಿವೇಕ ಬಿರಾದಾರ|

Updated on:Jan 06, 2023 | 5:18 PM

Share

ಬೆಂಗಳೂರು: ಪೋಕ್ಸೋ (PCSO) ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರದುರ್ಗ (Chiradurga) ಮುರುಘಾ ಮಠದ (Murugha Sri) ಶಿವಮೂರ್ತಿ ಸ್ವಾಮೀಜಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ ಪ್ರಕರಣದ ವಿಚಾರಣೆಗೆ ಮುರುಘಾಶ್ರೀ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್‌ ಫೆಬ್ರವರಿ 9 ರಂದು ನ್ಯಾಯಾಲಯದ ಎದುರು ಹಾಜರು ಪಡಿಸುವಂತೆ ಚಿತ್ರದುರ್ಗ ಎಸ್​​​ಪಿ ಕೆ.ಪರಶುರಾಮ್‌ಗೆ ಸೂಚಿಸಿ, ಬಾಡಿ ವಾರಂಟ್‌ ನೀಡಿದೆ.

ಏನಿದು ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ

ತಿಪ್ಪಶೆಟ್ಟಿ ಮಠದ 8 ಕೋಟಿ ಮೌಲ್ಯದ ಆಸ್ತಿಯನ್ನು 49 ಲಕ್ಷ ರೂಪಾಯಿಗಳಿಗೆ ಮಾರಾಮಾಡಲಾಗಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ ಜಮೀನು, ಮಠದ 7 ಎಕರೆ 18 ಗುಂಟೆ ಜಮೀನು ಅಕ್ರಮ ಮಾರಾಟ, ವಂಚನೆ, ವಿಶ್ವಾಸದ್ರೋಹ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2009ರಲ್ಲಿ ಮುರುಘಾಶ್ರೀ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಇದನ್ನೂ ಓದಿ:ಆಸ್ತಿ ಅವ್ಯವಹಾರ ಆರೋಪ: ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಬೆಂಗಳೂರು ಕೋರ್ಟ್

ಸಮನ್ಸ್ ನೀಡಿದರೂ ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು. ಕಲಂ 420, 405, 406, 418ಅಡಿ ಕೇಸ್ ದಾಖಲಾಗಿತ್ತು. ​​ 2 ವರ್ಷದ ಹಿಂದೆ ಮುರುಘಾಶ್ರೀಗಳ ವಿರುದ್ಧ ಪಂಚಾಕ್ಷರಯ್ಯ ಎಂಬುವರು ದೂರು ನೀಡಿದ್ದರು. ಕೋರ್ಟ್​ಗೆ ಹಾಜರಾಗದೇ ಮುರುಘಾ ಶರಣರು ನಿರ್ಲಕ್ಷ್ಯ ತೋರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Fri, 6 January 23

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ