Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ

ಯುವಕನ ಹುಚ್ಚಾಟಕ್ಕೆ ಬೆಂಗಳೂರು ನಮ್ಮ ಮೆಟ್ರೋ ಸೇವೆ 27 ನಿಮಿಷ ಸ್ಥಗಿತಗೊಂಡ ಘಟನೆ ನಡೆದಿದೆ. ಜ್ಞಾನಭಾರತಿ ಸ್ಟೇಷನ್​ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವೆ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ
ಬೆಂಗಳೂರು ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ (ಸಾಂದರ್ಭಿಕ ಚಿತ್ರ)
Follow us
Kiran Surya
| Updated By: Rakesh Nayak Manchi

Updated on:Mar 12, 2024 | 5:20 PM

ಬೆಂಗಳೂರು, ಮಾ.12: ಯುವಕನ ಹುಚ್ಚಾಟಕ್ಕೆ ಬೆಂಗಳೂರು ನಮ್ಮ ಮೆಟ್ರೋ (Bengaluru Metro) ಸೇವೆ 27 ನಿಮಿಷ ಸ್ಥಗಿತಗೊಂಡ ಘಟನೆ ನಡೆದಿದೆ. ಜ್ಞಾನಭಾರತಿ ಸ್ಟೇಷನ್​ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವಿನ ನೇರಳೆ ಮಾರ್ಗದಲ್ಲಿ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಹಳಿ ಮೇಲೆ ಯುವಕನ ಓಡಾಟವನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ಮೆಟ್ರೋ ಹಳಿಗಳ ಬಳಿ ಹೈವೊಲ್ಟೇಜ್ ವಿದ್ಯುತ್ ಇರುವುದರಿಂದ ಪವರ್ ಆಫ್ ಮಾಡಿಸಿ ಮದ್ಯಾಹ್ನ 3 ಗಂಟೆಯಿಂದ 3.27 ರವರೆಗೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: Driverless Metro: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಟ್ರಯಲ್ ರನ್ ಆರಂಭ

ಘಟನೆ ನಂತರ ಯುವಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಳಿಕ ಎಂದಿನಂತೆ ಮೆಟ್ರೋ ಸೇವೆ ಆರಂಭಗೊಂಡಿದೆ ಎಂದು ಟಿವಿ9ಗೆ ಬಿಎಂಆರ್​ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೋ ಹಳಿಗಳ ಮೇಲೆ ವ್ಯಕ್ತಿ ಕಾಣಿಸಿಕೊಂಡಿದ್ದು ಇದೇ ಮೊದಲೇನಲ್ಲ. ವರ್ಷದ ಆರಂಭದಲ್ಲಿ ಮಹಿಳೆಯೊಬ್ಬರು ಹಳಿಗೆ ಜಿಗಿದ ಘಟನೆ ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ನಡೆದಿತ್ತು. ಮೆಟ್ರೋಗಾಗಿ ಕಾಯುತ್ತಿದ್ದ ಆಕೆ, ಹಳಿ ಮೇಲೆ ಬಿದ್ದ ತನ್ನ ಮೊಬೈಲ್ ತೆಗೆಯಲು ಹಳಿಗೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದು, ಕೂಡಲೇ ಆಕೆಯನ್ನು ಮೇಲೆಕೆ ಎಳೆದುಕೊಂಡಿದ್ದಾರೆ. ಇನ್ನು ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಕಾರಣ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Tue, 12 March 24

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!