AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈವರೆಗೂ ಇಂಥ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ
ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 26, 2023 | 2:34 PM

Share

ಬೆಂಗಳೂರು: ನಗರದಲ್ಲಿ ಶೀಘ್ರದಲ್ಲಿಯೇ ರಾಷ್ಟ್ರೀಯ ಸಾಮಾನ್ಯ ಸಾರಿಗೆ ಕಾರ್ಡ್ (National Common Mobility Card – NCMC) ಪರಿಚಯಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ನಿಗಮವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರವು ಆರಂಭಿಸಿರುವ ‘ಒಂದು ದೇಶ ಒಂದು ಕಾರ್ಡ್​’ ಯೋಜನೆಯ ಭಾಗವಾಗಿ ಹೊಸ ಕಾರ್ಡ್​ಗಳನ್ನು ಪರಿಚಯಿಸಲಾಗುವುದು ಎಂದು ಮೆಟ್ರೋ ನಿಗಮ (BMRCL) ಹೇಳಿದೆ. ಈ ಸಾರಿಗೆ ಕಾರ್ಡ್​ಗಳನ್ನು ವಿವಿಧ ರಾಜ್ಯಗಳ ಸಾರಿಗೆ ನಿಗಮಗಳಲ್ಲಿ ಹಾಗೂ ಮೆಟ್ರೋ ಮತ್ತಿತರ ಸಾರಿಗೆ ವ್ಯವಸ್ಥೆಗಳಲ್ಲಿ ಈ ಕಾರ್ಡ್​ಗಳನ್ನು ಬಳಸಬಹುದು. ಬೆಂಗಳೂರಿನಲ್ಲಿ 2023ರಿಂದ ಈ ಕಾರ್ಡ್​ಗಳನ್ನು ಜಾರಿಗೊಳಿಸಲಾಗುವುದು ಎಂದು ಬುಧವಾರ ನಿಗಮವು ಹೇಳಿದೆ.

ಕಳೆದ ಡಿಸೆಂಬರ್ 2022ರಲ್ಲಿ ಮೆಟ್ರೋ ರೈಲುಗಳಲ್ಲಿ 1.69 ಕೋಟಿ ಪ್ರಯಾಣಿಕರು ಸಂಚರಿಸಿದ್ದರು. ನಿಗಮವು ₹ 40.30 ಕೋಟಿ ಆದಾಯ ಪಡೆದಿತ್ತು. ಹೊಸ ವರ್ಷಾಚರಣೆಯ ದಿನ (ಡಿ 31-ಜ1) ಅತಿಹೆಚ್ಚು ಪ್ರಯಾಣಿಕರು (6.41 ಲಕ್ಷ) ಮೆಟ್ರೋ ರೈಲುಗಳಲ್ಲಿ ಸಂಚರಿಸಿದ್ದರು.

ಮುಂಬೈ ಮೆಟ್ರೋದಲ್ಲಿ ಆರಂಭ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈ ಯೋಜನೆ ಆರಂಭವಾಗಲಿದೆ ಎಂಬ ಮಾತುಗಳು ಬಹಳ ಹಿಂದಿನಿಂದ ಕೇಳಿಬರುತ್ತಿತ್ತು. ಈ ಯೋಜನೆ ಆರಂಭವಾದರೆ ಒಂದೇ ಕಾರ್ಡ್ ಅನ್ನು ಬಿಎಂಟಿಸಿ ಬಸ್ ಹಾಗೂ ಮೆಟ್ರೋ ರೈಲಿಗೆ ಬಳಸಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 2019ರಲ್ಲಿ ಈ ಕಾರ್ಡ್​ಗೆ ಚಾಲನೆ ನೀಡಿದ್ದರು. ಯೋಜನೆಯ ಅನುಷ್ಠಾನಕ್ಕೆ ಖಾಸಗಿ ಬ್ಯಾಂಕ್ ಒಂದಕ್ಕೆ ಬೆಂಗಳೂರು ಮೆಟ್ರೋ ನಿಗಮವು ಹೊಣೆಗಾರಿಕೆ ನೀಡಿತ್ತು. ಜೂನ್ 2020ರಂದು ಈ ಯೋಜನೆ ಆರಂಭಕ್ಕೆ ಮೊದಲ ಗಡುವಾಗಿತ್ತು. ಆದರೆ ಗಡುವು ಮುಗಿದು ಎರಡೂವರೆ ವರ್ಷಗಳು ಉರುಳಿದರೂ ಸಾಮಾನ್ಯ ಸಾರಿಗೆ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು

ಬೆಂಗಳೂರಿನ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 26 January 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್