AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈವರೆಗೂ ಇಂಥ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ
ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 26, 2023 | 2:34 PM

Share

ಬೆಂಗಳೂರು: ನಗರದಲ್ಲಿ ಶೀಘ್ರದಲ್ಲಿಯೇ ರಾಷ್ಟ್ರೀಯ ಸಾಮಾನ್ಯ ಸಾರಿಗೆ ಕಾರ್ಡ್ (National Common Mobility Card – NCMC) ಪರಿಚಯಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ನಿಗಮವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರವು ಆರಂಭಿಸಿರುವ ‘ಒಂದು ದೇಶ ಒಂದು ಕಾರ್ಡ್​’ ಯೋಜನೆಯ ಭಾಗವಾಗಿ ಹೊಸ ಕಾರ್ಡ್​ಗಳನ್ನು ಪರಿಚಯಿಸಲಾಗುವುದು ಎಂದು ಮೆಟ್ರೋ ನಿಗಮ (BMRCL) ಹೇಳಿದೆ. ಈ ಸಾರಿಗೆ ಕಾರ್ಡ್​ಗಳನ್ನು ವಿವಿಧ ರಾಜ್ಯಗಳ ಸಾರಿಗೆ ನಿಗಮಗಳಲ್ಲಿ ಹಾಗೂ ಮೆಟ್ರೋ ಮತ್ತಿತರ ಸಾರಿಗೆ ವ್ಯವಸ್ಥೆಗಳಲ್ಲಿ ಈ ಕಾರ್ಡ್​ಗಳನ್ನು ಬಳಸಬಹುದು. ಬೆಂಗಳೂರಿನಲ್ಲಿ 2023ರಿಂದ ಈ ಕಾರ್ಡ್​ಗಳನ್ನು ಜಾರಿಗೊಳಿಸಲಾಗುವುದು ಎಂದು ಬುಧವಾರ ನಿಗಮವು ಹೇಳಿದೆ.

ಕಳೆದ ಡಿಸೆಂಬರ್ 2022ರಲ್ಲಿ ಮೆಟ್ರೋ ರೈಲುಗಳಲ್ಲಿ 1.69 ಕೋಟಿ ಪ್ರಯಾಣಿಕರು ಸಂಚರಿಸಿದ್ದರು. ನಿಗಮವು ₹ 40.30 ಕೋಟಿ ಆದಾಯ ಪಡೆದಿತ್ತು. ಹೊಸ ವರ್ಷಾಚರಣೆಯ ದಿನ (ಡಿ 31-ಜ1) ಅತಿಹೆಚ್ಚು ಪ್ರಯಾಣಿಕರು (6.41 ಲಕ್ಷ) ಮೆಟ್ರೋ ರೈಲುಗಳಲ್ಲಿ ಸಂಚರಿಸಿದ್ದರು.

ಮುಂಬೈ ಮೆಟ್ರೋದಲ್ಲಿ ಆರಂಭ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈ ಯೋಜನೆ ಆರಂಭವಾಗಲಿದೆ ಎಂಬ ಮಾತುಗಳು ಬಹಳ ಹಿಂದಿನಿಂದ ಕೇಳಿಬರುತ್ತಿತ್ತು. ಈ ಯೋಜನೆ ಆರಂಭವಾದರೆ ಒಂದೇ ಕಾರ್ಡ್ ಅನ್ನು ಬಿಎಂಟಿಸಿ ಬಸ್ ಹಾಗೂ ಮೆಟ್ರೋ ರೈಲಿಗೆ ಬಳಸಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 2019ರಲ್ಲಿ ಈ ಕಾರ್ಡ್​ಗೆ ಚಾಲನೆ ನೀಡಿದ್ದರು. ಯೋಜನೆಯ ಅನುಷ್ಠಾನಕ್ಕೆ ಖಾಸಗಿ ಬ್ಯಾಂಕ್ ಒಂದಕ್ಕೆ ಬೆಂಗಳೂರು ಮೆಟ್ರೋ ನಿಗಮವು ಹೊಣೆಗಾರಿಕೆ ನೀಡಿತ್ತು. ಜೂನ್ 2020ರಂದು ಈ ಯೋಜನೆ ಆರಂಭಕ್ಕೆ ಮೊದಲ ಗಡುವಾಗಿತ್ತು. ಆದರೆ ಗಡುವು ಮುಗಿದು ಎರಡೂವರೆ ವರ್ಷಗಳು ಉರುಳಿದರೂ ಸಾಮಾನ್ಯ ಸಾರಿಗೆ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು

ಬೆಂಗಳೂರಿನ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 26 January 23

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ