AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮನೆಯಲ್ಲೇ ಚಿನ್ನ ಕದ್ದು ಪ್ರೇಯಸಿ ಜೊತೆ ಗೋವಾ ಪ್ರವಾಸ; ಆರೋಪಿ ಅರೆಸ್ಟ್

ಪ್ರೇಯಸಿ ಜೊತೆಗಿನ ಜಾಲಿ ಟ್ರಿಪ್​​ಗೆ ತನ್ನ ಮನೆಯಲ್ಲೇ ಚಿನ್ನ ಕದ್ದ ಯುವಕ ಸಿಕ್ಕಿಬಿದ್ದಿದ್ದಾನೆ. ಆಡುಗೋಡಿ ಪೊಲೀಸರು ಚಿನ್ನ ಕದ್ದ ಇರ್ಫಾನ್​ನನ್ನು ಬಂಧಿಸಿದ್ದಾರೆ.

ತನ್ನ ಮನೆಯಲ್ಲೇ ಚಿನ್ನ ಕದ್ದು ಪ್ರೇಯಸಿ ಜೊತೆ ಗೋವಾ ಪ್ರವಾಸ; ಆರೋಪಿ ಅರೆಸ್ಟ್
ಬಂಧಿತ ಆರೋಪಿ ಇರ್ಫಾನ್ ಮತ್ತು ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣಗಳು
TV9 Web
| Edited By: |

Updated on:Dec 27, 2022 | 8:55 AM

Share

ಬೆಂಗಳೂರು: ಕೆಲವರ ಕೈಯಲ್ಲಿ ಬಿಡಿಗಾಸು ಇಲ್ಲದಿದ್ದರೂ ಶೋಕಿಗೇನು ಕಮ್ಮಿ ಇರುವುದಿಲ್ಲ. ನೋಡಿದವರ ಕಣ್ಣಿಗೆ ತಾನು ಶ್ರೀಮಂತನಂತೆ ಕಾಣಿಸಿಕೊಳ್ಳಲು ಮನೆಯವರಿಂದಲೇ ಹಣ ಕೇಳಿ ಸಮಾಜದ ಎದುರು ಬಿಟ್ಟಿ ಶೋಕಿ ನೀಡುವುದನ್ನು ನೋಡಿರುತ್ತೀರಿ. ಇನ್ನು ಕೆಲವರು ತಂದೆ ಜೇಬಿಗೆ ಕೈಹಾಕುತ್ತಾರೆ. ಇಂತಹದ್ದೇ ಪ್ರಕರಣವೊಂದು ಬೆಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ಪ್ರೇಯಸಿ (Girl friend) ಜೊತೆ ಅಂತಾರಾಜ್ಯ ಪ್ರವಾಸ ಕೈಗೊಳ್ಳಲು ತನ್ನದೇ ಮನೆಯಲ್ಲಿ ಚಿನ್ನ ಕಳ್ಳತನ ಮಾಡಿದ (Gold Theft) ಪ್ರಕರಣ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇರ್ಫಾನ್ ಎಂಬ ಯುವಕನಿಗೆ ಯುವತಿ ಮೇಲೆ ಲವ್ವೋ ಲವ್, ಆಕೆಯೊಂದಿಗೆ ಜಾಲಿ ರೈಡ್ ಹೋಗುವ ಕನಸು ಕೂಡ ಕಾಣುತ್ತಿದ್ದ. ಅದರಂತೆ ವರ್ಷಾಂತ್ಯದ ವೇಳೆ ಗೋವಾಕ್ಕೆ ಹೋಗುವ ಪ್ಲಾನ್ ಇಬ್ಬರೂ ಹಾಕಿಕೊಂಡಿದ್ದರು. ಗೋವಾಕ್ಕೆ ಹೋಗಿ ಜಾಲಿ ಮಾಡುವುದು ಸುಲಭವಲ್ಲ, ಅದಕ್ಕೆ ಹಣ ಅತ್ಯವಶ್ಯಕವಾಗಿದೆ. ಆದರೆ ಏನು ಮಾಡುವುದು? ಇರ್ಫಾನ್ ಜೇಬು ಖಾಲಿಯಾಗಿದೆ. ಇದಕ್ಕಾಗಿ ತನ್ನ ಮನೆಯವರು ಕಷ್ಟಪಟ್ಟು ಬೆವರು ಸುರಿಸಿ ಮಾಡಿಟ್ಟಿದ್ದ ಚಿನ್ನದ ಮೇಲೆಯೇ ಕನ್ನ ಹಾಕಿದ್ದಾನೆ.

ಇದನ್ನೂ ಓದಿ: ಗುಜರಾತ್: ಮಗಳ ಅಶ್ಲೀಲ ವಿಡಿಯೊ ಪ್ರಸಾರ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಬಿಎಸ್ಎಫ್ ಯೋಧನನ್ನು ಹೊಡೆದು ಕೊಂದರು

ಕೆಲಸಕ್ಕೆ ಹೋಗದೆ ಅಣ್ಣ, ಅತ್ತಿಗೆ ಹಾಗೂ ಅಮ್ಮನ ಜೊತೆಯಲ್ಲೇ ಇದ್ದ ಇರ್ಫಾನ್​ಗೆ ತನ್ನ ಪ್ರೇಯಸಿಯನ್ನು ಗೋವಾಗೆ ಕರೆದುಕೊಂಡು ಹೊಗಲು ಕೈಯಲ್ಲಿ ಹಣ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಎಲ್ಲರು ಮಲಗಿದ್ದ ವೇಳೆಯಲ್ಲಿ ಎದ್ದ ಇರ್ಫಾನ್, 103 ಗ್ರಾಂ ಚಿನ್ನ ಕದ್ದಿದ್ದಾನೆ. ಇದನ್ನು ಮಾರಿ ಬಂದ ಹಣದಲ್ಲಿ ಗರ್ಲ್​​ಫ್ರೆಂಡ್​ ಜೊತೆ ಗೋವಾ ಟ್ರಿಪ್ ಹೋಗಿದ್ದಾನೆ.

ಒಂದೆಡೆ ಇರ್ಫಾನ್​ನ ಗೋವಾ ಜಾಲಿ ಟ್ರಿಪ್, ಇನ್ನೊಂದೆಡೆ ಚಿನ್ನ ಕಳುವಾದ ಬಗ್ಗೆ ಚಿಂತೆಯಲ್ಲೇ ಇದ್ದ ಇರ್ಫಾನ್ ಮನೆಯವರು. 103 ಗ್ರಾಂ ಚಿನ್ನ ಕಳವಾಗಿದೆ ಎಂದು ಆರೋಪಿಸಿ ಇರ್ಫಾನ್​ನ ಸಹೋದರ ಆಡುಗೋಡಿ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ವೇಳೆ ಸಹೋದರನ ಗೋವಾ ಟ್ರಿಪ್ ಬಯಲಾಗಿದೆ.

ಕಳ್ಳತನವಾದ ತಲೆಬಿಸಿಯಲ್ಲಿ ಕುಟುಂಬ ಇದ್ದರೆ, ಮನೆ ಮಗ ಜಾಲಿ ಟ್ರಿಪ್​ನಲ್ಲಿದ್ದಾನೆ. ಇದು ಸಹಜವಾಗಿ ಶಂಕೆ ವ್ಯಕ್ತಪಡಿಸುವ ಅಂಶವಾಗಿದೆ. ಅದರಂತೆ ಅನುಮಾನಗೊಂಡು ಇರ್ಫಾನ್​ನನ್ನು ವಿಚಾರಣೆ ನಡೆಸಿದ ವೇಳೆ ಅಸಲಿ ಕೃತ್ಯ ಬಯಲಾಗಿದೆ. ತನ್ನ ಪ್ರೇಯಸಿ ಜೊತೆ ಪ್ರವಾಸಕ್ಕೆ ಹೋಗಲು ತಾನೇ ಚಿನ್ನ ಕದ್ದು ಮಾರಿದ್ದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಇರ್ಫಾನ್ ಜೈಲು ಪಾಲಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:53 am, Tue, 27 December 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್