AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ: ಕೊರೊನಾ ಮೊದಲಿನ ವೇಳಾಪಟ್ಟಿ

ಕೊರೊನಾ ಪಿಡುಗು ಹರಡುವ ಮೊದಲು ಇದ್ದ ವೇಳಾಪಟ್ಟಿಯ ಮಾದರಿಯಲ್ಲಿಯೇ ನವೆಂಬರ್ 18ರಿಂದ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ.

Namma Metro: ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ: ಕೊರೊನಾ ಮೊದಲಿನ ವೇಳಾಪಟ್ಟಿ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 16, 2021 | 8:37 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ನ.18ರಿಂದ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಮೆಜೆಸ್ಟಿಕ್​ನಿಂದ 11:30ಕ್ಕೆ ಕೊನೆಯ ರೈಲು ಸಂಚರಿಸಲಿದೆ. ಭಾನುವಾರ ಬೆಳಿಗ್ಗೆ ಒಂದು ತಾಸು ತಡವಾಗಿ, ಎಂದರೆ 7 ಗಂಟೆಯಿಂದ ಸೇವೆ ಆರಂಭವಾಗಲಿದೆ. ಕೊರೊನಾ ಪಿಡುಗು ಹರಡುವ ಮೊದಲು ಇದ್ದ ವೇಳಾಪಟ್ಟಿಯ ಮಾದರಿಯಲ್ಲಿಯೇ ನವೆಂಬರ್ 18ರಿಂದ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಕೊರೋನಾ ಅನ್​ಲಾಕ್ ಆದ ಬಳಿಕ ಹಂತಹಂತವಾಗಿ ನಮ್ಮ ಮೆಟ್ರೋ ಸೇವೆಯ ಅವಧಿ ವಿಸ್ತರಣೆಯಾಗಿತ್ತು. ಈವರೆಗೆ ಬೆಳಿಗ್ಗೆ 7ರಿಂದ ರಾತ್ರಿ 10ರವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸುತ್ತಿದ್ದವು.

Metro-Rail

ಮೆಟ್ರೋ ರೈಲು ನಿಗಮದ ಪತ್ರಿಕಾ ಹೇಳಿಕೆ

ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ ನಮ್ಮ ಮೆಟ್ರೋ (Namma Metro) ಸಂಚಾರಕ್ಕೆ 10 ವರ್ಷ ಪೂರ್ಣವಾಗಿದೆ. 2011 ರ ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕಾರ್ಯಾರಂಭವಾಗಿತ್ತು. ಅಂದು ಹಳಿಗೆ ಇಳಿದಿದ್ದ ನಮ್ಮ ಮೆಟ್ರೋ ರೈಲು ಇಂದಿಗೆ 10 ವರ್ಷಗಳನ್ನು ಪೂರೈಸಿಕೊಂಡಿದೆ. ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೊದಲಿಗೆ ಮೆಟ್ರೋ ಸಂಚಾರ ಆರಂಭ ಆಗಿತ್ತು. 6 ಕಿ.ಮೀ. ಮಾರ್ಗದಲ್ಲಿ ಮೊದಲ ಬಾರಿಗೆ ಮೆಟ್ರೋ ಸಂಚರಿಸಿತ್ತು.

ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಿಕರು, ಮೆಟ್ರೋಗೆ ಭೂಮಿ ನೀಡಿದವರಿಗೆ ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್​ ಕೃತಜ್ಞತೆ ಸಮರ್ಪಣೆ ಮಾಡಿದ್ದಾರೆ. ಪ್ರಸ್ತುತ 56 ಕಿ.ಮೀ. ನಮ್ಮ ಮೆಟ್ರೋ ಸಂಚಾರ ನಡೆಸುತ್ತಿದೆ. ಇದನ್ನು 175 ಕಿ.ಮೀ.ಗೆ ವಿಸ್ತರಿಸಬೇಕೆಂಬುದು ನಮ್ಮ ಉದ್ದೇಶ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ 2024ರ ಡಿಸೆಂಬರ್​​ ವೇಳೆಗೆ ಈ ಮೆಟ್ರೋ ಕಾಮಗಾರಿ ಪೂರ್ಣ ಆಗಲಿದೆ. 175 ಕಿ.ಮೀ. ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ಬಿಎಂಆರ್​ಸಿಎಲ್​ ಎಂಡಿ ಅಂಜುಂ ಪರ್ವೇಜ್​ ಹೇಳಿದ್ದಾರೆ.

855 ಮೀಟರ್ ಸುರಂಗ ಕೊರೆದ ವಿಂದ್ಯಾ ಯಂತ್ರ ಅಕ್ಟೋಬರ್ 13 ರಂದು ನಮ್ಮ ಮೆಟ್ರೋ ಮತ್ತೊಂದು ಟಿಬಿಎಂ ಬ್ರೇಕ್​ ಥ್ರೂ ಪಡೆದುಕೊಂಡಿದೆ. ‘ವಿಂದ್ಯಾ’ ಯಂತ್ರ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದಿದೆ. ಕಳೆದ ತಿಂಗಳು ಹೊರಬಂದಿದ್ದ ಟಿಬಿಎಂ ‘ಊರ್ಜಾ’ ಯಂತ್ರ, ಸುರಂಗ ಕೊರೆಯಲು ಯಶಸ್ವಿಯಾಗಿತ್ತು. ಅಕ್ಟೋಬರ್ 13 ರಂದು 2ನೇ ಯಂತ್ರ ವಿಂದ್ಯಾ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದಿದೆ. ಕಂಟೋನ್ಮೆಂಟ್​ನಿಂದ ಶಿವಾಜಿನಗರದವರೆಗೆ ಸುರಂಗ ಮಾರ್ಗ ಕೊರೆಯಲಾಗಿದೆ. 855 ಮೀಟರ್​ ಸುರಂಗ ಕೊರೆದು ವಿಂದ್ಯಾ ಯಂತ್ರ ಹೊರಬಂದಿದೆ.

ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮೊದಲು ಸೂಚನೆ ನೀಡಿದ್ದರು. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಇದನ್ನೂ ಓದಿ: ನಮ್ಮ ಮೆಟ್ರೋ ಕಾಮಗಾರಿ ವೇಳೆ ಎಡವಟ್ಟು; 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಕ್ರೇನ್ ಕಟ್ ಇದನ್ನೂ ಓದಿ: ನಾಯಂಡಹಳ್ಳಿ-ಕೆಂಗೇರಿ ನಡುವೆ ನಮ್ಮ ಮೆಟ್ರೋ ಮಾರ್ಗದಲ್ಲಿ ಕಳಪೆ ರಸ್ತೆಗಳ ನಿರ್ಮಾಣ: ಬಿಬಿಎಂಪಿಗೆ ಆತಂಕ

Published On - 8:05 pm, Tue, 16 November 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ