AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ

ಯುವಕನ ಹುಚ್ಚಾಟಕ್ಕೆ ಬೆಂಗಳೂರು ನಮ್ಮ ಮೆಟ್ರೋ ಸೇವೆ 27 ನಿಮಿಷ ಸ್ಥಗಿತಗೊಂಡ ಘಟನೆ ನಡೆದಿದೆ. ಜ್ಞಾನಭಾರತಿ ಸ್ಟೇಷನ್​ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವೆ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ
ಬೆಂಗಳೂರು ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ (ಸಾಂದರ್ಭಿಕ ಚಿತ್ರ)
Kiran Surya
| Edited By: |

Updated on:Mar 12, 2024 | 5:20 PM

Share

ಬೆಂಗಳೂರು, ಮಾ.12: ಯುವಕನ ಹುಚ್ಚಾಟಕ್ಕೆ ಬೆಂಗಳೂರು ನಮ್ಮ ಮೆಟ್ರೋ (Bengaluru Metro) ಸೇವೆ 27 ನಿಮಿಷ ಸ್ಥಗಿತಗೊಂಡ ಘಟನೆ ನಡೆದಿದೆ. ಜ್ಞಾನಭಾರತಿ ಸ್ಟೇಷನ್​ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವಿನ ನೇರಳೆ ಮಾರ್ಗದಲ್ಲಿ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಹಳಿ ಮೇಲೆ ಯುವಕನ ಓಡಾಟವನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ಮೆಟ್ರೋ ಹಳಿಗಳ ಬಳಿ ಹೈವೊಲ್ಟೇಜ್ ವಿದ್ಯುತ್ ಇರುವುದರಿಂದ ಪವರ್ ಆಫ್ ಮಾಡಿಸಿ ಮದ್ಯಾಹ್ನ 3 ಗಂಟೆಯಿಂದ 3.27 ರವರೆಗೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: Driverless Metro: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಟ್ರಯಲ್ ರನ್ ಆರಂಭ

ಘಟನೆ ನಂತರ ಯುವಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಳಿಕ ಎಂದಿನಂತೆ ಮೆಟ್ರೋ ಸೇವೆ ಆರಂಭಗೊಂಡಿದೆ ಎಂದು ಟಿವಿ9ಗೆ ಬಿಎಂಆರ್​ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೋ ಹಳಿಗಳ ಮೇಲೆ ವ್ಯಕ್ತಿ ಕಾಣಿಸಿಕೊಂಡಿದ್ದು ಇದೇ ಮೊದಲೇನಲ್ಲ. ವರ್ಷದ ಆರಂಭದಲ್ಲಿ ಮಹಿಳೆಯೊಬ್ಬರು ಹಳಿಗೆ ಜಿಗಿದ ಘಟನೆ ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ನಡೆದಿತ್ತು. ಮೆಟ್ರೋಗಾಗಿ ಕಾಯುತ್ತಿದ್ದ ಆಕೆ, ಹಳಿ ಮೇಲೆ ಬಿದ್ದ ತನ್ನ ಮೊಬೈಲ್ ತೆಗೆಯಲು ಹಳಿಗೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದು, ಕೂಡಲೇ ಆಕೆಯನ್ನು ಮೇಲೆಕೆ ಎಳೆದುಕೊಂಡಿದ್ದಾರೆ. ಇನ್ನು ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಕಾರಣ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Tue, 12 March 24

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ