AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಂತೆ ಕಂತೆ ಹಣ ತೋರಿಸಿ, ಹಣ ಡಬಲ್ ಮಾಡುವ ಆಸೆ ಹುಟ್ಟಿಸಿ ವಂಚನೆ ಮಾಡ್ತಿದ್ದವ ಅರೆಸ್ಟ್

ಕಂತೆ ಕಂತೆ ಹಣ ತೋರಿಸಿ ಟ್ರೇಡಿಂಗ್ ಹೆಸರಿನಲ್ಲಿ ಅಮಾಯಕರನ್ನು ವಂಚಿಸುತ್ತಿದ್ದ ವಂಚಕನನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಂಚಕ ಕಿಶನ್, ಇದೇ ರೀತಿ ನೂರಾರು ಜನರನ್ನು ನಂಬಿಸಿ ವಂಚನೆ ಮಾಡಿದ್ದಾನೆ. ಸುಮಾರು 80-100 ಕೋಟಿಗೂ ಹೆಚ್ಚು ಹಣ ಪಡೆದು ವಂಚನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಕಂತೆ ಕಂತೆ ಹಣ ತೋರಿಸಿ, ಹಣ ಡಬಲ್ ಮಾಡುವ ಆಸೆ ಹುಟ್ಟಿಸಿ ವಂಚನೆ ಮಾಡ್ತಿದ್ದವ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on: Mar 06, 2024 | 7:53 AM

Share

ಬೆಂಗಳೂರು, ಮಾರ್ಚ್.06: ವಿಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ವಂಚಿಸುತ್ತಿದ್ದವನನ್ನ ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಂಚಕ (Cheating) ಕಿಶನ್ ಅಲಿಯಾಸ್ ಮಾಕಳಿ ಕಿಶನ್ ಬಂಧಿತ ಆರೋಪಿ. ಈ ಆರೋಪಿ ಟ್ರೇಡಿಂಗ್ (Treading) ಹೆಸರಿನಲ್ಲಿ ಅಮಾಯಕರಿಗೆ ಬಲೆ ಬೀಸಿ ಲಕ್ಷ ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾನೆ. ನೂರಾರು ಜನ ಇತನನ್ನು ನಂಬಿ ಹಣ ಕಳೆದುಕೊಂಡಿದ್ದಾರೆ (Money Double).

ವಂಚಕ ಕಿಶನ್ ಕಂತೆ ಕಂತೆ ಹಣದ ವಿಡಿಯೋ ಕಳಿಸಿ ನೀವು ಮಾಡಿದ​ ಹೂಡಿಕೆ ಹಣಕ್ಕೆ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಜನರನ್ನು ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಬಳಿಕ ಅವರಿಂದ ಲಕ್ಷ ಲಕ್ಷ ಹಣ ಪಡೆದು ಮೋಸ ಮಾಡುತ್ತಿದ್ದ. ಸದ್ಯ ಗುಣನಿಧಿ ಎಂಬುವರ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 15.15 ಲಕ್ಷ ಹಣ ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ್ದಾನೆ ಎಂದು ಗುಣನಿಧಿಯವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಜೊತೆಗೆ ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್, ಫೋಟೋ ವೈರಲ್​​

ಸ್ನೇಹಿತ ಗೌತಮ್ ಮೂಲಕ ಗುಣನಿಧಿ ಅವರಿಗೆ ವಂಚಕ ಕಿಶನ್ ಪರಿಚಯವಾಗಿತ್ತು. ಲೋನ್​ ಮಾಡಿ ಹಣ ಕೊಡಿಸು ಅದನ್ನು ಹೂಡಿಕೆ ಮಾಡಿ ಲಾಭಾಂಶ ನೀಡುವೆ ಎಂದು ನಂಬಿಸಿ ಲೋನ್​ಗಾಗಿ ಬ್ರೋಕರ್ ವೆಂಕಟೇಶ್ ಸಂಪರ್ಕಿಸುವಂತೆ ಕಿಶನ್ ತಿಳಿಸಿದ್ದ. ಬ್ರೋಕರ್ ವೆಂಕಟೇಶ್ ದಾಖಲೆ ಪಡೆದು ಬ್ಯಾಂಕ್​ನಿಂದ ಲೋನ್ ಕೊಡಿಸಿದ್ದರು. ಲೋನ್ ಅಮೌಂಟ್ RTGS ಮೂಲಕ ಕಿಶನ್ ಅಕೌಂಟ್​ಗೆ ವರ್ಗಾವಣೆಯಾಗಿತ್ತು. ಬ್ಯಾಂಕ್ ಲೋನ್ EMI ತಾನೇ ಪಾವತಿಸುವುದಾಗಿ ಕಿಶನ್ ನಂಬಿಸಿದ್ದ. ಮೊದಲ 5-6 EMI ಪಾವತಿಸಿದ್ದ ಕಿಶನ್, ಒಂದೇ ವರ್ಷಕ್ಕೆ ಲೋನ್ ಕ್ಲಿಯರ್ ಮಾಡಿ ಪ್ರಾಫಿಟ್ ನೀಡುವ ಆಮಿಷವೊಡ್ಡಿದ್ದ. ಆದರೆ ಯಾವುದೇ ಲಾಭ ನೀಡದೆ ಹಣ ಪಡೆದು ವಂಚನೆ ಮಾಡಿದ್ದಾನೆ.

ವಂಚಕ ಕಿಶನ್, ಇದೇ ರೀತಿ ನೂರಾರು ಜನರನ್ನು ನಂಬಿಸಿ ವಂಚನೆ ಮಾಡಿದ್ದಾನೆ. ಸುಮಾರು 80-100 ಕೋಟಿಗೂ ಹೆಚ್ಚು ಹಣ ಪಡೆದು ವಂಚನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಿಂಗ್ ರಿಯಲ್ ಎಸ್ಟೇಟ್ ಕಂಪನಿ ನಡೆಸುತ್ತಿರುವ ವಂಚಕ ಕಿಶನ್​ಗೆ ಹಣ ವಾಪಸ್ ಕೇಳಿದರೆ ಗನ್ ತೋರಿಸಿ ಬೆದರಿಸುತ್ತಿರುವ ಆರೋಪ ಕೇಳಿ ಬಂದಿದೆ. ಹೂಡಿಕೆದಾರರು ಜೀವ ಭಯದಿಂದ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ವಂಚನೆಗೊಳಗಾದವರು ಬಂದು ದೂರು ನೀಡುವಂತೆ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲ್ ಅಡಾವತ್ ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್