AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿಯಲ್ಲಿ ನಕಲಿ ಡಾಕ್ಟರ್‌ ಅವತಾರ: 10ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದ್ದ ತಾಯಿ-ಮಗ ವಯನಾಡಿನಲ್ಲಿ ಅರೆಸ್ಟ್

ಬೆಂಗಳೂರಿನಲ್ಲಿ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳ ಮೂಲಕ ನಡೆದ ವಂಚನೆಯ ಪ್ರಕರಣವೊಂದರಲ್ಲಿ, ತಾಯಿ-ಮಗನನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ಡಾಕ್ಟರ್ ಪ್ರೊಫೈಲ್ ಸೃಷ್ಟಿಸಿ 10ಕ್ಕೂ ಹೆಚ್ಚು ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಗಳನ್ನು ಆಡುಗೋಡಿ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಈ ವಂಚಕರು ಮದುವೆಯ ಆಸೆ ತೋರಿಸಿ ಚಿನ್ನಾಭರಣ, ಕಾರು ಹಾಗೂ ನಗದುಗಾಗಿ ಬೇಡಿಕೆ ಇಡುತ್ತಿದ್ದರು.

ಮ್ಯಾಟ್ರಿಮೋನಿಯಲ್ಲಿ ನಕಲಿ ಡಾಕ್ಟರ್‌ ಅವತಾರ: 10ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದ್ದ ತಾಯಿ-ಮಗ ವಯನಾಡಿನಲ್ಲಿ ಅರೆಸ್ಟ್
ಮ್ಯಾಟ್ರಿಮೋನಿ ವಂಚನೆ ಬೆಂಗಳೂರು
ಶಿವಪ್ರಸಾದ್​ ಬಿ.
| Edited By: |

Updated on: Aug 24, 2026 | 10:28 PM

Share

ಬೆಂಗಳೂರು, ಆ.24: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಸುಮಾರು 10ಕ್ಕೂ ಹೆಚ್ಚು ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಕಿರಾತಕ ತಾಯಿ-ಮಗನನ್ನು ಬೆಂಗಳೂರಿನ ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ನಕಲಿ ಡಾಕ್ಟರ್ ಪ್ರದೀಪ್ ಜೋಸೆಫ್ (ಪ್ರದೀಪ್ ಸೊಲೊಮನ್) ಹಾಗೂ ಆತನ ತಾಯಿ ಕಲಾವತಿ ಬಂಧಿತ ಆರೋಪಿಗಳು. ಕೇರಳದ ವಯನಾಡಿನ ಮನೆಯೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

‘ಶಾದಿ ಡಾಟ್ ಕಾಮ್’ ನಂತಹ ಮ್ಯಾಟ್ರಿಮೋನಿಯಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಡಾಕ್ಟರೇಟ್ ಪದವೀಧರ, ಡಾಕ್ಟರ್ ಮತ್ತು ನ್ಯಾಯಾಧೀಶರಾಗಲು ಪರೀಕ್ಷೆ ಬರೆದಿರುವುದಾಗಿ ಸುಳ್ಳು ಮಾಹಿತಿ ಹಾಕಿ ಯುವತಿಯರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದ. ಮೈಸೂರಿನಲ್ಲಿ ಬಂಗ್ಲೆಯೊಂದನ್ನು ಬಾಡಿಗೆಗೆ ಪಡೆದು, ತನಗೆ 3 ಎಕರೆ ಜಾಗ ಹಾಗೂ ಕಾಂಪ್ಲೆಕ್ಸ್ ಇದೆ ಎಂದು ನಂಬಿಸಿ ಶ್ರೀಮಂತಿಕೆಯ ಬಿಲ್ಡಪ್ ನೀಡುತ್ತಿದ್ದ.

ಬೆಂಗಳೂರು ಮೂಲದ ಯುವತಿಯೊಬ್ಬರಿಗೆ ಪರಿಚಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಆರೋಪಿಗಳು, ಮದುವೆಗೆ ಬಂಗಾರದ ಆಭರಣಗಳು, ಐಷಾರಾಮಿ ಕಾರು ಹಾಗೂ ಬೆಂಗಳೂರಿನಲ್ಲಿ ಒಂದು ಮನೆ ತಮಗೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಮುಂಗಡ ಹಣದ ರೂಪದಲ್ಲಿ 20 ಲಕ್ಷ ರೂ. ಪಡೆದುಕೊಂಡ ನಂತರ, ಬೇಡಿಕೆ ಈಡೇರಿಸದಿದ್ದರೆ ಮದುವೆ ರದ್ದುಗೊಳಿಸುವುದಾಗಿ ಬೆದರಿಕೆಯೊಡ್ಡಿದ್ದರು.

ಇದನ್ನೂ ಓದಿ: ಕಲಬುರಗಿ ಡಿಸಿ ವಿರುದ್ಧ ಅವಹೇಳನ ಹೇಳಿಕೆ ಪ್ರಕರಣ: ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್‌ಗೆ ಜಾಮೀನುರಹಿತ ಬಂಧನ ವಾರಂಟ್

ಕಳೆದ ಮೇ ತಿಂಗಳಲ್ಲಿ ಸಂತ್ರಸ್ತ ಯುವತಿಯ ಕುಟುಂಬ ನೀಡಿದ ದೂರಿನ ಮೇರೆಗೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇತ್ತೀಚೆಗೆ ಹೈಕೋರ್ಟ್‌ನಲ್ಲಿ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು. ಕಳೆದ 3 ತಿಂಗಳುಗಳಿಂದ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ ತಾಯಿ-ಮಗನನ್ನು ಜಾಡು ಹಿಡಿದು ಹೋದ ಆಡುಗೋಡಿ ಪೊಲೀಸರು ಅಂತಿಮವಾಗಿ ಕೇರಳದಲ್ಲಿ ಹೆಡೆಮುರಿ ಕಟ್ಟಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ