AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂ, ಓರ್ವನ ಕಾಲು ಮುರಿತ!

ಬೆಂಗಳೂರಿನ ಮಹದೇವಪುರದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿ ಮಹೀಂದ್ರಾ ಶೋರೂಂ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಚಾಲಕ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಓರ್ವನ ಕಾಲು ಮುರಿದಿದೆ. ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂ, ಓರ್ವನ ಕಾಲು ಮುರಿತ!
ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂImage Credit source: tv9
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Apr 17, 2026 | 10:50 AM

Share

ಬೆಂಗಳೂರು, ಏಪ್ರಿಲ್ 17: ಶೋರೂಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಟೆಸ್ಟ್ ಡ್ರೈವ್ ವೇಳೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರಿನ (Bangalore) ಮಹದೇವಪುರದಲ್ಲಿ ನಡೆದಿದೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿಗೆ ಕಾರು ಚಲಾಯಿಸಲು ನೀಡಿದ್ದೇ ಈ ಅನಾಹುತಕ್ಕೆ ಕಾರಣವಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬೆಂಗಳೂರಿನ ಮಹದೇವಪುರದ ವಿಜ್ಞೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ. ಕುಡಿದು ಬಂದು ಟೆಸ್ಟ್ ಡ್ರೈವ್​ಗೆ (Test Drive) ಕಾರು ಕೊಂಡುಹೋದ ವ್ಯಕ್ತಿ ನಾಲ್ಕು ವಾಹನಗಳಿಗೆ ಗುದ್ದಿಸಿ ಹಾನಿ ಮಾಡಿದ್ದಾನೆ.

ಮದ್ಯಪಾನಿಯ ಟೆಸ್ಟ್ ಡ್ರೈವ್ ಘಟನೆಯ ವಿವರ

ಮಹದೇವಪುರದ ವಿಜ್ಞೇಶ್ವರ ನಗರದಲ್ಲಿರುವ ಮಹೀಂದ್ರಾ ಕಾರು ಶೋರೂಂಗೆ ಏಪ್ರಿಲ್ 12ರಂದು ಅಭಿಲಾಷ್ ಎಂಬಾತ ಕಾರು ಖರೀದಿಸುವ ಉದ್ದೇಶದಿಂದ ತೆರಳಿದ್ದ. ಆದರೆ, ಆತ ಮದ್ಯ ಸೇವಿಸಿರುವುದು ತಿಳಿದಿದ್ದರೂ ಶೋರೂಂ ಸಿಬ್ಬಂದಿ ಆತನಿಗೆ ಟೆಸ್ಟ್ ಡ್ರೈವ್ ಮಾಡಲು ಕಾರನ್ನು ನೀಡಿದ್ದಾರೆ. ಕಾರು ಹತ್ತಿದ ಅಭಿಲಾಷ್ ಮದ್ಯದ ಅಮಲಿನಲ್ಲಿ ಮನಸೋ ಇಚ್ಛೆ ವಾಹನ ಚಲಾಯಿಸಿದ್ದಾನೆ. ಈ ವೇಳೆ ರಸ್ತೆಯಲ್ಲಿದ್ದ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ಸರಣಿ ಅಪಘಾತದ ವಿಡಿಯೋ ಇಲ್ಲಿದೆ ನೋಡಿ

ಅಭಿಲಾಷ್ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ರಮೇಶ್ ಎಂಬುವವರ ಕಾಲು ಮುರಿದಿದ್ದು, ಅವರು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಬಳಿಕ ಆಕ್ರೋಶಗೊಂಡ ಸ್ಥಳೀಯರು ಆರೋಪಿ ಅಭಿಲಾಷ್‌ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಾಯಗೊಂಡಿರುವ ಅಭಿಲಾಷ್ ಕೂಡ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ: ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಮಗಳೂರಿನ 8 ಮಂದಿ ಭಕ್ತರು ಸಾವು

ಮಹದೇವಪುರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಜಾಗರೂಕ ಚಾಲನೆ ಹಾಗೂ ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತಂದೊಡ್ಡಿದ ಹಿನ್ನೆಲೆಯಲ್ಲಿ ಬಿಎನ್ಎಸ್ (BNS) ಸೆಕ್ಷನ್ 125(a), 281 ಹಾಗೂ ಐಎಂವಿ ಆಕ್ಟ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮದ್ಯಪಾನ ಮಾಡಿದ ವ್ಯಕ್ತಿಗೆ ಟೆಸ್ಟ್ ಡ್ರೈವ್ ಮಾಡಲು ಅವಕಾಶ ನೀಡಿದ ಶೋರೂಂ ಸಿಬ್ಬಂದಿಯ ನಡೆ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್
ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್
ಕೆಲಸ ಕಳೆದುಕೊಂಡ ಸ್ನೇಹಿತನಿಗೆ ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟ
ಕೆಲಸ ಕಳೆದುಕೊಂಡ ಸ್ನೇಹಿತನಿಗೆ ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟ
ದೇವರಂತಿರಬೇಕಾದ ವೈದ್ಯನಿಂದಲೇ ವೃದ್ಧ ರೋಗಿ ಮೇಲೆ ಮಾರಣಾಂತಿಕ ಹಲ್ಲೆ
ದೇವರಂತಿರಬೇಕಾದ ವೈದ್ಯನಿಂದಲೇ ವೃದ್ಧ ರೋಗಿ ಮೇಲೆ ಮಾರಣಾಂತಿಕ ಹಲ್ಲೆ
ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ?
ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ?
ಇಂದು ಈ ರಾಶಿಯವರು ಕಡಿಮೆ ಚರ್ಚೆ ಮಾಡಿದರೆ ಒಳಿತು
ಇಂದು ಈ ರಾಶಿಯವರು ಕಡಿಮೆ ಚರ್ಚೆ ಮಾಡಿದರೆ ಒಳಿತು
ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ!
ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ!
ಧ್ರುವ ಸರ್ಜಾ, ದರ್ಶನ್ ಮುನಿಸಿಗೆ ಕಾರಣ ಏನು? ಮಾಜಿ ಮ್ಯಾನೇಜರ್​ಗೆ ಪ್ರಶ್ನೆ
ಧ್ರುವ ಸರ್ಜಾ, ದರ್ಶನ್ ಮುನಿಸಿಗೆ ಕಾರಣ ಏನು? ಮಾಜಿ ಮ್ಯಾನೇಜರ್​ಗೆ ಪ್ರಶ್ನೆ
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ