AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಲ್ಸ್​​ ಬ್ರೆಕ್​ ಮಾಡಿದ್ದಕ್ಕೆ ಸಾಕ್ಷಿ ಕೇಳಿದ ಯುವಕ: ಫೋಟೋ ಸಹಿತ ಉತ್ತರ ನೀಡಿದ ಟ್ರಾಫಿಕ್‌ ಪೊಲೀಸ್‌!

ಹೆಲ್ಮೆಟ್‌ ಧರಿಸದಿದ್ದಕ್ಕೆ ದಂಡ ಹಾಕಿದ್ದ ಪೊಲೀಸರಿಗೆ ಸಾಕ್ಷ್ಯ ಕೇಳಿದ ವ್ಯಕ್ತಿಗೆ ಫೋಟೋ ಸಹಿತ ಉತ್ತರ ನೀಡಿದ ಬೆಂಗಳೂರು ಟ್ರಾಫೀಕ್​ ಪೊಲೀಸ್​​

ರೂಲ್ಸ್​​ ಬ್ರೆಕ್​ ಮಾಡಿದ್ದಕ್ಕೆ ಸಾಕ್ಷಿ ಕೇಳಿದ ಯುವಕ: ಫೋಟೋ ಸಹಿತ ಉತ್ತರ ನೀಡಿದ ಟ್ರಾಫಿಕ್‌ ಪೊಲೀಸ್‌!
ಟ್ರಾಫೀಕ್​​ ಪೊಲೀಸರಿಗೆ ಸಾಕ್ಷ್ಯ ಕೇಳಿದ್ದ ಯುವಕ
TV9 Web
| Edited By: |

Updated on:Oct 22, 2022 | 5:59 PM

Share

ಬೆಂಗಳೂರು: ಬೆಂಗಳೂರು ಟ್ರಾಫೀಕ್​​ ಪೊಲೀಸರಿಗೆ (Bengaluru Traffic police) ಸವಾಲ್​ ಎಸೆದು ಯುವಕನೋರ್ವ ಪೇಚಿಗೆ ಸಿಲುಕಿದ್ದಾನೆ. ನಿಯಮ ಮೀರಿ ಸಂಚರಿಸಿದ್ದಕ್ಕೆ, ಟ್ರಾಫೀಕ್​ ಪೊಲೀಸರು ದಂಡ  (fine) ವಿಧಿಸಿದ್ದಾರೆ. ಇದಕ್ಕೆ ಯುವಕ ದಂಡ ಪಾವತಿಸದೆ ದಂಡದ ಪಾವತಿ ಸ್ಲಿಪ್​​ನ್ನು ಟ್ವೀಟ್​ ಮಾಡಿ ಸವಾಲ್​ ಎಸದಿದ್ದಾನೆ. ಬೆಂಗಳೂರಿನ ಫಿಲೆಕ್ಸ್​​ ರಾಜ್​ ಎಂಬ ಯುವಕ ಹೆಲ್ಮೆಟ್​ ಧರಿಸದೆ ಸ್ಕೂಟರ್​ನಲ್ಲಿ ಸಂಚರಿಸಿದ್ದಾನೆ. ಇದಕ್ಕೆ ಟ್ರಾಫೀಕ್​​ ಪೊಲೀಸರು ಫಿಲೆಕ್ಸ್​​ ರಾಜ್ ಸ್ಕೂಟರ್​ನ ನಂಬರ್​ ಪ್ಲೇಟ್ ಚಿತ್ರ ಸಹಿತ, ದಂಡ ಸ್ಲಿಫ್​​ನ್ನು ರಾಜ್​ಗೆ ಕಳುಹಿಸಿದ್ದಾರೆ. ಆದರೆ ರಾಜ್​ ದಂಡ ಕಟ್ಟದೆ  ಸ್ಕೂಟರ್​ನಲ್ಲಿ ಇದ್ದಿದ್ದು ನಾನೇ ಎಂಬುವುದಕ್ಕೆ ಏನು ಸಾಕ್ಷಿ, ನಾನು ದಂಡ ಕಟ್ಟಲ್ಲ  ಎಂದು ಟ್ವೀಟ್​ರ​ನಲ್ಲಿ ಟ್ವೀಟ್​ ಮಾಡಿದ್ದಾನೆ.

@blrcitytraffic @BlrCityPolice ನಾನು ಹೆಲ್ಮೇಟ್​​ ಧರಿಸಿಲ್ಲ ಎಂಬುವುದಕ್ಕೆ ಸೂಕ್ತ ಸಾಕ್ಷಿ ಇಲ್ಲ. ದಯವಿಟ್ಟು ಸರಿಯಾದ ಸಾಕ್ಷಿ ನೀಡಿ. ಈ ಹಿಂದೆಯೂ ಇದೆ ರೀತಿಯಾಗಿತ್ತು, ಆಗ ನಾನು ದಂಡ ಕಟ್ಟಿದ್ದೆ ಆದರೆ ಈಗ ನಾನು ದಂಡ ಕಟ್ಟಲ್ಲ ಎಂದು ಫಿಲೆಕ್ಸ್​​ ರಾಜ್ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾನೆ.

ಕೆಲವು ನಿಮಿಷಗಳ ನಂತರ ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ಟ್ರಾಫೀಕ್​ ಪೊಲೀಸರು, ರಾಜ್​​ ಹೆಲ್ಮೆಟ್​​ ಇಲ್ಲದೆ ಸಂಚರಿಸುತ್ತಿದ್ದ ಭಾವಚಿತ್ರವನ್ನು ರಾಜ್​​ಗೆ ಟ್ಯಾಗ್​ ಮಾಡಿ ಟ್ವೀಟ್​ ಮಾಡಿದ್ದಾರೆ. ನಂತರ ರಾಜ್​​ ಇದಕ್ಕೆ ಪ್ರತಿಕ್ರಿಯಿಸಿ ಬೆಂಗಳೂರು ಟ್ರಾಫೀಕ್​ ಪೊಲೀಸರಿಗೆ ಧನ್ಯವಾದಗಳು. ಈ ರೀತಿ ಪ್ರಶ್ನೆ ಮಾಡುವುದು ಇದು ಸಾರ್ವಜನಿಕರ ಕರ್ತವ್ಯ. ಬೆಂಗಳೂರು ಟ್ರಾಫೀಕ್​ ಪೊಲೀಸರಿಗೆ ನಾನು ಅಭಿನಂದಿಸುತ್ತೇನೆ. ಈಗ ನಾನು ದಂಡವನ್ನು ಕಟ್ಟುತ್ತೇನೆ ಎಂದು ಟ್ವೀಟ್​ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:57 pm, Sat, 22 October 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ