AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈವರೆಗೂ ಇಂಥ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

Bengaluru Metro: ಬೆಂಗಳೂರಿನಲ್ಲಿ ಶೀಘ್ರ ಕಾಮನ್ ಮೊಬಿಲಿಟಿ ಕಾರ್ಡ್; ಮೆಟ್ರೋ ನಿಗಮ ಘೋಷಣೆ
ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 26, 2023 | 2:34 PM

Share

ಬೆಂಗಳೂರು: ನಗರದಲ್ಲಿ ಶೀಘ್ರದಲ್ಲಿಯೇ ರಾಷ್ಟ್ರೀಯ ಸಾಮಾನ್ಯ ಸಾರಿಗೆ ಕಾರ್ಡ್ (National Common Mobility Card – NCMC) ಪರಿಚಯಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ನಿಗಮವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರವು ಆರಂಭಿಸಿರುವ ‘ಒಂದು ದೇಶ ಒಂದು ಕಾರ್ಡ್​’ ಯೋಜನೆಯ ಭಾಗವಾಗಿ ಹೊಸ ಕಾರ್ಡ್​ಗಳನ್ನು ಪರಿಚಯಿಸಲಾಗುವುದು ಎಂದು ಮೆಟ್ರೋ ನಿಗಮ (BMRCL) ಹೇಳಿದೆ. ಈ ಸಾರಿಗೆ ಕಾರ್ಡ್​ಗಳನ್ನು ವಿವಿಧ ರಾಜ್ಯಗಳ ಸಾರಿಗೆ ನಿಗಮಗಳಲ್ಲಿ ಹಾಗೂ ಮೆಟ್ರೋ ಮತ್ತಿತರ ಸಾರಿಗೆ ವ್ಯವಸ್ಥೆಗಳಲ್ಲಿ ಈ ಕಾರ್ಡ್​ಗಳನ್ನು ಬಳಸಬಹುದು. ಬೆಂಗಳೂರಿನಲ್ಲಿ 2023ರಿಂದ ಈ ಕಾರ್ಡ್​ಗಳನ್ನು ಜಾರಿಗೊಳಿಸಲಾಗುವುದು ಎಂದು ಬುಧವಾರ ನಿಗಮವು ಹೇಳಿದೆ.

ಕಳೆದ ಡಿಸೆಂಬರ್ 2022ರಲ್ಲಿ ಮೆಟ್ರೋ ರೈಲುಗಳಲ್ಲಿ 1.69 ಕೋಟಿ ಪ್ರಯಾಣಿಕರು ಸಂಚರಿಸಿದ್ದರು. ನಿಗಮವು ₹ 40.30 ಕೋಟಿ ಆದಾಯ ಪಡೆದಿತ್ತು. ಹೊಸ ವರ್ಷಾಚರಣೆಯ ದಿನ (ಡಿ 31-ಜ1) ಅತಿಹೆಚ್ಚು ಪ್ರಯಾಣಿಕರು (6.41 ಲಕ್ಷ) ಮೆಟ್ರೋ ರೈಲುಗಳಲ್ಲಿ ಸಂಚರಿಸಿದ್ದರು.

ಮುಂಬೈ ಮೆಟ್ರೋದಲ್ಲಿ ಆರಂಭ

ಮುಂಬೈ ಮೆಟ್ರೋ ನಿಗಮವು ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಈ ತಿಂಗಳ ಆರಂಭದಲ್ಲಿ ಪರಿಚಯಿಸಿತ್ತು. ಆದರೆ ಬೆಂಗಳೂರಿನಲ್ಲಿ ಈ ಯೋಜನೆ ಆರಂಭವಾಗಲಿದೆ ಎಂಬ ಮಾತುಗಳು ಬಹಳ ಹಿಂದಿನಿಂದ ಕೇಳಿಬರುತ್ತಿತ್ತು. ಈ ಯೋಜನೆ ಆರಂಭವಾದರೆ ಒಂದೇ ಕಾರ್ಡ್ ಅನ್ನು ಬಿಎಂಟಿಸಿ ಬಸ್ ಹಾಗೂ ಮೆಟ್ರೋ ರೈಲಿಗೆ ಬಳಸಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 2019ರಲ್ಲಿ ಈ ಕಾರ್ಡ್​ಗೆ ಚಾಲನೆ ನೀಡಿದ್ದರು. ಯೋಜನೆಯ ಅನುಷ್ಠಾನಕ್ಕೆ ಖಾಸಗಿ ಬ್ಯಾಂಕ್ ಒಂದಕ್ಕೆ ಬೆಂಗಳೂರು ಮೆಟ್ರೋ ನಿಗಮವು ಹೊಣೆಗಾರಿಕೆ ನೀಡಿತ್ತು. ಜೂನ್ 2020ರಂದು ಈ ಯೋಜನೆ ಆರಂಭಕ್ಕೆ ಮೊದಲ ಗಡುವಾಗಿತ್ತು. ಆದರೆ ಗಡುವು ಮುಗಿದು ಎರಡೂವರೆ ವರ್ಷಗಳು ಉರುಳಿದರೂ ಸಾಮಾನ್ಯ ಸಾರಿಗೆ ಕಾರ್ಡ್​ಗಳನ್ನು ಪರಿಚಯಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು

ಬೆಂಗಳೂರಿನ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 26 January 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ