AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ರೆಡ್ ಲೈನ್ ವೆಚ್ಚ ಕಡಿತಕ್ಕೆ ಒಂದು ಸ್ಟೇಷನನ್ನೇ ಕೈಬಿಡಲು ನಿರ್ಧರಿಸಿದ ಬಿಎಂಆರ್​ಸಿಎಲ್!

ಬೆಂಗಳೂರಿನ ಸರ್ಜಾಪುರ-ಹೆಬ್ಬಾಳ ಮೆಟ್ರೋ ‘ರೆಡ್ ಲೈನ್’ ಯೋಜನೆಯ ಅಂದಾಜು ವೆಚ್ಚ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದ ಹಿನ್ನೆಲೆಯಲ್ಲಿ, ಬಿಎಂಆರ್‌ಸಿಎಲ್ ವೆಚ್ಚ ಕಡಿತಕ್ಕೆ ಮುಂದಾಗಿದೆ. ಪರಿಷ್ಕೃತ ಯೋಜನಾ ವರದಿಯಲ್ಲಿ (DPR) ಬರೋಬ್ಬರಿ 2,920 ಕೋಟಿ ರೂಪಾಯಿ ಉಳಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಮೇಖ್ರಿ ಸರ್ಕಲ್ ಮತ್ತು ಗಂಗಾನಗರ ನಡುವೆ ಉದ್ದೇಶಿಸಲಾಗಿದ್ದ ಒಂದು ಪ್ರಮುಖ ಅಂಡರ್‌ಗ್ರೌಂಡ್ ಮೆಟ್ರೋ ನಿಲ್ದಾಣವನ್ನೇ ಕೈಬಿಡಲಾಗಿದೆ.

ನಮ್ಮ ಮೆಟ್ರೋ ರೆಡ್ ಲೈನ್ ವೆಚ್ಚ ಕಡಿತಕ್ಕೆ ಒಂದು ಸ್ಟೇಷನನ್ನೇ ಕೈಬಿಡಲು ನಿರ್ಧರಿಸಿದ ಬಿಎಂಆರ್​ಸಿಎಲ್!
ರೆಡ್ ಲೈನ್ ಮೆಟ್ರೋ ಮಾರ್ಗImage Credit source: tv9
ಕಿರಣ್​ ಸೂರ್ಯ
| Edited By: |

Updated on: Jun 19, 2026 | 8:50 AM

Share

ಬೆಂಗಳೂರು, ಜೂನ್ 19: ಬೆಂಗಳೂರಿನ ಸಂಚಾರ ದಟ್ಟಣೆಗೆ ದೊಡ್ಡ ಮಟ್ಟದ ಪರಿಹಾರ ನೀಡಲಿರುವ ಬಹುನಿರೀಕ್ಷಿತ ಸರ್ಜಾಪುರ-ಹೆಬ್ಬಾಳ ಮೆಟ್ರೋ ‘ರೆಡ್ ಲೈನ್’ (Red Line Metro) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ಪಡೆದುಕೊಳ್ಳಲು ಬಿಎಂಆರ್‌ಸಿಎಲ್ (BMRCL) ಮಹತ್ವದ ಹೆಜ್ಜೆ ಇಟ್ಟಿದೆ. ಈ ಕಾರಿಡಾರ್‌ನ ವಿಸ್ತೃತ ಯೋಜನಾ ವರದಿಯ (DPR) ಅಂದಾಜು ವೆಚ್ಚ ಅತಿ ಹೆಚ್ಚಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಎರಡು ಬಾರಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರದ ನಿಯಮಾವಳಿಗಳಿಗೆ ಪೂರಕವಾಗಿರಲು ಹಾಗೂ ಯೋಜನೆಯನ್ನು ಹಳಿಗೆ ತರಲು ಬಿಎಂಆರ್‌ಸಿಎಲ್ ಸುಮಾರು 2,920 ಕೋಟಿ ರೂಪಾಯಿಗಳ ವೆಚ್ಚವನ್ನು ಕಡಿತಗೊಳಿಸಲು ನಿರ್ಧರಿಸಿದ್ದು, ಇದಕ್ಕಾಗಿ ಮಾರ್ಗದಲ್ಲಿದ್ದ ಒಂದು ಪ್ರಮುಖ ನಿಲ್ದಾಣವನ್ನೇ ಕೈಬಿಡಲು ಮುಂದಾಗಿದೆ.

ಮುಖ್ಯಾಂಶಗಳು

  • ವೆಚ್ಚ ಕಡಿತಕ್ಕೆ ಬಿಎಂಆರ್‌ಸಿಎಲ್ ಬಿಗ್ ಪ್ಲಾನ್.
  • ಪಶು ವೈದ್ಯಕೀಯ ಕಾಲೇಜು ನಿಲ್ದಾಣ ಕಡಿತ.
  • ಕೇಂದ್ರದಿಂದ ಶೀಘ್ರದಲ್ಲೇ ಸಿಗಲಿದೆ ಗ್ರೀನ್ ಸಿಗ್ನಲ್.

ಪಶು ವೈದ್ಯಕೀಯ ಕಾಲೇಜು ನಿಲ್ದಾಣಕ್ಕೆ ಕೊಕ್

ಸರ್ಜಾಪುರದಿಂದ ಹೆಬ್ಬಾಳ ನಡುವಿನ ಒಟ್ಟು 37 ಕಿಲೋಮೀಟರ್ ಉದ್ದದ ಈ ಯೋಜನೆಗೆ 2024ರಲ್ಲಿ ರಾಜ್ಯ ಸರ್ಕಾರ 28,405 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಒಪ್ಪಿಗೆ ನೀಡಿತ್ತು. ಅಂದರೆ ಪ್ರತಿ ಕಿಲೋಮೀಟರ್‌ಗೆ ಅಂದಾಜು 776.3 ಕೋಟಿ ರೂಪಾಯಿ ವೆಚ್ಚವಾಗುತ್ತಿತ್ತು. ಇದರಲ್ಲಿ 17 ಎಲಿವೇಟೆಡ್ (ಮೇಲ್ಸೇತುವೆ) ಮತ್ತು 11 ಅಂಡರ್‌ಗ್ರೌಂಡ್ (ಸುರಂಗ) ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ಕೇಂದ್ರದ ಆಕ್ಷೇಪದ ಬಳಿಕ ರಚನೆಯಾದ ಸ್ವತಂತ್ರ ಸಮಿತಿಯ ಶಿಫಾರಸಿನ ಮೇರೆಗೆ, ಮೇಖ್ರಿ ಸರ್ಕಲ್ ಹಾಗೂ ಗಂಗಾನಗರ ನಡುವೆ ನಿರ್ಮಾಣವಾಗಬೇಕಿದ್ದ ‘ಪಶು ವೈದ್ಯಕೀಯ ಕಾಲೇಜು (Veterinary College)’ ಅಂಡರ್‌ಗ್ರೌಂಡ್ ಮೆಟ್ರೋ ನಿಲ್ದಾಣವನ್ನು ಪರಿಷ್ಕೃತ ವರದಿಯಲ್ಲಿ ಕೈಬಿಡಲಾಗಿದೆ. ಬಿಎಂಆರ್‌ಸಿಎಲ್‌ನ ಈ ನಿರ್ಧಾರಕ್ಕೆ ಆ ಭಾಗದ ಪ್ರಯಾಣಿಕರು ಕೊಂಚ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಕೇಂದ್ರದಿಂದ ಗ್ರೀನ್ ಸಿಗ್ನಲ್ ಸಾಧ್ಯತೆ

ಭೂಸ್ವಾಧೀನ, ಸುರಂಗ ಕೊರೆಯುವಿಕೆ, ಹಳಿ ಜೋಡಣೆ, ಸಿಗ್ನಲಿಂಗ್, ವಿದ್ಯುತ್ ಸರಬರಾಜು ಮತ್ತು ರೈಲು ಕೋಚ್‌ಗಳ ಪೂರೈಕೆ ಸೇರಿದಂತೆ 13 ಪ್ರಮುಖ ಅಂಶಗಳನ್ನು ಆಧರಿಸಿ ಬಿಎಂಆರ್‌ಸಿಎಲ್ ಈ ಹಿಂದೆ ವೆಚ್ಚವನ್ನು ಸಮರ್ಥಿಸಿಕೊಂಡಿತ್ತು. ಆದರೆ ಯೋಜನೆ ಮತ್ತಷ್ಟು ವಿಳಂಬವಾಗುವುದನ್ನು ತಪ್ಪಿಸಲು ಸದ್ಯ 2,920 ಕೋಟಿ ರೂಪಾಯಿಗಳನ್ನು ಕಡಿತಗೊಳಿಸಿ ಹೊಸ ಡಿಪಿಆರ್ ಸಿದ್ಧಪಡಿಸಲಾಗಿದೆ. ಈ ಪರಿಷ್ಕೃತ ವರದಿಯನ್ನು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತಿದ್ದು, ವೆಚ್ಚ ಕಡಿಮೆಯಾಗಿರುವುದರಿಂದ ಈ ಬಾರಿ ಕೇಂದ್ರ ಸಚಿವಾಲಯದಿಂದ ‘ರೆಡ್ ಲೈನ್’ ಯೋಜನೆಗೆ ಶೀಘ್ರದಲ್ಲೇ ಹಸಿರು ನಿಶಾನೆ ಸಿಗುವ ದಟ್ಟ ಮುನ್ಸೂಚನೆ ಇದೆ. ಯೋಜನೆಗೆ ಅನುಮೋದನೆ ಸಿಗುವ ಸಾಧ್ಯತೆ ಹೆಚ್ಚಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ