AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು, ಇಲ್ಲವಾದ್ರೆ ಮುಂದೆ ಕಾಮಗಾರಿ ನೀಡಲ್ಲ: ಗುತ್ತಿಗೆದಾರರಿಗೆ ಡಿಸಿಎಂ ಎಚ್ಚರಿಕೆ 

ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ಪರಿಶೀಲಿಸಿ, ಗುತ್ತಿಗೆದಾರರಿಗೆ ಗಡುವು ನೀಡಿದ್ದು, ವಿಳಂಬವಾದರೆ ಮುಂದಿನ ಕಾಮಗಾರಿ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. 2026-27ರೊಳಗೆ ಮೆಟ್ರೋ ಸಂಚಾರ ಆರಂಭಿಸುವ ಗುರಿ ಹೊಂದಿದ್ದೇವೆಂದ ಅವರು, ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯಡಿ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು, ಇಲ್ಲವಾದ್ರೆ ಮುಂದೆ ಕಾಮಗಾರಿ ನೀಡಲ್ಲ: ಗುತ್ತಿಗೆದಾರರಿಗೆ ಡಿಸಿಎಂ ಎಚ್ಚರಿಕೆ 
ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು : ಡಿಕೆಶಿ
ಭಾವನಾ ಹೆಗಡೆ
|

Updated on: Dec 06, 2025 | 8:29 AM

Share

ಬೆಂಗಳೂರು, ಡಿಸೆಂಬರ್ 06: ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತಿದ್ದು, ಬೆಂಗಳೂರಿನಲ್ಲಿ ಕೆಲಸ ಕಾರ್ಯಗಳನ್ನು ಚುರುಕುಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಶುಕ್ರವಾರದಂದು ಮೆಟ್ರೋ ಕಾಮಗಾರಿ ಪರಿಶೀಲಿಸಿದ ಡಿಸಿಎಂ, ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು. ಇಲ್ಲವಾದಲ್ಲಿ ಇನ್ನು ಮುಂದೆ ಕಾಮಗಾರಿ ನೀಡುವುದಿಲ್ಲವೆನ್ನುತ್ತಾ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

15 ಸಾವಿರ ಕೋಟಿ ರೂ.ಅಂದಾಜು ವೆಚ್ಚದ ಕಾಮಗಾರಿ

ಕೊಡಿಗೆಹಳ್ಳಿ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿ ಪರಿಶೀಲನೆ ನಡೆಸಿದ ಡಿಕೆಶಿ, ಕಾಮಗಾರಿಯಲ್ಲಾದ ವಿಳಂಬಕ್ಕೆ ಕೋಪಗೊಂಡರು. ಸ್ಥಳದಲ್ಲಿದ್ದ ನಾಗಾರ್ಜುನ್ ಕನ್ಸ್ಟ್ರಕ್ಷನ್‌ನ ಪ್ರತಿನಿಧಿ ಪ್ರೇಮ್ ರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡು, ಟೈಂ ಈಸ್ ಮನಿ, ಟೈಂ ಈಸ್ ವ್ಯಾಲ್ಯೂ. ನಿಗದಿತ ಅವಧಿಯಲ್ಲಿ ಕೆಲಸ ಮುಗಿಸಿದ್ರೇ ಮುಂದಿನ ಕಾಮಗಾರಿ ನೀಡುತ್ತೇವೆ ಎಂದು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಲಾಂಚಿಂಗ್ ಗರ್ಡರ್ ಯಂತ್ರವನ್ನು ನಗರದಿಂದ ಹೊರಕ್ಕೆ ಕೊಂಡೊಯ್ಯುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಗುತ್ತಿಗೆದಾರರಿಗೆ ಖಡಕ್ ಆಗಿ ಹೇಳಿದ್ದಾರೆ.

ಕೆ.ಆರ್.ಪುರ–ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಮೆಟ್ರೋ ಸಂಚಾರವನ್ನು 2026 ಡಿಸೆಂಬರ್‌ನಲ್ಲಿ, ಹೆಬ್ಬಾಳ–ಎರೋಪೋರ್ಟ್ ಮಾರ್ಗವನ್ನು 2027 ಜೂನ್‌ನಲ್ಲಿ ಆರಂಭಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದ ಅವರು,  58 ಕಿ.ಮೀ ಉದ್ದದ ಈ ಮಾರ್ಗಕ್ಕೆ 15 ಸಾವಿರ ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. 30 ಮೆಟ್ರೋ ನಿಲ್ದಾಣಗಳಲ್ಲಿ 5–10 ಸ್ಟೇಷನ್ ಬ್ಲಾಕ್‌ಗಳು ಪೂರ್ಣಗೊಳ್ಳಿತ್ತಿದ್ದಂತೆ ಸಂಚಾರ ಭಾಗಶಃ ಆರಂಭಿಸುವ ನಿರ್ಧಾರ ಮಾಡಿದ್ದೇವೆಂದು ತಿಳಿಸಿದ್ದಾರೆ.

ಇದನ್ನೂ ಓದಿ ಡಿಕೆಶಿ ​ ಬುಡಕ್ಕೆ ಮತ್ತೆ ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿಯಿಂದ ಬಂತು ನೋಟಿಸ್

ಬಿಸಿನೆಸ್ ಕಾರಿಡಾರ್ ಯೋಜನೆಗೆ ಒಪ್ಪಿದ ರೈತರಿಗೆ ಪರಿಹಾರ

ಇನ್ನೊಂದೆಡೆ, ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಭೂಮಿ ನೀಡಲು ಒಪ್ಪಿದ ರೈತರಿಗೆ ಕೊಟ್ಟ ಮಾತಿನಂತೆ ಪರಿಹಾರ ನೀಡಲಾಗುವುದು, ಒಪ್ಪದವರಿಗೆ ಹಳೆಯ ದರದಲ್ಲಿ ಡೆಪಾಸಿಟ್ ಮಾಡಲು ಸೂಚಿಸಲಾಗಿದೆ ಎಂದು ಡಿಸಿಎಂ ಹೇಳಿದ್ದಾರೆ. ರಸ್ತೆ ನಿರ್ಮಾಣ ತಪ್ಪದೇ ನಡೆಯಲಿದೆ. ರೈತರಿಗೆ ಐದು ಆಯ್ಕೆಗಳನ್ನು ನೀಡಿದ್ದೇವೆ. 35 ಪರ್ಸೆಂಟ್ ಕಮರ್ಷಿಯಲ್ ಲ್ಯಾಂಡ್ ಕೊಡುವುದಾಗಿಯೂ ಹೇಳಿದ್ದೇವೆ. ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈರಣ್ಣ ಬಸವ  ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು