AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ

ಯುವಕನ ಹುಚ್ಚಾಟಕ್ಕೆ ಬೆಂಗಳೂರು ನಮ್ಮ ಮೆಟ್ರೋ ಸೇವೆ 27 ನಿಮಿಷ ಸ್ಥಗಿತಗೊಂಡ ಘಟನೆ ನಡೆದಿದೆ. ಜ್ಞಾನಭಾರತಿ ಸ್ಟೇಷನ್​ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವೆ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ
ಬೆಂಗಳೂರು ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ (ಸಾಂದರ್ಭಿಕ ಚಿತ್ರ)
Kiran Surya
| Edited By: |

Updated on:Mar 12, 2024 | 5:20 PM

Share

ಬೆಂಗಳೂರು, ಮಾ.12: ಯುವಕನ ಹುಚ್ಚಾಟಕ್ಕೆ ಬೆಂಗಳೂರು ನಮ್ಮ ಮೆಟ್ರೋ (Bengaluru Metro) ಸೇವೆ 27 ನಿಮಿಷ ಸ್ಥಗಿತಗೊಂಡ ಘಟನೆ ನಡೆದಿದೆ. ಜ್ಞಾನಭಾರತಿ ಸ್ಟೇಷನ್​ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವಿನ ನೇರಳೆ ಮಾರ್ಗದಲ್ಲಿ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಹಳಿ ಮೇಲೆ ಯುವಕನ ಓಡಾಟವನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ಮೆಟ್ರೋ ಹಳಿಗಳ ಬಳಿ ಹೈವೊಲ್ಟೇಜ್ ವಿದ್ಯುತ್ ಇರುವುದರಿಂದ ಪವರ್ ಆಫ್ ಮಾಡಿಸಿ ಮದ್ಯಾಹ್ನ 3 ಗಂಟೆಯಿಂದ 3.27 ರವರೆಗೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: Driverless Metro: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಟ್ರಯಲ್ ರನ್ ಆರಂಭ

ಘಟನೆ ನಂತರ ಯುವಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಳಿಕ ಎಂದಿನಂತೆ ಮೆಟ್ರೋ ಸೇವೆ ಆರಂಭಗೊಂಡಿದೆ ಎಂದು ಟಿವಿ9ಗೆ ಬಿಎಂಆರ್​ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೋ ಹಳಿಗಳ ಮೇಲೆ ವ್ಯಕ್ತಿ ಕಾಣಿಸಿಕೊಂಡಿದ್ದು ಇದೇ ಮೊದಲೇನಲ್ಲ. ವರ್ಷದ ಆರಂಭದಲ್ಲಿ ಮಹಿಳೆಯೊಬ್ಬರು ಹಳಿಗೆ ಜಿಗಿದ ಘಟನೆ ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ನಡೆದಿತ್ತು. ಮೆಟ್ರೋಗಾಗಿ ಕಾಯುತ್ತಿದ್ದ ಆಕೆ, ಹಳಿ ಮೇಲೆ ಬಿದ್ದ ತನ್ನ ಮೊಬೈಲ್ ತೆಗೆಯಲು ಹಳಿಗೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದು, ಕೂಡಲೇ ಆಕೆಯನ್ನು ಮೇಲೆಕೆ ಎಳೆದುಕೊಂಡಿದ್ದಾರೆ. ಇನ್ನು ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಕಾರಣ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Tue, 12 March 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ