AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಮುರುಘಾಶ್ರೀಗೆ ಮತ್ತೊಂದು ಸಂಕಷ್ಟ: ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​​ನಿಂದ ಬಾಡಿ ವಾರಂಟ್‌

ಬೆಂಗಳೂರಿನ ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ ಆರೋಪದಡಿ ವಿಚಾರಣೆಗೆ ಹಾಜರಾಗದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿಗೆ ನ್ಯಾಯಾಲಯ ಬಾಡಿ ವಾರಂಟ್‌ ಜಾರಿ ಮಾಡಿದೆ.

ಚಿತ್ರದುರ್ಗ ಮುರುಘಾಶ್ರೀಗೆ ಮತ್ತೊಂದು ಸಂಕಷ್ಟ: ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​​ನಿಂದ ಬಾಡಿ ವಾರಂಟ್‌
murugha shree, NIA
TV9 Web
| Edited By: ವಿವೇಕ ಬಿರಾದಾರ|

Updated on:Jan 06, 2023 | 5:18 PM

Share

ಬೆಂಗಳೂರು: ಪೋಕ್ಸೋ (PCSO) ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರದುರ್ಗ (Chiradurga) ಮುರುಘಾ ಮಠದ (Murugha Sri) ಶಿವಮೂರ್ತಿ ಸ್ವಾಮೀಜಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ ಪ್ರಕರಣದ ವಿಚಾರಣೆಗೆ ಮುರುಘಾಶ್ರೀ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್‌ ಫೆಬ್ರವರಿ 9 ರಂದು ನ್ಯಾಯಾಲಯದ ಎದುರು ಹಾಜರು ಪಡಿಸುವಂತೆ ಚಿತ್ರದುರ್ಗ ಎಸ್​​​ಪಿ ಕೆ.ಪರಶುರಾಮ್‌ಗೆ ಸೂಚಿಸಿ, ಬಾಡಿ ವಾರಂಟ್‌ ನೀಡಿದೆ.

ಏನಿದು ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ

ತಿಪ್ಪಶೆಟ್ಟಿ ಮಠದ 8 ಕೋಟಿ ಮೌಲ್ಯದ ಆಸ್ತಿಯನ್ನು 49 ಲಕ್ಷ ರೂಪಾಯಿಗಳಿಗೆ ಮಾರಾಮಾಡಲಾಗಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ ಜಮೀನು, ಮಠದ 7 ಎಕರೆ 18 ಗುಂಟೆ ಜಮೀನು ಅಕ್ರಮ ಮಾರಾಟ, ವಂಚನೆ, ವಿಶ್ವಾಸದ್ರೋಹ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2009ರಲ್ಲಿ ಮುರುಘಾಶ್ರೀ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಇದನ್ನೂ ಓದಿ:ಆಸ್ತಿ ಅವ್ಯವಹಾರ ಆರೋಪ: ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಬೆಂಗಳೂರು ಕೋರ್ಟ್

ಸಮನ್ಸ್ ನೀಡಿದರೂ ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು. ಕಲಂ 420, 405, 406, 418ಅಡಿ ಕೇಸ್ ದಾಖಲಾಗಿತ್ತು. ​​ 2 ವರ್ಷದ ಹಿಂದೆ ಮುರುಘಾಶ್ರೀಗಳ ವಿರುದ್ಧ ಪಂಚಾಕ್ಷರಯ್ಯ ಎಂಬುವರು ದೂರು ನೀಡಿದ್ದರು. ಕೋರ್ಟ್​ಗೆ ಹಾಜರಾಗದೇ ಮುರುಘಾ ಶರಣರು ನಿರ್ಲಕ್ಷ್ಯ ತೋರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Fri, 6 January 23

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ