AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro Pillar Collapse: ಅವಘಡಕ್ಕೆ ಇಂಜಿನಿಯರ್​ ಹಾಗೂ ಗುತ್ತಿಗೆದಾರರೇ ಕಾರಣ- ಐಐಎಸ್​ಸಿ ತಜ್ಞರ ವರದಿಯಲ್ಲಿ ಉಲ್ಲೇಖ

ಜನವರಿ 10 ರಂದು ಬೆಂಗಳೂರು ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜ.21) ಐಐಎಸ್​ಸಿ ತಜ್ಞರ ತಂಡ BMRCL ಎಂಡಿ ಅಂಜುಂ ಪರ್ವೇಜ್​ ಅವರಿಗೆ ತನಿಕಾ ವರದಿ ಸಲ್ಲಿಸಲಿದೆ.

Bengaluru Metro Pillar Collapse: ಅವಘಡಕ್ಕೆ ಇಂಜಿನಿಯರ್​ ಹಾಗೂ ಗುತ್ತಿಗೆದಾರರೇ ಕಾರಣ- ಐಐಎಸ್​ಸಿ ತಜ್ಞರ ವರದಿಯಲ್ಲಿ ಉಲ್ಲೇಖ
ಮೆಟ್ರೋ ಪಿಲ್ಲರ್ ಕುಸಿತ
TV9 Web
| Updated By: ವಿವೇಕ ಬಿರಾದಾರ|

Updated on:Jan 21, 2023 | 9:44 AM

Share

ಬೆಂಗಳೂರು: ಜನವರಿ 10 ರಂದು ನಿರ್ಮಾಣಹಂತದ ಮೆಟ್ರೋ ಪಿಲ್ಲರ್ ಬಿದ್ದು (Bengaluru Metro Pillar Collapse) ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜ.21) ಐಐಎಸ್​ಸಿ ತಜ್ಞರ ತಂಡ BMRCL ಎಂಡಿ ಅಂಜುಂ ಪರ್ವೇಜ್​ ಅವರಿಗೆ ತನಿಕಾ ವರದಿ ಸಲ್ಲಿಸಲಿದೆ. ಕಿಶೋರ್ ಚಂದ್ರ ನೇತೃತ್ವದ ತಂಡ ಮಧ್ಯಾಹ್ನದ ನಂತರ ವರದಿ ಸಲ್ಲಿಸಲಿದ್ದು, ವರದಿಯಲ್ಲಿ ತಾಯಿ, ಮಗು ಸಾವಿಗೆ ಇಂಜಿನಿಯರ್​, ಗುತ್ತಿಗೆದಾರರೇ ಕಾರಣ ಎಂದು ಉಲ್ಲೇಖಿಸಲಾಗಿದೆ.

IISC ಸಿದ್ದಪಡಿಸಿರುವ ವರದಿಯಲ್ಲಿ ಏನಿದೆ? IISC ಏನೆಲ್ಲ ತನಿಖೆ ಮಾಡಿದೆ

IISC ತಂಡ ತನಿಖೆಯನ್ನು ಪ್ರಾರಂಭಿಸುವಾಗ, ಕಾಮಗಾರಿಗೆ ಬಳಸಿದ್ದ ಕಂಬಿ, ಮರಳು, ಸಿಮೆಂಟ್​ಗಳ ಕ್ವಾಲಟಿ ರಿಪೋರ್ಟ್ ಪಡೆದಿತ್ತು. ಇದರ ಜೊತೆಗೆ ಜಲ್ಲಿ, ಮಣ್ಣು, ಸಿಮೆಂಟ್​ಗಳ ಟೆಸ್ಟಿಂಗ್ ರಿಪೋರ್ಟ್ ಪಡೆದಿದೆ. ಈ ಪಿಲ್ಲರ್ ನಿರ್ಮಾಣದ ವೇಳೆ BMRCL 18 ಮೀಟರ್ ಎತ್ತರದ ಕಂಬಿ ಕಟ್ಟಿತ್ತು. ಈ ಎತ್ತರದಲ್ಲಿ 6 ಅಂತಸ್ಥಿನ ಮನೆ ಕಟ್ಟಬಹುದು, ಅಷ್ಟು ಉದ್ದದ ಕಂಬಿ ಪಿಲ್ಲರ್ ಯಾಕೆ ಕಟ್ಟಿದರು.? ಇಷ್ಟು ಎತ್ತರದ ಪಿಲ್ಲರ್​ ಕಟ್ಟಿದಾಗ, ಮುಂಜಾಗ್ರತಾ ಕ್ರಮವಾಗಿ ಕಂಬಿಯ ಪಿಲ್ಲರ್​ಗೆ ಸರಿಯಾದ ಸಪೋರ್ಟ್ ನೀಡಬೇಕಿತ್ತು. ಸಪೋರ್ಟ್ ನೀಡದಿದ್ದದ್ದೆ ಈ ಅನಾಹುತಕ್ಕೆ ಕಾರಣವಾಗಿದೆ ಎಂಬುವುದು ತನಿಖೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ: ಹೈದರಾಬಾದ್‌ನ ಐಐಟಿ ತಜ್ಞರ ತಂಡದ ವರದಿಯಲ್ಲಿ ದುರಂತದ ಕಾರಣ ಬಹಿರಂಗ

ಕೆಲಸಗಾಗರು ಕಂಬಿಯ ಪಿಲ್ಲರ್​​ನ್ನು ನೇರವಾಗಿ ನಿಲ್ಲಿಸಲು ಸುತ್ತಲು ಸಪೋರ್ಟ್ ನೀಡಬೇಕಿತ್ತು. ಅದು ಕೆಲಸಗಾರರಿಗೆ ಗೊತ್ತಾಗಲ್ಲ, ಗುತ್ತಿಗೆದಾರರೇ​ ಹಾಗೂ ಇಂಜಿನಿಯರ್​ಗಳೇ ಅದನ್ನು ನೋಡಿಕೊಳ್ಳಬೇಕು. ಸದ್ಯಕ್ಕೆ ಗುತ್ತಿಗೆದಾರರೇ ಹಾಗೂ ಇಂಜಿನಿಯರ್​ಗಳೇ ಅನಾಹುತಕ್ಕೆ ನೇರ ಹೊಣೆ. ಕಂಟ್ರ್ಯಾಕ್ಟರ್​ ಹಾಗೂ ಇಂಜಿನಿಯರ್​ಗಳನ್ನೆ ತಪ್ಪಿತಸ್ಥರೆಂದು ವರದಿಯಲ್ಲಿ ಉಲ್ಲೇಖವಾಗಿದೆ.

ಘಟನೆ ಹಿನ್ನೆಲೆ

ಜನವರಿ 10 ರಂದು ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಕಂಬಿ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟಿದ್ದರು. ಮೃತ ತೇಜಸ್ವಿನಿ ಹಾಗೂ ಅವರ ಪತಿ ತಮ್ಮಿಬ್ಬರು ಅವಳಿ ಮಕ್ಕಳ ಜೊತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಪಿಲ್ಲರ್‌ ಅವರ ಬೈಕ್ ಮೇಲೆ ಬಿದ್ದಿತ್ತು. ಅವರ ಕುಟುಂಬದ ನಾಲ್ವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೇಜಸ್ವಿನಿ ಹಾಗೂ ಮಗು ವಿಹಾನ್ ಮೃತಟ್ಟಿದ್ದಾರೆ. ಒಂದು ವರ್ಷದ ಮಗು ಮತ್ತು ಲೋಹಿತ್‌ ಕುಮಾರ್ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 am, Sat, 21 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ