AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಗಮನಿಸಿ; ಕಬ್ಬನ್ ಪಾರ್ಕ್, ವಿಧಾನಸೌಧ ಮೆಟ್ರೋ ಸ್ಟೇಷನ್ ಬಂದ್

ಇಂದು ವಿಧಾನಸೌಧದಲ್ಲಿ ಆರ್​ಸಿಬಿ ತಂಡಕ್ಕೆ ಅಭಿನಂದನಾ ಕಾರ್ಯಕ್ರಮ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಸಂಭ್ರಮಾಚರಣೆ ಶುರುವಾಗುವದಕ್ಕೂ ಮೊದಲೇ ಸೂತಕದ ಛಾಯೆ ಆವರಿಸಿದೆ. ಆರ್​ಸಿಬಿ ತಂಡವನ್ನು ಕಣ್ತುಂಬಿಕೊಳ್ಳಲು ಉತ್ಸಾಹದಿಂದ ಆಗಮಿಸಿದ್ದ 10 ಅಭಿಮಾನಿಗಳು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿ ಜನಜಾತ್ರೆಯೇ ಸೇರಿದ್ದರಿಂದ ಮುಂಜಾಗ್ರತಾ ಕ್ರಮವಾಗಿ 2 ಮೆಟ್ರೋ ನಿಲ್ದಾಣಗಳಲ್ಲಿ ಮೆಟ್ರೋ ರೈಲುಗಳನ್ನು ನಿಲ್ಲಿಸದಿರಲು ನಮ್ಮ ಮೆಟ್ರೋ ನಿರ್ಧರಿಸಿದೆ.

ಬೆಂಗಳೂರಿಗರೇ ಗಮನಿಸಿ; ಕಬ್ಬನ್ ಪಾರ್ಕ್, ವಿಧಾನಸೌಧ ಮೆಟ್ರೋ ಸ್ಟೇಷನ್ ಬಂದ್
Cubbon Park Metro
ಸುಷ್ಮಾ ಚಕ್ರೆ
|

Updated on: Jun 04, 2025 | 6:24 PM

Share

ಬೆಂಗಳೂರು, ಜೂನ್ 4: 18 ವರ್ಷಗಳಲ್ಲಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ (IPL Champion) ಆಗಿರುವ ಆರ್​ಸಿಬಿ (RCB) ವಿಜಯಯಾತ್ರೆಗೆ ಬೆಂಗಳೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದ್ದವು. ಆದರೆ, ಮಿತಿಮೀರಿದ ಸಂಖ್ಯೆಯಲ್ಲಿ ಅಭಿಮಾನಿಗಳು ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಗಿ 10 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕ ಜನರ ಸ್ಥಿತಿ ಗಂಭೀರವಾಗಿದೆ. ನಾಲ್ಕೈದು ಜನರ ಕಾಲುಗಳು ಕಟ್ ಆಗಿವೆ. ಅಪ್ಪ-ಅಮ್ಮನ ಜೊತೆ ಸಂಭ್ರಮಾಚರಣೆಗೆ ಬಂದಿದ್ದ ಮಗು ಕೂಡ ಸಾವನ್ನಪ್ಪಿದೆ. ಇದರ ನಡುವೆ ಮೆಟ್ರೋ ರೈಲುಗಳಲ್ಲಿ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಲು ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ನೇರಳೆ ಮಾರ್ಗದ 2 ಮೆಟ್ರೋ ನಿಲ್ದಾಣಗಳಾದ ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್​ಗಳನ್ನು ಬಂದ್ ಮಾಡಲಾಗಿದೆ.

ಆರ್​ಸಿಬಿ ತಂಡದ ಗೆಲುವಿನ ಸಂಭ್ರಮದ ವೇಳೆ ಕಾಲ್ತುಳಿತ ಉಂಟಾಗಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪರಿಸ್ಥಿತಿ ಕೈಮೀರಿದೆ. ಮೆಟ್ರೋ ರೈಲುಗಳಲ್ಲೂ ಜನಸಾಗರವೇ ಹರಿದುಬರುತ್ತಿರುವುದರಿಂದ ಯಾವುದೇ ಅಪಾಯಗಳು, ಕಾಲ್ತುಳಿತ ಸಂಭವಿಸಬಾರದು ಎಂಬ ಉದ್ದೇಶದಿಂದ 2 ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ಸ್ಥಗಿತ ಮಾಡಲಾಗಿದೆ. ಕಬ್ಬನ್​ ಪಾರ್ಕ್, ವಿಧಾನಸೌಧ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ‘ನಮ್ಮ ಮೆಟ್ರೋ’ ನೇರಳೆ ಮಾರ್ಗದಲ್ಲಿರುವ ನಿಲ್ದಾಣಗಳಲ್ಲಿ ಇಂದು ಸಂಜೆ 4.30ರಿಂದಲೇ ಸೇವೆ ಸ್ಥಗಿತ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ಎರಡು ನಿಲ್ದಾಣಗಳಲ್ಲಿ ಮೆಟ್ರೋ ರೈಲುಗಳು ನಿಲ್ಲುವುದಿಲ್ಲ.

ಇದನ್ನೂ ಓದಿ
Image
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
Image
Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 11 ಸಾವು
Image
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದ ಆರ್​ಸಿಬಿ
Image
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ

ಇದನ್ನೂ ಓದಿ: RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

10 ಅಭಿಮಾನಿಗಳು ಸಾವು:

ಆರ್​ಸಿಬಿ ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂಟಾಗಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 10 ಅಭಿಮಾನಿಗಳು ಮೃತಪಟ್ಟಿದ್ದಾರೆ. ದಂತ ವೈದ್ಯಕೀಯ ವಿದ್ಯಾರ್ಥಿನಿ, ಒಂದು ಮಗು ಸೇರಿ 10 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ 6 ಅಭಿಮಾನಿಗಳು ಮೃತಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ