AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ; ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಇಂದು ಚಾಲನೆ

Bengaluru Metro: ಇಂದಿನಿಂದಲೇ ಈ ಮಾರ್ಗ  ಜನರ ಸೇವೆಗೆ ಲಭ್ಯವಾಗಲಿದ್ದು, ರೈಲ್ವೆ ಸುರಕ್ಷತಾ ಆಯುಕ್ತ ಅಭಯ್ ಕುಮಾರ್ ರೈ ಆಗಸ್ಟ್ 11 ಹಾಗೂ 12 ರಂದು ಸುರಕ್ಷತಾ ಪರೀಕ್ಷೆ ನಡೆಸಿ ಸುರಕ್ಷತಾ ಪ್ರಮಾಣಪತ್ರ ನೀಡಿರುವ ಕಾರಣ ಪ್ರಯಾಣಿಕ ಬಳಕೆಗೆ ಮಾರ್ಗವನ್ನು ಅನುವು ಮಾಡಿಕೊಡಲಾಗಿದೆ.

Namma Metro: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ; ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಇಂದು ಚಾಲನೆ
ನಮ್ಮ ಮೆಟ್ರೋ
TV9 Web
| Edited By: |

Updated on:Aug 29, 2021 | 7:17 AM

Share

ಬೆಂಗಳೂರು: ಉದ್ಯಾನನಗರಿಯಲ್ಲಿ ಮೆಟ್ರೋ (Namma Metro) ಪ್ರಯಾಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುವವರಿಗೆ ಇಂದಿನಿಂದ ಹೊಸ ಮಾರ್ಗವೊಂದು ತೆರೆದುಕೊಳ್ಳಲಿದ್ದು, ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಇಂದು ಚಾಲನೆ ಸಿಗಲಿದೆ. ಸದರಿ ಮೆಟ್ರೋ ವಿಸ್ತರಿತ ಮಾರ್ಗಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿದ್ದು, ಮೆಟ್ರೋ (Bengaluru Metro) ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಸಚಿವರಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಭೋಜನ ಕೂಟ ಆಯೋಜನೆ ಮಾಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಉಪಸ್ಥಿತರಿರುವರು.

ಇಂದು ಉದ್ಘಾಟನೆಯಾಗಲಿರುವ ಈ ಮಾರ್ಗ ಸೋಮವಾರ ಬೆಳಗ್ಗೆ 7ರಿಂದ ಜನರ ಸೇವೆಗೆ ಅಧಿಕೃತವಾಗಿ ಲಭ್ಯವಾಗಲಿದ್ದು, ರೈಲ್ವೆ ಸುರಕ್ಷತಾ ಆಯುಕ್ತ ಅಭಯ್ ಕುಮಾರ್ ರೈ ಆಗಸ್ಟ್ 11 ಹಾಗೂ 12 ರಂದು ಸುರಕ್ಷತಾ ಪರೀಕ್ಷೆ ನಡೆಸಿ ಸುರಕ್ಷತಾ ಪ್ರಮಾಣಪತ್ರ ನೀಡಿರುವ ಕಾರಣ ಪ್ರಯಾಣಿಕ ಬಳಕೆಗೆ ಮಾರ್ಗವನ್ನು ಅನುವು ಮಾಡಿಕೊಡಲಾಗಿದೆ. ಒಟ್ಟು 7.53 ಕಿ.ಮೀ ಉದ್ದದ 6 ಎತ್ತರಿಸಿದ ನಿಲ್ದಾಣ ಇರುವ ಮೈಸೂರು ರಸ್ತೆ- ಕೆಂಗೇರಿ ಮೆಟ್ರೋ ಮಾರ್ಗವು 1,560 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಬಿಎಂಆರ್​ಸಿಎಲ್ ಕಳೆದ ಮೂರು ತಿಂಗಳಿನಿಂದ ಟ್ರಯಲ್ ರನ್ ನಡೆಸಿದೆ.

ನಾಯಂಡಹಳ್ಳಿ- ಕೆಂಗೇರಿ ಮೆಟ್ರೋ ರೈಲು ಸಂಚಾರ ಸೇವೆಯು ಹತ್ತು ನಿಮಿಷಗಳಿಗೆ ಒಂದು ರೈಲು ಕಾರ್ಯಚರಿಸಲು ಮೆಟ್ರೋ ನಿಗಮ ನಿರ್ಧರಿಸಿತ್ತು. ಆದರೆ ಈಗ ಪ್ರಯಾಣಿಕರ ದಟ್ಟಣೆ ನೋಡಿ ರೈಲು ಸಂಚಾರ ಸೇವೆಯನ್ನು ಮತ್ತಷ್ಟು ಹೆಚ್ಚಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಇನ್ನಿತರ ಸಮಯದಲ್ಲಿ 10 ನಿಮಿಷಗಳಿಗೆ ಒಂದರಂತೆ ರೈಲು ಸಂಚಾರ ಇರುತ್ತದೆ. ಅಂದರೆ ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ಬೆಳಿಗ್ಗೆ 7 ರಿಂದ 11 ಗಂಟೆ ಮತ್ತು ಸಂಜೆ 4.30 ರಿಂದ 7.30 ರವರೆಗೆ ಇರಲಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಾಗ 5 ರಿಂದ 8 ನಿಮಿಷಗಳಿಗೆ ಒಂದರಂತೆ ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ರೈಲು ಸಂಚರಿಸಲಿದೆ ಎಂದು ಬಿಎಂಆರ್​ಸಿಎಲ್​ ಅಧಿಕಾರಿಗಳು ಹೇಳಿದ್ದಾರೆ.

ಮೆಟ್ರೋ ರೈಲುಗಳು ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ನಡುವೆ ಮಾತ್ರ ಸಂಚರಿಸಲಿದೆ. ಅನಿವಾರ್ಯತೆ ಇದ್ದಾಗ ಮಾತ್ರ ಕಡಿಮೆ ಸಮಯಕ್ಕೆ ಒಂದರಂತೆ ರೈಲು ಸಂಚರಿಸಲು ಬಿಎಂಆರ್​ಸಿಎಲ್ ಕ್ರಮಕೈಗೊಳ್ಳಲಿದೆ. 7.5 ಕಿಲೋಮೀಟರ್ ವಿಸ್ತರಿಸಿದ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಿಸಿದರೆ, ಒಟ್ಟು 55 ಕಿಲೋಮೀಟರ್ ಬಿಎಂಆರ್​ಸಿಎಲ್ ನಗರದಲ್ಲಿ ಮೆಟ್ರೋ ಸಂಚರಿಸಿದಂತಾಗುತ್ತದೆ.

ಇನ್ನು ವಿಸ್ತರಿಸಿದ ನೇರಳೆ ಮಾರ್ಗದ ಪ್ರಯಾಣ ದರವನ್ನು ನಿಗದಿ ಪಡಿಸಲಾಗಿದ್ದು, ಬೈಯಪ್ಪನಹಳ್ಳಿಯಿಂದ ಕೇಂಗೇರಿಗೆ 56 ರೂಪಾಯಿ. ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಗೆ 45 ರೂಪಾಯಿ ಟಿಕೆಟ್ ದರವಿದೆ. ಅದರಂತೆ ಮೈಸೂರು ರಸ್ತೆಯಿಂದ ಕೆಂಗೇರಿವಗರೆಗೆ 6 ಮೆಟ್ರೋ ನಿಲ್ದಾಣಗಳು ಬರಲಿದೆ.

55 ಕಿಲೋಮೀಟರ್ ಸಂಚಾರ ಸಂಪರ್ಕ ಸಾಧಿಸಿರುವ ಪೈಕಿ ದೆಹಲಿ ಹಾಗೂ ಹೈದರಾಬಾದ್ ಮೊದಲೆರಡು ಸ್ಥಾನ ಕಾಯ್ದುಕೊಂಡಿದೆ. ಬೆಂಗಳೂರು ಮೆಟ್ರೋ ನಂತರದ ಸ್ಥಾನದಲ್ಲಿದೆ. ನಾಗಸಂದ್ರ -ರೇಷ್ಮೆ ಸಂಸ್ಥೆ ವರೆಗಿನ ಹಸಿರು ಮಾರ್ಗ 30 ಕಿಲೋಮಿಟರ್, ಬೈಯಪ್ಪನಹಳ್ಳಿ ಕೆಂಗೇರಿವರೆಗಿನ ನೇರಳೆ ಮಾರ್ಗ 25 ಕಿಲೋಮೀಟರ್ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 56 ಕಿಮೀ ಉದ್ದದ 2 ಮೆಟ್ರೋ ಮಾರ್ಗ ನಿರ್ಮಾಣಕ್ಕೆ 5 ಕೋಟಿ ಡಾಲರ್ ಸಾಲ: ಒಪ್ಪಂದಕ್ಕೆ ಸಹಿ 

ಹುಬ್ಬಳ್ಳಿ ಧಾರವಾಡ ಮೆಟ್ರೋ ರೈಲು ಮಾರ್ಗ ನಿರ್ಮಾಣ; ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ

(Bengaluru Metro extended purple line between Mysore road Kengeri inauguration)

Published On - 6:58 am, Sun, 29 August 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ