AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!

2019ರಲ್ಲಿ ವಿವಾಹವಾಗಿದ್ದ ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂದು ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಆರೋಪಿ ಪತ್ನಿ ವಿರುದ್ಧ ಸೇಡು ತೀರಿಸಲು ಫೇಸ್​​ಬುಕ್ಕಿನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!
ಸಾಂದರ್ಭಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: |

Updated on:Apr 11, 2024 | 10:13 AM

Share

ಬೆಂಗಳೂರು, ಏಪ್ರಿಲ್ 11: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯಲ್ಲಿ ವ್ಯಕ್ತಿ ಒಬ್ಬ ಫೇಸ್ಬುಕ್​ನಲ್ಲಿ (Facebook) ಪೋಸ್ಟ್ ಮಾಡಿದ ವಿಲಕ್ಷಣ ವಿದ್ಯಮಾನ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಸದ್ಯ ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಂಪತ್ಯ ಕಲಹವೇ ಘಟನೆಗೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ಹಂತದ ತನಿಖೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂದಿನಿ ಲೇಔಟ್ ವ್ಯಾಪ್ತಿಯ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿತ್ತು. 2019ರಲ್ಲಿ ವಿವಾಹವಾಗಿದ್ದ ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂದು ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಆರೋಪಿ ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್​​ಬುಕ್ಕಿನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

‘ಕಲಾ ಶಶಿ’ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದ ಆರೋಪಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು.

ಇದನ್ನೂ ಓದಿ: ತುಮಕೂರು: ಡಾ. ಮಂಜುನಾಥ್​ ಪರ ಪ್ರಚಾರ ಮಾಡಿದ ವ್ಯಕ್ತಿ ಮೇಲೆ ಹಲ್ಲೆ

ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:17 am, Thu, 11 April 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ