ಬೆಂಗಳೂರು ಮಹಾಲಕ್ಷ್ಮೀ ಕೊಲೆ: ಸಾವಿನ ಮನೆಯಲ್ಲಿ ಹಲವರ ಬೆರಳಚ್ಚು ಗುರುತು ಪತ್ತೆ, ಹೊರ ರಾಜ್ಯಗಳಲ್ಲೂ ಪೊಲೀಸರ ತಲಾಶ್​

|

Updated on: Sep 25, 2024 | 7:53 AM

Bengaluru Mahalaxmi Murder Case: ದೆಹಲಿ ಶ್ರದ್ಧಾ ಕೊಲೆ ಮಾದರಿಯಲ್ಲಿ ಬೆಂಗಳೂರಿನಲ್ಲೂ ನಡೆದಿದೆ. ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 50ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಮಹಾಲಕ್ಷ್ಮೀಯನ್ನು ಕೊಲೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹಲವು ವಿಚಾರಗಳು ತಿಳಿದಿವೆ.

ಬೆಂಗಳೂರು ಮಹಾಲಕ್ಷ್ಮೀ ಕೊಲೆ: ಸಾವಿನ ಮನೆಯಲ್ಲಿ ಹಲವರ ಬೆರಳಚ್ಚು ಗುರುತು ಪತ್ತೆ, ಹೊರ ರಾಜ್ಯಗಳಲ್ಲೂ ಪೊಲೀಸರ ತಲಾಶ್​
ಕೊಲೆಯಾದ ಮಹಾಲಕ್ಷ್ಮೀ
Follow us on

ಬೆಂಗಳೂರು, ಸೆಪ್ಟೆಂಬರ್​ 25: ಬೆಂಗಳೂರು ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ (Bengaluru Mahalaxmi Murder Case)​ ಪ್ರಕರಣದ ತನಿಖೆ ಚುರುಕುಗೊಂಡಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಹಲವು ತಂಡಗಳನ್ನು ರಚಿಸಿಕೊಂಡು ಹುಡುಕಾಟ ನಡೆಸಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಹೊರ ರಾಜ್ಯಗಳಲ್ಲಿ ಹುಡುಕಾಟ ನಡೆಸುತ್ತಿರುವಾಗಲೇ ಹಲವು ವಿಚಾರಗಳು ಬಹಿರಂಗಗೊಂಡಿವೆ.

ಮಹಾಲಕ್ಷ್ಮೀಯನ್ನು 50 ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿ ಇಟ್ಟು, ಆರೋಪಿ ಪರಾರಿಯಾಗಿದ್ದಾನೆ. ಕೊಲೆಯಾದ ಮಹಾಲಕ್ಷ್ಮೀ ಮನೆಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಆರೋಪಿಯ ಗುರುತಿಗಾಗಿ ಶೋಧ ನಡೆಸಿದಾಗ ಹಲವರ ಬೆರಳಚ್ಚು ಗುರುತು ಪತ್ತೆಯಾಗಿವೆ. ಈ ಮೂಲಕ, ಮಹಾಲಕ್ಷ್ಮೀಯನ್ನು ಹಲವರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ.

ಈ ನಡುವೆ ಮಹಾಲಕ್ಷ್ಮಿಯ ತಾಯಿ ಮೀನಾ ಕೊಟ್ಟಿರುವ ದೂರಿನಲ್ಲಿ ಹಲವು ಸಂಗತಿಗಳು ಬಯಲಾಗಿವೆ. ಮೀನಾ ಅವರಿಗೆ ನಾಲ್ವರು ಮಕ್ಕಳು. ಈ ಪೈಕಿ ಮೊದಲ ಮಗಳು ಲಕ್ಷ್ಮೀ. ಲಕ್ಷ್ಮೀ, ಸೈಯದ್ ಇಮ್ರಾನ್ ಎಂಬುವುರ ಜೊತೆ ಲವ್ ಮ್ಯಾರೇಜ್ ಆಗಿದ್ದು, ಶಾಹೀದಾ ಬುಷುರ ಅಂತ ಹೆಸರು ಬದಲಿಸಿಕೊಂಡಿದ್ದಾಳೆ.

ಇದನ್ನೂ ಓದಿ: FSL​ ತಜ್ಞರಿಗೆ ತಲೆನೋವಾದ ಬೆಂಗಳೂರು ಮಹಾಲಕ್ಷ್ಮೀ ಕೊಲೆ, ಪತ್ತೆಯಾಗದ ರಕ್ತದ ಕಲೆ!

ಕೊಲೆಯಾದ ಈ ಮಹಾಲಕ್ಷ್ಮೀ ಎರಡನೇ ಮಗಳು. ಹೇಮಂತ್ ದಾಸ್ ಎಂಬುವುರ ಜೊತೆ ಅರೇಂಜ್ಡ್​ ಮ್ಯಾರೆಜ್​ ಆಗಿದ್ದರು. ಮೂರನೇಯವನು ಮಗ ಉಕ್ಕುಂ ಸಿಂಗ್, ಡೆಲಿವರಿ ಬಾಯ್ ಆಗಿದ್ದಾರೆ. ನಾಲ್ಕನೆಯವನು ನರೇಶ್, ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮೀ ಕಳೆದ ಒಂಬತ್ತು ತಿಂಗಳಿನಿಂದ ಪತಿಯಿಂದ ದೂರವಿದ್ದಳು. ಕಳೆದ ವರ್ಷ ಅಕ್ಟೋಬರ್​ನಲ್ಲಿ ವೈಯಾಲಿಕಾವಲ್​ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದಳು. ಉಕ್ಕುಂ ಸಿಂಗ್ ಮತ್ತು ಆತನ ಪತ್ನಿ ಹಾಗೂ ಮಹಾಲಕ್ಷ್ಮೀ ಒಟ್ಟಿಗೆ ಇದ್ದರು. ಅಕ್ಕ ಮಹಾಲಕ್ಷ್ಮೀ, ತನ್ನ ಪತ್ನಿ ಜೊತೆ ಜಗಳವಾಡುತ್ತಿದ್ದಳು ಅಂತ ಉಕ್ಕುಂ ಸಿಂಗ್​ ಬೇರೆ ಮನೆಗೆ ಮಾಡಿದರು. ಹೀಗೆ ಗಂಡನ ಜೊತೆಗಿನ ಜಗಳ, ಸಹೋದರನ ಜೊತೆಗಿನ ಮುನಿಸು, ಮನೆ ಬಿಟ್ಟು ಹೋಗಿದ್ದು ಎಲ್ಲವೂ ಬಯಲಾಗಿದೆ.

ಆದರೆ, ಬೆಂಗಳೂರು ಪೊಲೀಸ್​ ಆಯುಕ್ತ ಬಿ. ದಯಾನಂದ ಅವರು ಹೇಳುವ ಪ್ರಕಾರ ಆರೋಪಿ ಹೊರ ರಾಜ್ಯದವನಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದನಂತೆ. ಆರೋಪಿ, ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಈ ಕೊಲೆ ಮಾಡಿದ್ದು ಒಬ್ಬನ್ನಾ ಅಥವಾ ಇಬ್ಬರಾ ಎಂಬವುದು ಪೊಲೀಸ್​ ತನಿಖೆಯಿಂದ ಗೊತ್ತಾಗಲಿದೆ.

-ಪ್ರದೀಪ್ ಚಿಕ್ಕಾಟಿ ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:49 am, Wed, 25 September 24