ಬೆಂಗಳೂರು: ಕಾರಿಗೆ ಮಳೆ ನೀರು ಹಾರಿದ್ದಕ್ಕೆ ಮಾಂಸ ಹೊರಬರುವಂತೆ ಬೆರಳು ಕಚ್ಚಿ ವಿಕೃತಿ ಮೆರೆದ ವ್ಯಕ್ತಿ

ಕಾರಿಗೆ ಮಳೆ ನೀರು ಹಾರಿದ್ದಕ್ಕೆ ವ್ಯಕ್ತಿಯೊಬ್ಬನಿಂದ ಚಾಲಕನ ಬೆರಳು ಕಚ್ಚಿ ವಿಕೃತಿ ಮೆರೆದಿರುವಂತಹ ಘಟನೆ ಮೇ 25ರ ರಾತ್ರಿ ಲುಲು ಮಾಲ್ ಅಂಡರ್ ಪಾಸ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯಿಂದ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಬೆರಳು ಕಚ್ಚಿ ಗಾಯ ಮಾಡಲಾಗಿದೆ. ಮಾಗಡಿ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕಾರಿಗೆ ಮಳೆ ನೀರು ಹಾರಿದ್ದಕ್ಕೆ ಮಾಂಸ ಹೊರಬರುವಂತೆ ಬೆರಳು ಕಚ್ಚಿ ವಿಕೃತಿ ಮೆರೆದ ವ್ಯಕ್ತಿ
ಹಲ್ಲೆ ಮಾಡಿದ ವ್ಯಕ್ತಿ

Updated on: May 29, 2025 | 2:20 PM

ಬೆಂಗಳೂರು, ಮೇ 29: ರಾಜ್ಯದಲ್ಲಿ ಮಳೆಯ (rain) ಆರ್ಭಟ ಮುಂದುವರಿದೆ. ಇತ್ತ ಸಿಲಿಕಾನ್​ ಸಿಟಿಯಲ್ಲಿ ಕೂಡ ಮೋಡ ಕವಿದ ವಾತಾವರಣವಿದ್ದು, ಆಗಾಗ ವರುಣ ದೇವ ಎಂಟ್ರಿ ಕೊಡುತ್ತಿದ್ದಾನೆ. ಮಳೆಯಿಂದಾಗಿ ಕೆಲ ರಸ್ತೆಗಳು ಕೆರೆಯಂತಾಗಿವೆ. ವಾಹನಗಳ ಸಂಚಾರದಿಂದ ಇತರೆ ಸವಾರರ ಮೇಲೆ ನೀರು ಹಾರುತ್ತೆ. ಆದರೆ ಇಲ್ಲೊಬ್ಬ ವ್ಯಕ್ತಿ ಕಾರಿಗೆ ಮಳೆ ನೀರು ಹಾರಿದ್ದಕ್ಕೆ ಚಾಲಕನ ಬೆರಳು ಕಚ್ಚಿ (finger Bite) ವಿಕೃತಿ ಮೆರೆದಿರುವಂತಹ ಘಟನೆ ಮೇ 25ರ ರಾತ್ರಿ ಲುಲು ಮಾಲ್ ಅಂಡರ್ ಪಾಸ್ ಬಳಿ ನಡೆದಿದೆ.

ವ್ಯಕ್ತಿಯೊಬ್ಬನಿಂದ ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಬೆರಳು ಕಚ್ಚಿ ಗಾಯ

ಮೆಜೆಸ್ಟಿಕ್​ನಿಂದ ಲುಲು ಮಾಲ್ ಕಡೆ ಜಯಂತ್ ದಂಪತಿಗಳು ತೆರಳುತ್ತಿದ್ದರು. ಈ ವೇಳೆ ಓಕುಳಿಪುರಂ ಅಂಡರ್ ಪಾಸ್​ನಲ್ಲಿ ನಿಂತಿದ್ದ ನೀರು ಪಕ್ಕದ ಕಾರಿಗೆ ಹಾರಿದೆ. ಕೂಡಲೇ ಕಾರು ನಿಲ್ಲಿಸಿದ ಚಾಲಕ ಅವಾಚ್ಯ  ಪದಗಳಿಂದ ಜಯಂತ್​ರನ್ನು ನಿಂದಿಸಿದ್ದಾನೆ. ಈ ಬಗ್ಗೆ ವ್ಯಕ್ತಿ ಕ್ಷಮೆ ಕೇಳಿದ್ದರೂ ಬಿಟ್ಟಿಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡ್ಯಾನ್ಸ್ ಮಾಸ್ಟರ್​ನಿಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

KA02 MT0512 I20 ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿ, ಮೆಜೆಸ್ಟಿಕ್ ಅಂಡರ್ ಪಾಸ್ ಬಳಿಯಿಂದ ಲುಲು ಮಾಲ್ ಅಂಡರ್ ಪಾಸ್​ವರೆಗೂ ಜಯಂತ್​​​ ಕಾರು ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿದ್ದಾನೆ. ಬಳಿಕ ಕಾರ್​ ನಲ್ಲಿದ್ದ ಜಯಂತ್​ರನ್ನು ಎಳೆದಾಡಿ ಮುಖಕ್ಕೆ ಗುದ್ದಿ ಹಲ್ಲೆ ಮಾಡುವ ಮೂಲಕ ರೌಡಿಸಂ ಮಾಡಿದ್ದಾನೆ. ಅಷ್ಟೇ ಅಲ್ಲದೆ ಬಲಗೈನ ಉಂಗುರದ ಬೆರಳನ್ನ ಕಚ್ಚಿ ಮಾಂಸ ಕಾಣುವಂತೆ ಗಾಯ ಮಾಡಿದ್ದಾನೆ.

2 ಲಕ್ಷ ರೂ ಆಸ್ಪತ್ರೆ ಬಿಲ್

ಬಲಗೈ ಬೆರಳಿನ ಮಾಂಸ ಹೊರಬಂದಿದ್ದರಿಂದ ಜಯಂತ್​​ ಸರ್ಜರಿಗೊಳಗಾಗಿದ್ದು, ವೈದ್ಯರು ಐದು ಸ್ಟಿಚ್ ಹಾಕಿದ್ದಾರೆ. ಜೊತೆಗೆ 6 ತಿಂಗಳು ವಿಶ್ರಾಂತಿ ಮಾಡುವಂತೆ ಸಲಹೆ ನೀಡಿದ್ದಾರೆ. ಆದರೆ ತನ್ನದಲ್ಲದ ತಪ್ಪಿಗೆ ಜಯಂತ್ 2 ಲಕ್ಷ ರೂ ಆಸ್ಪತ್ರೆ ಬಿಲ್ ಕಟ್ಟಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ

ಸದ್ಯ ಘಟನೆ ಸಂಬಂಧ ಮಾಗಡಿ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರಿನಲ್ಲಿದ್ದ ಚಾಲಕ ಮತ್ತು ಮಹಿಳೆ ವಿರುದ್ದ ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಪ್ರತಿದೂರು ದಾಖಲಾಗಿಲ್ಲ. ಕಾರ್ ನಂಬರ್ ಮೂಲಕ ಆರೋಪಿ ಹುಡುಕಾಟ ನಡೆಸಿದ್ದಾರೆ.

ಗಾಯಾಳು ಜಯಂತ್ ಹೇಳಿದ್ದಿಷ್ಟು 

ಹಲ್ಲೆ ಸಂಬಂಧ ಗಾಯಾಳು ಜಯಂತ್ ಪ್ರತಿಕ್ರಿಯಿಸಿದ್ದು, ಮೊನ್ನೆ ಶೇಷಾದ್ರಿಪುರಂನಲ್ಲಿ ತಿಂಡಿ ತಿನ್ನೋಣ ಅಂತ ಹೋಗಿದ್ದೇವು. ಮಳೆ ಬರುವಾಗ ಮಳೆ ನೀರು ಕಾರಿನಲ್ಲಿದ್ದ ಮೇಡಂ ಮುಖಕ್ಕೆ ಹಾರಿದೆ. ಅವರ ಗಂಡ ಸ್ಟೀಡ್ ಆಗಿ ಯಾಕೆ ಹೋಗುತ್ತೀರಾ ಅಂದರು. ಆ ವೇಳೆ ನಾನು ಸ್ವಾರಿ ಮೇಡಂ, ಕಾರು ಗ್ಲಾಸ್ ಹಾಕಿಕೊಳ್ಳಿ ಅಂದೆ. ಆದರೆ ಅವರು ಹಿಂಭಾಲಿಸಿಕೊಂಡು ಬಂದು ಗಾಡಿ ಸೈಡಿಗೆ ಹಾಕಿ ಅಂದರು. ಈ ವೇಳೆ ನಾನು ನೀವು ಗ್ಲಾಸ್ ಹಾಕಿಕೊಂಡು ಹೋಗಿ ಅಂದೆ. ಇಬ್ಬರು ಇಳಿದು ಬಂದು ಬೈಯೋದಕ್ಕೆ ಶುರು ಮಾಡಿದರು ಎಂದರು.

ಗಂಡ ಬಂದು ನನ್ನ ಹೆಂಡತಿ ಹತ್ತಿರ ಏನು ಮಾತನಾಡುತ್ತೀಯಾ ಅಂತ ಕೆನ್ನೆಗೆ ಹೊಡೆದರು. ಅದಕ್ಕೆ ನಾನು ಒಂದೇಟು ಕೆನ್ನೆಗೆ ಹೊಡೆದೆ. ಕಾಲರ್ ಪಟ್ಟಿ ಹಿಡಿದಿದ್ದೆ, ಆಗ ಆತ ನನ್ನ ಕೈ ಕಚ್ಚಿದ್ದ. ಅವರು ಜೋರಾಗಿ ಎಳೆದಾಗ ಬೆರಳು ಕಟ್ ಆಯಿತು ಎಂದಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟೆ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:29 am, Thu, 29 May 25

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us