AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್​: ಮನೆಗೆ ಹೋಗಲು ವಾಹನ ಸಿಗದೆ 12 ಕಿಮೀ ನಡೆದುಕೊಂಡು ಹೋದ ವ್ಯಕ್ತಿ

ಬೆಂಗಳೂರು ಬಂದ್​ ದಿನ ನಗರಕ್ಕೆ ಆಗಮಿಸಿದ ವ್ಯಕ್ತಿಯೊಬ್ಬರು ತಮ್ಮ ಮನೆಗೆ ತೆರಳಲು ಯಾವುದೇ ವಾಹನ ಸಿಗದೇ 12 ಕಿ.ಮೀ ನಡೆದುಕೊಂಡು ಹೋಗಿದ್ದಾರೆ.

ಬೆಂಗಳೂರು ಬಂದ್​: ಮನೆಗೆ ಹೋಗಲು ವಾಹನ ಸಿಗದೆ 12 ಕಿಮೀ ನಡೆದುಕೊಂಡು ಹೋದ ವ್ಯಕ್ತಿ
ಬೆಂಗಳೂರು ಟ್ರಾಫಿಕ್​
TV9 Web
| Edited By: |

Updated on:Sep 29, 2023 | 2:52 PM

Share

ಬೆಂಗಳೂರು ಸೆ.29: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಬುಧವಾರ ಬೆಂಗಳೂರು ಬಂದ್​​ಗೆ (Bengaluru Bandh) ಕರೆ ನೀಡಿದ್ದವು. ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಲ್ಲದೆ ಖಾಸಗಿ ವಾಹನ ಮತ್ತು ಸರ್ಕಾರಿ ಸಾರಿಗೆ ಬಸ್​​​ ವ್ಯವಸ್ತೆ ಇಲ್ಲದೆ ಜನರು ಪರದಾಡುವಂತಾಯಿತು. ಬಂದ್​ ದಿನ ಬೆಂಗಳೂರಿಗೆ ಬಂದ ವ್ಯಕ್ತಿಯೊಬ್ಬರು ತಮ್ಮ ಮನೆಗೆ ತೆರಳಲು ಯಾವುದೇ ವಾಹನ ಸಿಗದೇ 12 ಕಿ.ಮೀ ನಡೆದುಕೊಂಡು ಹೋಗಿದ್ದಾರೆ.

ಈ ಬಗ್ಗೆ ಓರ್ವ ವ್ಯಕ್ತಿ ತನ್ನ ಸ್ನೇಹಿತನ ಈ ಅನುಭವದ ಬಗ್ಗೆ ಎಕ್ಸ್​ (ಹಿಂದಿನ ಟ್ವಿಟರ್​​​) ನಲ್ಲಿ ಟ್ವೀಟ್​ ಮಾಡಿದ್ದಾರೆ. “ಯಾವುದೇ ಸಾರಿಗೆ ವ್ಯವಸ್ಥೆ ಸಿಗದೆ ನನ್ನ ಸ್ನೇಹಿತ ಸುಮಾರು 12 ಕಿಮೀ ನಡೆದುಕೊಂಡು ಹೋಗಿದ್ದಾರೆ. ಅವನಿಗೆ ಯಾವುದೇ ಕ್ಯಾಬ್‌ಗಳು, ಆಟೋಗಳು, ರಾಪಿಡೋ ಅಥವಾ ಯಾವುದೇ ವಾಹನ ಸಿಗಲಿಲ್ಲ” ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಸೆ.27ರ ಸಂಜೆ ನಾಲ್ಕು ಗಂಟೆಗೆ ಶಾಲೆ ಬಿಟ್ಟ ಮಕ್ಕಳು ಮನೆಗೆ ತಲುಪಿದ್ದು ರಾತ್ರಿ ಎಂಟಕ್ಕೆ !!

ಈ ಟ್ವೀಟ್​​ಗೆ ಹಲವರು ಪ್ರತಿಕ್ರಿಯೆ ನೀಡಿದ್ದು, ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್​ ಜಾಮ್​ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ 2 ದಿನಗಳ ಕಾಲ ವರ್ಕ್​​ಫ್ರಾಮ್​ ಹೋಮ್​​ ನೀಡುವುದು ಅಗತ್ಯವಿದೆ. ಮತ್ತೊಬ್ಬರು ಪ್ರತಿಕ್ರಿಯಿ “ನಿಮ್ಮ ಸ್ನೇಹಿತ ನಡೆಯುವಾಗಲೂ ಟ್ರಾಫಿಕ್ ಜಾಮ್​​ ಎದುರಿಸಿರಬೇಕು. ಏಕೆಂದರೆ ಸಾಮಾನ್ಯವಾಗಿ 12 ಕಿ.ಮೀ ದೂರ ನಡೆಯಲಿ 120-140 ಸಾಕು” ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:42 pm, Fri, 29 September 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ