AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡುವ ಮುನ್ನ ಹುಷಾರ್​​! ಕಿಡ್ನ್ಯಾಪ್​​ ಮಾಡಿ ವ್ಯಕ್ತಿಗೆ ಚಿತ್ರಹಿಂಸೆ ಕೊಟ್ಟ ದುಷ್ಕರ್ಮಿಗಳು

ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ವಿಚಿತ್ರ ಮತ್ತು ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಸಾಲ ನೀಡಿದ್ದ ಹಣ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯನ್ನು ಅಪಹರಿಸಿ ಮರ್ಮಾಂಗ, ತೊಡೆಗಳಿಗೆ ಸಿಗರೇಟ್​​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಕೃತ್ಯವನ್ನು ವಿಡಿಯೋ ಮಾಡಿ ಬೆದರಿಕೆ ಹಾಕಿದ್ದರು.

ಸಾಲ ಕೊಡುವ ಮುನ್ನ ಹುಷಾರ್​​! ಕಿಡ್ನ್ಯಾಪ್​​ ಮಾಡಿ ವ್ಯಕ್ತಿಗೆ ಚಿತ್ರಹಿಂಸೆ ಕೊಟ್ಟ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: |

Updated on: Oct 12, 2025 | 4:07 PM

Share

ಬೆಂಗಳೂರು, ಅಕ್ಟೋಬರ್​ 12: ಸಾಲ ನೀಡಿದ್ದ ಹಣ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯನ್ನ ಅಪಹರಿಸಿ (kidnap) ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೈ ಕಾಲು ಕಟ್ಟಿ ಚಿತ್ರಹಿಂಸೆ (torture) ನೀಡಿರುವಂತಹ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಗಾಯ್ ರಾಜ್​ ಅಪಹರಣಕ್ಕೊಳಗಾಗಿದ್ದ ವ್ಯಕ್ತಿ. ಆನಂದ್ ಕುಮಾರ್​, ಆಶಿಶ್​ ಮತ್ತು ಐಶ್ವರ್ಯಾ ಸೇರಿ ಹಲವರ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಆನಂದ್ ಕುಮಾರ್ ಎಂಬಾತನಿಗೆ ಸಗಾಯ್ ರಾಜ್ ಹಣ ನೀಡಿದ್ದ. ತನ್ನ ತಂದೆಗೆ ಕಿಡ್ನಿ ವೈಫಲ್ಯ ಎಂದು ಹೇಳಿ ಹಣ ಸಹಾಯ ಪಡೆದಿದ್ದನಂತೆ. ಆ ಹಣವನ್ನ ಆನಂದ್ ಕುಮಾರ್ ಮಗಳು ಐಶ್ವರ್ಯಾ ಖಾತೆಗೆ ಹಾಕಿದ್ದರು. ಹಂತ ಹಂತವಾಗಿ 3 ಲಕ್ಷ ರೂ. ಹಣ ಹಾಕಿದ್ದರಂತೆ. ನಂತರ ಮನೆ ಮಾರಾಟ ಮಾಡುತ್ತೇನೆ ಎಂದು ಆನಂದ್ ಹೇಳಿದ್ದರಂತೆ. ಈ ಹಿನ್ನಲೆ ತನಗೆ ಮನೆ ಮಾರಾಟ ಮಾಡಿ ಎಂದು ಸಗಾಯ್ ರಾಜ್ ಹೇಳಿದ್ದರಂತೆ.

ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಕಿಡ್ನ್ಯಾಪ್: 12 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್​​

ಈ ಹಿನ್ನಲೆ ಅಗ್ರಿಮೆಂಟ್​​ಗೂ ಮುನ್ನ 1 ಕೋಟಿ ರೂ. ನಂತರ ಉಳಿದ ಹಣ ನೀಡುವುದಾಗಿ ಮಾತುಕತೆಯಾಗಿತ್ತು. ಅದಾಗಲೇ ಸಗಾಯ್ 1 ಕೋಟಿಯವರೆಗೆ ಹಣ ನೀಡಿದ್ದರಂತೆ. ಆದರೆ ಮನೆ ನೋಂದಣಿ ಮಾಡದ ಹಿನ್ನಲೆ ಹಣ ವಾಪಸ್ ಕೇಳಿದ್ದರು. ಇದೇ ಕಾರಣಕ್ಕೆ ಸಗಾಯ್ ರಾಜ್​​ ಕಾರಿನಲ್ಲಿ ಹೋಗುತ್ತಿರುವಾಗ ಆರೋಪಿಗಳು ಅಪಹರಿಸಿದ್ದರು.

ಮರ್ಮಾಂಗಕ್ಕೆ ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ

ಬೈಕ್​​ನಲ್ಲಿ ಬಂದಿದ್ದ ಅಪರಿಚಿತರು ಸಗಾಯ್ ಮುಖಕ್ಕೆ ಬಟ್ಟೆ ಕಟ್ಟಿ ಕಿಡ್ಯ್ನಾಪ್​ ಮಾಡಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ನಂತರ ಕೈಕಾಲು ಕಟ್ಟಿ ಹಾಕಿ ಮರ್ಮಾಂಗಕ್ಕೆ ಹಾಗೂ ತೊಡೆಗೆ ಸಿಗರೇಟ್​​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾರೆ. ಬಳಿಕ ಮರ್ಮಾಂಗಕ್ಕೆ ಇಂಜೆಕ್ಷನ್​​ನಿಂದ ಚುಚ್ಚಿ ವಿಕೃತಿ ಮೆರೆದಿದ್ದಾರೆ. ಕೃತ್ಯವನ್ನು ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾರೆ. ನಂತರ ರಾತ್ರಿಯಿಡೀ ಕಾರಿನಲ್ಲಿ ಸುತ್ತಾಡಿಸಿ ಹಿಂಸೆ ನೀಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಇದನ್ನೂ ಓದಿ: Cyber Fraud: ದೇಶದ ವಿವಿಧೆಡೆ ಕೋಟಿ ಕೋಟಿ ದೋಚುತ್ತಿದ್ದ ಸೈಬರ್ ವಂಚಕರ ಜಾಲ ಭೇದಿಸಿದ ದಾವಣಗೆರೆ ಪೊಲೀಸ್

ಬೆಳಗಿನಜಾವ ಕಾರಿನಲ್ಲಿ ಕಾಪಾಡಿ ಎಂದು ಸಗಾಯ್​ ರಾಜ್ ಕೂಗಾಡಿದ್ದಾರೆ. ಸಾರ್ವಜನಿಕರ ನೆರವಿನಿಂದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ಸಗಾಯ್, ಬಳಿಕ ಸಂಚಾರ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಈ ಸಂಬಂಧ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!