AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈವರೆಗೂ ಇಂಥ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ
ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 26, 2023 | 2:34 PM

ಬೆಂಗಳೂರು: ನಗರದಲ್ಲಿ ಶೀಘ್ರದಲ್ಲಿಯೇ ರಾಷ್ಟ್ರೀಯ ಸಾಮಾನ್ಯ ಸಾರಿಗೆ ಕಾರ್ಡ್ (National Common Mobility Card – NCMC) ಪರಿಚಯಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ನಿಗಮವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರವು ಆರಂಭಿಸಿರುವ ‘ಒಂದು ದೇಶ ಒಂದು ಕಾರ್ಡ್​’ ಯೋಜನೆಯ ಭಾಗವಾಗಿ ಹೊಸ ಕಾರ್ಡ್​ಗಳನ್ನು ಪರಿಚಯಿಸಲಾಗುವುದು ಎಂದು ಮೆಟ್ರೋ ನಿಗಮ (BMRCL) ಹೇಳಿದೆ. ಈ ಸಾರಿಗೆ ಕಾರ್ಡ್​ಗಳನ್ನು ವಿವಿಧ ರಾಜ್ಯಗಳ ಸಾರಿಗೆ ನಿಗಮಗಳಲ್ಲಿ ಹಾಗೂ ಮೆಟ್ರೋ ಮತ್ತಿತರ ಸಾರಿಗೆ ವ್ಯವಸ್ಥೆಗಳಲ್ಲಿ ಈ ಕಾರ್ಡ್​ಗಳನ್ನು ಬಳಸಬಹುದು. ಬೆಂಗಳೂರಿನಲ್ಲಿ 2023ರಿಂದ ಈ ಕಾರ್ಡ್​ಗಳನ್ನು ಜಾರಿಗೊಳಿಸಲಾಗುವುದು ಎಂದು ಬುಧವಾರ ನಿಗಮವು ಹೇಳಿದೆ.

ಕಳೆದ ಡಿಸೆಂಬರ್ 2022ರಲ್ಲಿ ಮೆಟ್ರೋ ರೈಲುಗಳಲ್ಲಿ 1.69 ಕೋಟಿ ಪ್ರಯಾಣಿಕರು ಸಂಚರಿಸಿದ್ದರು. ನಿಗಮವು ₹ 40.30 ಕೋಟಿ ಆದಾಯ ಪಡೆದಿತ್ತು. ಹೊಸ ವರ್ಷಾಚರಣೆಯ ದಿನ (ಡಿ 31-ಜ1) ಅತಿಹೆಚ್ಚು ಪ್ರಯಾಣಿಕರು (6.41 ಲಕ್ಷ) ಮೆಟ್ರೋ ರೈಲುಗಳಲ್ಲಿ ಸಂಚರಿಸಿದ್ದರು.

ಮುಂಬೈ ಮೆಟ್ರೋದಲ್ಲಿ ಆರಂಭ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈ ಯೋಜನೆ ಆರಂಭವಾಗಲಿದೆ ಎಂಬ ಮಾತುಗಳು ಬಹಳ ಹಿಂದಿನಿಂದ ಕೇಳಿಬರುತ್ತಿತ್ತು. ಈ ಯೋಜನೆ ಆರಂಭವಾದರೆ ಒಂದೇ ಕಾರ್ಡ್ ಅನ್ನು ಬಿಎಂಟಿಸಿ ಬಸ್ ಹಾಗೂ ಮೆಟ್ರೋ ರೈಲಿಗೆ ಬಳಸಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 2019ರಲ್ಲಿ ಈ ಕಾರ್ಡ್​ಗೆ ಚಾಲನೆ ನೀಡಿದ್ದರು. ಯೋಜನೆಯ ಅನುಷ್ಠಾನಕ್ಕೆ ಖಾಸಗಿ ಬ್ಯಾಂಕ್ ಒಂದಕ್ಕೆ ಬೆಂಗಳೂರು ಮೆಟ್ರೋ ನಿಗಮವು ಹೊಣೆಗಾರಿಕೆ ನೀಡಿತ್ತು. ಜೂನ್ 2020ರಂದು ಈ ಯೋಜನೆ ಆರಂಭಕ್ಕೆ ಮೊದಲ ಗಡುವಾಗಿತ್ತು. ಆದರೆ ಗಡುವು ಮುಗಿದು ಎರಡೂವರೆ ವರ್ಷಗಳು ಉರುಳಿದರೂ ಸಾಮಾನ್ಯ ಸಾರಿಗೆ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು

ಬೆಂಗಳೂರಿನ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 26 January 23

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು