AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೆಟ್ರೋ ಮೂಲಕ ಜೀವಂತ ಹೃದಯ ಯಶಸ್ವಿ ರವಾನೆ

ಬೆಂಗಳೂರು ಮೆಟ್ರೋ ಐದನೇ ಬಾರಿಗೆ ಜೀವಂತ ಮಾನವ ಹೃದಯವನ್ನು ಕೇವಲ 7 ನಿಮಿಷಗಳಲ್ಲಿ ಆರು ಜನರ ವೈದ್ಯಕೀಯ ತಂಡವು ಯಶಸ್ವಿಯಾಗಿ ಸಾಗಿಸಿದೆ. ನಗರದ ಟ್ರಾಫಿಕ್ ಸಮಸ್ಯೆ ನಡುವೆ, ಅಸ್ಟರ್ ಆರ್.ವಿ. ಆಸ್ಪತ್ರೆಯಿಂದ ನಾರಾಯಣ ಹೃದಯಾಲಯಕ್ಕೆ ಯೆಲ್ಲೋ ಲೈನ್ ಮೆಟ್ರೋ ಬಳಸಿ ಜೀವ ಉಳಿಸುವ ಕಾರ್ಯ ಮಾಡಲಾಗಿದೆ.

ಬೆಂಗಳೂರು: ಮೆಟ್ರೋ ಮೂಲಕ ಜೀವಂತ ಹೃದಯ ಯಶಸ್ವಿ ರವಾನೆ
ಮೆಟ್ರೋ ಮೂಲಕ ಜೀವಂತ ಹೃದಯದ ಯಶಸ್ವಿ ರವಾನೆ
Kiran Surya
| Edited By: |

Updated on:Nov 18, 2025 | 3:15 PM

Share

ಬೆಂಗಳೂರು, ನವೆಂಬರ್ 18: ನಗರದಲ್ಲಿ ಐದನೇ ಬಾರಿ ಮೆಟ್ರೋ (Namma Metro) ರೈಲಿನ ಮೂಲಕ  ಮಾನವನ ಜೀವಂತ  ಹೃದಯವನ್ನು ಸುರಕ್ಷಿತವಾಗಿ ರವಾನೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೇವಲ 7 ನಿಮಿಷಗಳಲ್ಲಿ ಯೆಲ್ಲೋ ಲೈನಿನ ಮೆಟ್ರೋದಲ್ಲಿ ಹೃದಯವನ್ನು ರವಾನಿಸಲಾಗಿಸಲಾಗಿದ್ದು, ಸುರಕ್ಷಿತವಾಗಿ ಹಸ್ತಾಂತರಿಸಲಾಗಿದೆ.

ಕೇವಲ 7 ನಿಮಿಷಗಳಲ್ಲಿ ಹೃದಯ ರವಾನೆ

ಅಸ್ಟರ್ ಆರ್.ವಿ. ಆಸ್ಪತ್ರೆಯಲ್ಲಿ ಸಂಗ್ರಹಿಸಲ್ಪಟ್ಟ ಹೃದಯವನ್ನು, ನಾರಾಯಣ ಹೃದಯಾಲಯದ ರೋಗಿಗೆ ತುರ್ತು ಅವಶ್ಯಕತೆಯ ಹಿನ್ನೆಲೆಯಲ್ಲಿ, ನಿನ್ನೆ ಸಂಜೆ 7.26ಕ್ಕೆ ವೈದ್ಯಕೀಯ ತಂಡವು ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ತಂದಿತ್ತು. ಯೆಲ್ಲೋ ಲೈನಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್‌ನಿಂದ ಬೊಮ್ಮಸಂದ್ರ ಮೆಟ್ರೋ ಸ್ಟೇಷನ್‌ವರೆಗೆ ಕೇವಲ 7 ನಿಮಿಷಗಳಲ್ಲಿ, ಒಟ್ಟು 15 ಮೆಟ್ರೋ ನಿಲ್ದಾಣಗಳನ್ನು ದಾಟಿ ಹೃದಯವನ್ನು ಸಾಗಿಸಲಾಯಿತು.

ಹೃದಯ ಸಾಗಾಣೆಯ ವೀಡಿಯೋ ಇಲ್ಲಿದೆ

ಇದನ್ನೂ ಓದಿ ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

6 ಜನರ ವೈದ್ಯಕೀಯ ತಂಡದೊಂದಿಗೆ ಹೃದಯದ ಯಶಸ್ವಿ ಹಸ್ತಾಂತರ

ಆರು ಜನರ ವೈದ್ಯಕೀಯ ತಂಡವು ಭದ್ರತಾ ಪರಿಶೀಲನೆ ಮುಗಿಸಿ 7.29ಕ್ಕೆ ಮೆಟ್ರೋ ಪ್ಲಾಟ್‌ಫಾರ್ಮ್ ತಲುಪಿದ್ದು, 7.32ಕ್ಕೆ ವಿಶೇಷ ಸೌಲಭ್ಯ ಒದಗಿಸಿದ ತರಬೇತಿ ಪಡೆದ ಸಿಬ್ಬಂದಿಗಳೊಂದಿಗೆ ರೈಲನ್ನು ಹತ್ತಿದ್ದರು. ರೈಲು 7.39ಕ್ಕೆ ಬೊಮ್ಮಸಂದ್ರ ಮೆಟ್ರೋ ನಿಲ್ದಾಣ ತಲುಪಿದ ನಂತರ, ಹೃದಯವನ್ನು ತಕ್ಷಣ ಆಂಬ್ಯುಲೆನ್ಸ್‌ಗೆ ಸ್ಥಳಾಂತರಿಸಲಾಯಿತು. ನಂತರ ಆಂಬ್ಯುಲೆನ್ಸ್ 8.12ಕ್ಕೆ ನಾರಾಯಣ ಹೃದಯಾಲಯ ತಲುಪಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:12 pm, Tue, 18 November 25

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?