AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈವರೆಗೂ ಇಂಥ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ
ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 26, 2023 | 2:34 PM

Share

ಬೆಂಗಳೂರು: ನಗರದಲ್ಲಿ ಶೀಘ್ರದಲ್ಲಿಯೇ ರಾಷ್ಟ್ರೀಯ ಸಾಮಾನ್ಯ ಸಾರಿಗೆ ಕಾರ್ಡ್ (National Common Mobility Card – NCMC) ಪರಿಚಯಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ನಿಗಮವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರವು ಆರಂಭಿಸಿರುವ ‘ಒಂದು ದೇಶ ಒಂದು ಕಾರ್ಡ್​’ ಯೋಜನೆಯ ಭಾಗವಾಗಿ ಹೊಸ ಕಾರ್ಡ್​ಗಳನ್ನು ಪರಿಚಯಿಸಲಾಗುವುದು ಎಂದು ಮೆಟ್ರೋ ನಿಗಮ (BMRCL) ಹೇಳಿದೆ. ಈ ಸಾರಿಗೆ ಕಾರ್ಡ್​ಗಳನ್ನು ವಿವಿಧ ರಾಜ್ಯಗಳ ಸಾರಿಗೆ ನಿಗಮಗಳಲ್ಲಿ ಹಾಗೂ ಮೆಟ್ರೋ ಮತ್ತಿತರ ಸಾರಿಗೆ ವ್ಯವಸ್ಥೆಗಳಲ್ಲಿ ಈ ಕಾರ್ಡ್​ಗಳನ್ನು ಬಳಸಬಹುದು. ಬೆಂಗಳೂರಿನಲ್ಲಿ 2023ರಿಂದ ಈ ಕಾರ್ಡ್​ಗಳನ್ನು ಜಾರಿಗೊಳಿಸಲಾಗುವುದು ಎಂದು ಬುಧವಾರ ನಿಗಮವು ಹೇಳಿದೆ.

ಕಳೆದ ಡಿಸೆಂಬರ್ 2022ರಲ್ಲಿ ಮೆಟ್ರೋ ರೈಲುಗಳಲ್ಲಿ 1.69 ಕೋಟಿ ಪ್ರಯಾಣಿಕರು ಸಂಚರಿಸಿದ್ದರು. ನಿಗಮವು ₹ 40.30 ಕೋಟಿ ಆದಾಯ ಪಡೆದಿತ್ತು. ಹೊಸ ವರ್ಷಾಚರಣೆಯ ದಿನ (ಡಿ 31-ಜ1) ಅತಿಹೆಚ್ಚು ಪ್ರಯಾಣಿಕರು (6.41 ಲಕ್ಷ) ಮೆಟ್ರೋ ರೈಲುಗಳಲ್ಲಿ ಸಂಚರಿಸಿದ್ದರು.

ಮುಂಬೈ ಮೆಟ್ರೋದಲ್ಲಿ ಆರಂಭ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈ ಯೋಜನೆ ಆರಂಭವಾಗಲಿದೆ ಎಂಬ ಮಾತುಗಳು ಬಹಳ ಹಿಂದಿನಿಂದ ಕೇಳಿಬರುತ್ತಿತ್ತು. ಈ ಯೋಜನೆ ಆರಂಭವಾದರೆ ಒಂದೇ ಕಾರ್ಡ್ ಅನ್ನು ಬಿಎಂಟಿಸಿ ಬಸ್ ಹಾಗೂ ಮೆಟ್ರೋ ರೈಲಿಗೆ ಬಳಸಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 2019ರಲ್ಲಿ ಈ ಕಾರ್ಡ್​ಗೆ ಚಾಲನೆ ನೀಡಿದ್ದರು. ಯೋಜನೆಯ ಅನುಷ್ಠಾನಕ್ಕೆ ಖಾಸಗಿ ಬ್ಯಾಂಕ್ ಒಂದಕ್ಕೆ ಬೆಂಗಳೂರು ಮೆಟ್ರೋ ನಿಗಮವು ಹೊಣೆಗಾರಿಕೆ ನೀಡಿತ್ತು. ಜೂನ್ 2020ರಂದು ಈ ಯೋಜನೆ ಆರಂಭಕ್ಕೆ ಮೊದಲ ಗಡುವಾಗಿತ್ತು. ಆದರೆ ಗಡುವು ಮುಗಿದು ಎರಡೂವರೆ ವರ್ಷಗಳು ಉರುಳಿದರೂ ಸಾಮಾನ್ಯ ಸಾರಿಗೆ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು

ಬೆಂಗಳೂರಿನ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 26 January 23

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ