AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಲ್ಸ್​​ ಬ್ರೆಕ್​ ಮಾಡಿದ್ದಕ್ಕೆ ಸಾಕ್ಷಿ ಕೇಳಿದ ಯುವಕ: ಫೋಟೋ ಸಹಿತ ಉತ್ತರ ನೀಡಿದ ಟ್ರಾಫಿಕ್‌ ಪೊಲೀಸ್‌!

ಹೆಲ್ಮೆಟ್‌ ಧರಿಸದಿದ್ದಕ್ಕೆ ದಂಡ ಹಾಕಿದ್ದ ಪೊಲೀಸರಿಗೆ ಸಾಕ್ಷ್ಯ ಕೇಳಿದ ವ್ಯಕ್ತಿಗೆ ಫೋಟೋ ಸಹಿತ ಉತ್ತರ ನೀಡಿದ ಬೆಂಗಳೂರು ಟ್ರಾಫೀಕ್​ ಪೊಲೀಸ್​​

ರೂಲ್ಸ್​​ ಬ್ರೆಕ್​ ಮಾಡಿದ್ದಕ್ಕೆ ಸಾಕ್ಷಿ ಕೇಳಿದ ಯುವಕ: ಫೋಟೋ ಸಹಿತ ಉತ್ತರ ನೀಡಿದ ಟ್ರಾಫಿಕ್‌ ಪೊಲೀಸ್‌!
ಟ್ರಾಫೀಕ್​​ ಪೊಲೀಸರಿಗೆ ಸಾಕ್ಷ್ಯ ಕೇಳಿದ್ದ ಯುವಕ
TV9 Web
| Edited By: |

Updated on:Oct 22, 2022 | 5:59 PM

Share

ಬೆಂಗಳೂರು: ಬೆಂಗಳೂರು ಟ್ರಾಫೀಕ್​​ ಪೊಲೀಸರಿಗೆ (Bengaluru Traffic police) ಸವಾಲ್​ ಎಸೆದು ಯುವಕನೋರ್ವ ಪೇಚಿಗೆ ಸಿಲುಕಿದ್ದಾನೆ. ನಿಯಮ ಮೀರಿ ಸಂಚರಿಸಿದ್ದಕ್ಕೆ, ಟ್ರಾಫೀಕ್​ ಪೊಲೀಸರು ದಂಡ  (fine) ವಿಧಿಸಿದ್ದಾರೆ. ಇದಕ್ಕೆ ಯುವಕ ದಂಡ ಪಾವತಿಸದೆ ದಂಡದ ಪಾವತಿ ಸ್ಲಿಪ್​​ನ್ನು ಟ್ವೀಟ್​ ಮಾಡಿ ಸವಾಲ್​ ಎಸದಿದ್ದಾನೆ. ಬೆಂಗಳೂರಿನ ಫಿಲೆಕ್ಸ್​​ ರಾಜ್​ ಎಂಬ ಯುವಕ ಹೆಲ್ಮೆಟ್​ ಧರಿಸದೆ ಸ್ಕೂಟರ್​ನಲ್ಲಿ ಸಂಚರಿಸಿದ್ದಾನೆ. ಇದಕ್ಕೆ ಟ್ರಾಫೀಕ್​​ ಪೊಲೀಸರು ಫಿಲೆಕ್ಸ್​​ ರಾಜ್ ಸ್ಕೂಟರ್​ನ ನಂಬರ್​ ಪ್ಲೇಟ್ ಚಿತ್ರ ಸಹಿತ, ದಂಡ ಸ್ಲಿಫ್​​ನ್ನು ರಾಜ್​ಗೆ ಕಳುಹಿಸಿದ್ದಾರೆ. ಆದರೆ ರಾಜ್​ ದಂಡ ಕಟ್ಟದೆ  ಸ್ಕೂಟರ್​ನಲ್ಲಿ ಇದ್ದಿದ್ದು ನಾನೇ ಎಂಬುವುದಕ್ಕೆ ಏನು ಸಾಕ್ಷಿ, ನಾನು ದಂಡ ಕಟ್ಟಲ್ಲ  ಎಂದು ಟ್ವೀಟ್​ರ​ನಲ್ಲಿ ಟ್ವೀಟ್​ ಮಾಡಿದ್ದಾನೆ.

@blrcitytraffic @BlrCityPolice ನಾನು ಹೆಲ್ಮೇಟ್​​ ಧರಿಸಿಲ್ಲ ಎಂಬುವುದಕ್ಕೆ ಸೂಕ್ತ ಸಾಕ್ಷಿ ಇಲ್ಲ. ದಯವಿಟ್ಟು ಸರಿಯಾದ ಸಾಕ್ಷಿ ನೀಡಿ. ಈ ಹಿಂದೆಯೂ ಇದೆ ರೀತಿಯಾಗಿತ್ತು, ಆಗ ನಾನು ದಂಡ ಕಟ್ಟಿದ್ದೆ ಆದರೆ ಈಗ ನಾನು ದಂಡ ಕಟ್ಟಲ್ಲ ಎಂದು ಫಿಲೆಕ್ಸ್​​ ರಾಜ್ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾನೆ.

ಕೆಲವು ನಿಮಿಷಗಳ ನಂತರ ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ಟ್ರಾಫೀಕ್​ ಪೊಲೀಸರು, ರಾಜ್​​ ಹೆಲ್ಮೆಟ್​​ ಇಲ್ಲದೆ ಸಂಚರಿಸುತ್ತಿದ್ದ ಭಾವಚಿತ್ರವನ್ನು ರಾಜ್​​ಗೆ ಟ್ಯಾಗ್​ ಮಾಡಿ ಟ್ವೀಟ್​ ಮಾಡಿದ್ದಾರೆ. ನಂತರ ರಾಜ್​​ ಇದಕ್ಕೆ ಪ್ರತಿಕ್ರಿಯಿಸಿ ಬೆಂಗಳೂರು ಟ್ರಾಫೀಕ್​ ಪೊಲೀಸರಿಗೆ ಧನ್ಯವಾದಗಳು. ಈ ರೀತಿ ಪ್ರಶ್ನೆ ಮಾಡುವುದು ಇದು ಸಾರ್ವಜನಿಕರ ಕರ್ತವ್ಯ. ಬೆಂಗಳೂರು ಟ್ರಾಫೀಕ್​ ಪೊಲೀಸರಿಗೆ ನಾನು ಅಭಿನಂದಿಸುತ್ತೇನೆ. ಈಗ ನಾನು ದಂಡವನ್ನು ಕಟ್ಟುತ್ತೇನೆ ಎಂದು ಟ್ವೀಟ್​ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:57 pm, Sat, 22 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ