AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ”: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರಿನ ನೆಕ್ಸಸ್ ಮಾಲ್ ಗರ್ಭಿಣಿಯರಿಗಾಗಿ ವಿಶೇಷ ಗುಲಾಬಿ ಥೀಮ್ ಪಾರ್ಕಿಂಗ್ ವ್ಯವಸ್ಥೆ ಮಾಡಿದೆ. ಇದು ಮಾಲ್‌ನ ದಟ್ಟಣೆಯಂದ  ತಾಯಂದಿರು ತಪ್ಪಿಸಿಕೊಳ್ಳಲು ಹಾಗೂ ಸುರಕ್ಷತೆಯನ್ನು ಕಲ್ಪಿಸುತ್ತದೆ. ಅಕ್ಷಯ್ ರೈನಾ ಹಂಚಿಕೊಂಡ ಈ ವಿಡಿಯೋ ವೈರಲ್ ಆಗಿದ್ದು, ಮಾಲ್‌ನ ಈ ಪರಿಕಲ್ಪನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಇಂತಹ ವ್ಯವಸ್ಥೆಯನ್ನು ಇತರ ಮಾಲ್‌ಗಳೂ ಅಳವಡಿಸಿಕೊಳ್ಳಬೇಕೆಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Dec 27, 2025 | 3:07 PM

Share

ಬೆಂಗಳೂರು , ಡಿ.27: ಗರ್ಭಿಣಿಯರಿಗೆ (pregnant women) ಮೀಸಲಾದ ಪಾರ್ಕಿಂಗ್ ಸ್ಥಳದ ಒಂದು ವಿಡಿಯೋವನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಮಾಲ್​​​ವೊಂದರಲ್ಲಿ ಈ ದೃಶ್ಯ ಕಂಡು ಬಂದಿದೆ. ಮಹಿಳೆಯರಿಗಾಗಿ, ಅದರಲ್ಲೂ ಗರ್ಭಿಣಿಯರಿಗೆ ಈ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಮಾಲ್​​ನ ಈ ಪರಿಕಲ್ಪನೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಾಲ್​​​ನ ಪಾರ್ಕಿಂಗ್ ಪ್ರದೇಶದಲ್ಲಿ ಒಂದು ಸಣ್ಣದಾಗಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಅಕ್ಷಯ್ ರೈನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದು “ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ” ಎಂಬ ಬೋರ್ಡ್​​ನ್ನು ಕೂಡ ಈ ಪಾರ್ಕಿಂಗ್​ ಸ್ಥಳದಲ್ಲಿ ಹಾಕಲಾಗಿದೆ. ಗುಲಾಬಿ ಥೀಮ್‌ ಮೂಲಕ ಈ ಪಾರ್ಕಿಂಗ್​​ ಸ್ಥಳವನ್ನು ವಿನ್ಯಾಸ ಮಾಡಲಾಗಿದೆ. ಇದು ತುಂಬಾ ವಿಶೇಷವಾಗಿ ಕಂಡು ಬಂದಿದೆ. ದೊಡ್ಡ ಶಾಪಿಂಗ್ ಮಾಲ್​​ನಲ್ಲಿ ಜನ ಹಾಗೂ ವಾಹನ ದಟ್ಟಣೆ ಇರುವುದು ಸಹಜ. ಇದರಿಂದ ಗರ್ಭಿಣಿಯರಿಗೆ ಯಾವುದೇ ತೊಂದರೆ ಆಗಬಾರದು ಎಂದು ಈ ವ್ಯವಸ್ಥೆಯನ್ನು ಮಾಡಲಾಗಿದೆ. ಪಿಂಕ್​​ ಕಲರ್​​​ನಿಂದ ಈ ಪಾರ್ಕಿಂಗ್​​ ಸ್ಥಳವನ್ನು ಅಲಂಕಾರ ಮಾಡಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ದೃಶ್ಯದ ಬಗ್ಗೆ ಅಕ್ಷಯ್ ರೈನಾ ಅದ್ಭುತವಾಗಿ ವಿವರಿಸಿದ್ದಾರೆ. “ತುಂಬಾ ಒಳ್ಳೆಯ ಪರಿಕಲ್ಪನೆ ಮತ್ತು ನನಗೆ ಅದು ತುಂಬಾ ಇಷ್ಟವಾಯಿತು. ಈ ದೃಶ್ಯ ಕಂಡು ಬಂದದ್ದು ನೆಕ್ಸಸ್ ಮಾಲ್​​ನಲ್ಲಿ, ಸಾಂಪ್ರದಾಯಿಕ ಸೌಲಭ್ಯಗಳನ್ನು ಮೀರಿ ಯೋಚಿಸಿದ್ದಕ್ಕಾಗಿ ಮಾಲ್ ಆಡಳಿತ ಮಂಡಳಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ. ಮಹಿಳೆಯರಿಗೆ, ವಿಶೇಷವಾಗಿ ತಾಯಂದಿರಿಗೆ ಪ್ರತ್ಯೇಕ ಸ್ಥಳವನ್ನು ಇಟ್ಟುಕೊಂಡಿರುವ ಬೆಂಗಳೂರಿನ ನೆಕ್ಸಸ್‌ಮಾಲ್‌ಗಳಿಗೆ ಹ್ಯಾಟ್ಸ್ ಆಫ್. ಭಾರತದ ಇತರ ಎಲ್ಲಾ ಮಾಲ್‌ಗಳು ಇದನ್ನು ಜಾರಿಗೆ ತರಬೇಕು ಎಂದು ಈ ವಿಡಿಯೋದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಅನೇಕರು ಈ ವಿಡಿಯೋವನ್ನು ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ತುಂಬಾ ಸಹಾಯಕವಾಗಿದೆ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಇದು ಮಾಲ್‌ಗಳ ಜನದಟ್ಟಣೆ ಮತ್ತು ಗೊಂದಲಮಯ ಪಾರ್ಕಿಂಗ್‌ನಲ್ಲಿ ಬಹಳ ಅವಶ್ಯಕವಾದ ಸ್ಥಳವಾಗಿದೆ, ಇದರಿಂದಾಗಿ ತಾಯಂದಿರು ತಮ್ಮ ವಾಹನವನ್ನು ಸುಲಭವಾಗಿ ನಿಲ್ಲಿಸಿ ಮಾಲ್‌ಗೆ ಸುಲಭವಾಗಿ ಹೋಗಬಹುದು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದು ನೋಡಲು ತುಂಬಾ ಹೃದಯಸ್ಪರ್ಶಿಯಾಗಿದೆ ಎಂದು ಇನ್ನೊಬ್ಬರು ಕಮೆಂಟ್​​ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ