AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಗಮನಿಸಿ; ಕಬ್ಬನ್ ಪಾರ್ಕ್, ವಿಧಾನಸೌಧ ಮೆಟ್ರೋ ಸ್ಟೇಷನ್ ಬಂದ್

ಇಂದು ವಿಧಾನಸೌಧದಲ್ಲಿ ಆರ್​ಸಿಬಿ ತಂಡಕ್ಕೆ ಅಭಿನಂದನಾ ಕಾರ್ಯಕ್ರಮ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಸಂಭ್ರಮಾಚರಣೆ ಶುರುವಾಗುವದಕ್ಕೂ ಮೊದಲೇ ಸೂತಕದ ಛಾಯೆ ಆವರಿಸಿದೆ. ಆರ್​ಸಿಬಿ ತಂಡವನ್ನು ಕಣ್ತುಂಬಿಕೊಳ್ಳಲು ಉತ್ಸಾಹದಿಂದ ಆಗಮಿಸಿದ್ದ 10 ಅಭಿಮಾನಿಗಳು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿ ಜನಜಾತ್ರೆಯೇ ಸೇರಿದ್ದರಿಂದ ಮುಂಜಾಗ್ರತಾ ಕ್ರಮವಾಗಿ 2 ಮೆಟ್ರೋ ನಿಲ್ದಾಣಗಳಲ್ಲಿ ಮೆಟ್ರೋ ರೈಲುಗಳನ್ನು ನಿಲ್ಲಿಸದಿರಲು ನಮ್ಮ ಮೆಟ್ರೋ ನಿರ್ಧರಿಸಿದೆ.

ಬೆಂಗಳೂರಿಗರೇ ಗಮನಿಸಿ; ಕಬ್ಬನ್ ಪಾರ್ಕ್, ವಿಧಾನಸೌಧ ಮೆಟ್ರೋ ಸ್ಟೇಷನ್ ಬಂದ್
Cubbon Park Metro
ಸುಷ್ಮಾ ಚಕ್ರೆ
|

Updated on: Jun 04, 2025 | 6:24 PM

Share

ಬೆಂಗಳೂರು, ಜೂನ್ 4: 18 ವರ್ಷಗಳಲ್ಲಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ (IPL Champion) ಆಗಿರುವ ಆರ್​ಸಿಬಿ (RCB) ವಿಜಯಯಾತ್ರೆಗೆ ಬೆಂಗಳೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದ್ದವು. ಆದರೆ, ಮಿತಿಮೀರಿದ ಸಂಖ್ಯೆಯಲ್ಲಿ ಅಭಿಮಾನಿಗಳು ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಗಿ 10 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕ ಜನರ ಸ್ಥಿತಿ ಗಂಭೀರವಾಗಿದೆ. ನಾಲ್ಕೈದು ಜನರ ಕಾಲುಗಳು ಕಟ್ ಆಗಿವೆ. ಅಪ್ಪ-ಅಮ್ಮನ ಜೊತೆ ಸಂಭ್ರಮಾಚರಣೆಗೆ ಬಂದಿದ್ದ ಮಗು ಕೂಡ ಸಾವನ್ನಪ್ಪಿದೆ. ಇದರ ನಡುವೆ ಮೆಟ್ರೋ ರೈಲುಗಳಲ್ಲಿ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಲು ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ನೇರಳೆ ಮಾರ್ಗದ 2 ಮೆಟ್ರೋ ನಿಲ್ದಾಣಗಳಾದ ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್​ಗಳನ್ನು ಬಂದ್ ಮಾಡಲಾಗಿದೆ.

ಆರ್​ಸಿಬಿ ತಂಡದ ಗೆಲುವಿನ ಸಂಭ್ರಮದ ವೇಳೆ ಕಾಲ್ತುಳಿತ ಉಂಟಾಗಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪರಿಸ್ಥಿತಿ ಕೈಮೀರಿದೆ. ಮೆಟ್ರೋ ರೈಲುಗಳಲ್ಲೂ ಜನಸಾಗರವೇ ಹರಿದುಬರುತ್ತಿರುವುದರಿಂದ ಯಾವುದೇ ಅಪಾಯಗಳು, ಕಾಲ್ತುಳಿತ ಸಂಭವಿಸಬಾರದು ಎಂಬ ಉದ್ದೇಶದಿಂದ 2 ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ಸ್ಥಗಿತ ಮಾಡಲಾಗಿದೆ. ಕಬ್ಬನ್​ ಪಾರ್ಕ್, ವಿಧಾನಸೌಧ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ‘ನಮ್ಮ ಮೆಟ್ರೋ’ ನೇರಳೆ ಮಾರ್ಗದಲ್ಲಿರುವ ನಿಲ್ದಾಣಗಳಲ್ಲಿ ಇಂದು ಸಂಜೆ 4.30ರಿಂದಲೇ ಸೇವೆ ಸ್ಥಗಿತ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ಎರಡು ನಿಲ್ದಾಣಗಳಲ್ಲಿ ಮೆಟ್ರೋ ರೈಲುಗಳು ನಿಲ್ಲುವುದಿಲ್ಲ.

ಇದನ್ನೂ ಓದಿ
Image
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
Image
Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 11 ಸಾವು
Image
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದ ಆರ್​ಸಿಬಿ
Image
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ

ಇದನ್ನೂ ಓದಿ: RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

10 ಅಭಿಮಾನಿಗಳು ಸಾವು:

ಆರ್​ಸಿಬಿ ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂಟಾಗಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 10 ಅಭಿಮಾನಿಗಳು ಮೃತಪಟ್ಟಿದ್ದಾರೆ. ದಂತ ವೈದ್ಯಕೀಯ ವಿದ್ಯಾರ್ಥಿನಿ, ಒಂದು ಮಗು ಸೇರಿ 10 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ 6 ಅಭಿಮಾನಿಗಳು ಮೃತಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ