AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮಾರ್ಕೆಟ್ ಫ್ಲೈಓವರ್​ನಿಂದ ಹಣ ಎಸೆದ ವ್ಯಕ್ತಿ ಖಾಕಿ ವಶಕ್ಕೆ

ವ್ಯಕ್ತಿಯೊಬ್ಬ ಬೆಂಗಳೂರಿನ ಕೆ.ಆರ್​.ಮಾರ್ಕೆಟ್​ ಫ್ಲೈ ಓವರ್​ ಮೇಲೆ ಬಂದು ಹಣ ಎಸೆದ ಘಟನೆಯೊಂದು ನಡೆದಿದೆ. ಆ ವ್ಯಕ್ತಿ ಯಾಕೆ ಹಣ ಎಸೆದಿದ್ದು? ಹಣ ಎಸೆದ ವ್ಯಕ್ತಿ ಹೇಳುವುದೇನು? ಇಲ್ಲಿದೆ ನೋಡಿ.

ಬೆಂಗಳೂರಿನ ಮಾರ್ಕೆಟ್ ಫ್ಲೈಓವರ್​ನಿಂದ ಹಣ ಎಸೆದ ವ್ಯಕ್ತಿ ಖಾಕಿ ವಶಕ್ಕೆ
ಹಣ ಎಸೆದ ಅರುಣ್ (ಎಡ ಚಿತ್ರ) ಮತ್ತು ಕೆ.ಆರ್​.ಮಾರ್ಕೆಟ್ ಫ್ಲೈಓವರ್​ ಮೇಲಿಂದ ಹಣ ಎಸೆಯುತ್ತಿರುವ ಅರುಣ್ (ಬಲ ಚಿತ್ರ)
TV9 Web
| Updated By: Rakesh Nayak Manchi|

Updated on:Jan 24, 2023 | 5:01 PM

Share

ಬೆಂಗಳೂರು: ನೋಟು ಅಮಾನ್ಯೀಕರಣಗೊಂಡ ಸಮಯದಲ್ಲಿ ಹಣ ಕೂಡಿಟ್ಟಿದ್ದ ಕೆಲವು ವ್ಯಕ್ತಿಗಳು ಇನ್ನು ಈ ನೋಟುಗಳು ಪ್ರಯೋಜನವಿಲ್ಲ ಎಂದು ಸಾರ್ವಜನಿಕ ಸ್ಥಳಗಳಲ್ಲಿ ಎಸೆದಿದ್ದರು. ಇದರ ಹೊರತಾಗಿ ಪಬ್​ಗಳಲ್ಲಿ ಪಬ್​ ಡಾನ್ಸರ್​ಗಳ ಮೇಲೆ ಹಣ ಎಸೆಯುವುದನ್ನು ನೋಡಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ನಗರದ ಕೆ.ಆರ್.ಮಾರ್ಕೆಟ್ ಫ್ಲೈಓವರ್​ (K.R. Market Flyover) ಮೇಲೆ ಬಂದು ಹಣ ಎಸೆದು ಸ್ಥಳದಿಂದ ತೆರಳಿದ್ದಾನೆ. ಈ ಪ್ರಕರಣ ಸಂಬಂಧ ತನಿಖೆಗೆ ಇಳಿದ ಪೊಲೀಸರು, ನಾಗಬಾವಿಯ ಯೂಟ್ಯೂಬ್​ ಚಾನಲ್ ಕಚೇರಿಯಲ್ಲಿ ಹಣ ಎಸೆದ ವ್ಯಕ್ತಿ ಇರುವುದನ್ನು ಖಚಿತಪಡಿಸಿ ಕಚೇರಿಗೆ ಎಂಟ್ರಿ ಕೊಟ್ಟು ವಶಕ್ಕೆ ಪಡೆದಿದ್ದಾರೆ. ಸದ್ಯ ಹಣ ಎಸೆದ ವ್ಯಕ್ತಿ ಅರುಣ್ ಎಂದು ತಿಳಿದುಬಂದಿದ್ದು, ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಫ್ಲೈಓವರ್​ನಿಂದ ಹಣ ಎಸೆದ ಘಟನೆ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ 92ಡಿ, ಐಪಿಸಿ 283ರ ಅಡಿ ಎನ್​ಸಿಆರ್ ಪ್ರಕರಣ ದಾಖಲಿಸಿದ ಕೆ.ಆರ್.ಮಾರ್ಕೆಟ್​ ಠಾಣಾ ಪೊಲೀಸರು, ಕಾರಣ ನೀಡುವಂತೆ ನಾಗರಭಾವಿಯಲ್ಲಿರುವ ಹಣ ಎಸೆದ ಅರುಣ್​ ನಿವಾಸಕ್ಕೆ ನೋಟಿಸ್ ಜಾರಿ ಕಳುಹಿಸಿದ್ದರು. ಅದಾಗ್ಯೂ ಉತ್ತರಿಸದಿದ್ದಾಗ ಅರುಣ್ ನಾಗರಭಾವಿಯಲ್ಲಿರುವ ಯೂಟ್ಯೂಬ್ ಕಚೇರಿಯಲ್ಲಿ ಇರುವುದು ಪೊಲೀಸರಿಗೆ ಖಚಿತವಾಗಿದೆ. ಅದರಂತೆ ಕಚೇರಿಗೆ ತೆರಳಿದ ಪೊಲೀಸರು ಅರುಣ್​ ಜೊತೆ ಮಾತುಕತೆ ನಡೆಸಿ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: Viral News: ಪ್ರೀತಿಗಾಗಿ ಲಿಂಗವನ್ನೇ ಬದಲಾಯಿಸಿಕೊಂಡ ಯುವತಿ; ಆದರೂ ಕೈ ಕೊಟ್ಟಳು ಗೆಳತಿ!

ಹಣ ಎಸೆದ ಅರುಣ್ ಹೇಳುವುದೇನು?

ನನಗೆ ಜ್ಞಾನ, ಬುದ್ಧಿ ಶಕ್ತಿ ಚೆನ್ನಾಗಿದೆ. ಕೆಟ್ಟ ಉದ್ದೇಶದಿಂದ ಹಣ ಎಸೆದಿಲ್ಲ ಎಂದು ಅರುಣ್​ ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾನೆ. ನಾನು ವಿದ್ಯಾವಂತನಾಗಿದ್ದೇನೆ, ನನಗೂ ಬುದ್ಧಿಯಿದೆ. ಸಾರ್ವಜನಿಕವಾಗಿ ಹಣ ಎಸೆದಿದ್ದು ತಪ್ಪು ಎಂದು ನನಗೆ ಗೊತ್ತಿದೆ. ರೀಲ್ಸ್ ಮಾಡುವ ಉದ್ದೇಶದಿಂದ ಹಣ ಎಸೆದಿಲ್ಲ. ನನಗೆ ಸಮಯ ನೀಡಿದರೆ ಎಲ್ಲವನ್ನೂ ಹೇಳುತ್ತೇನೆ. ದಯವಿಟ್ಟು ನನಗೆ ಸಮಯ ಕೊಡಿ ಎಂದು ಹೇಳಿದ್ದಾನೆ.

ಹಣ ಎಸೆದ ಅರುಣ್ ವಿರುದ್ಧ ಎಫ್​ಐಆರ್ ದಾಖಲು

ಫ್ಲೈಓವರ್​ನಲ್ಲಿ ಹಣ ಎಸೆದ ಪ್ರಕರಣ ಸಂಬಂಧ ಸಿಟಿ ಮಾರ್ಕೆಟ್‌ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ರಸ್ತೆಯಲ್ಲಿ ಹಣ ಎಸೆದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಹಾಗೂ ಜನರು ಅಪಾಯಕಾರಿಯಾಗಿ ಓಡಾಡುವಂತೆ ಮಾಡಿದ ಆರೋಪ ಮೇಲೆ ಪೊಲೀಸರು ಐಪಿಸಿ ಸೆಕ್ಷನ್‌ 283, 290, ಕೆಪಿ ಕಾಯ್ದೆ 92(D)ರಡಿ ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Tue, 24 January 23

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ