AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SM ಕೃಷ್ಣ ನಿಧನ: ನಾಳೆ ಮೆಟ್ರೋ ಕಚೇರಿಗೆ ರಜೆ, ರೈಲು ಸಂಚಾರ ಇರುತ್ತಾ? ಇಲ್ವಾ?

ಕರ್ನಾಟಕದ ಮಾಜಿ ಸಿಎಂ, ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರಿಗೆ ಗೌರವಾರ್ಥವಾಗಿ ನಾಳೆ ಅಂದರೆ ಡಿಸೆಂಬರ್ 11ರಂದು ಸರ್ಕಾರಿ ಕಚೇರಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದೇ ವೇಳೆ ಬೆಂಗಳೂರಿ ನಮ್ಮ ಮೆಟ್ರೋ ಕಚೇರಿಗೂ ಸಹ ರಜೆ ಘೋಷಿಸಲಾಗಿದ್ದು, ರೈಲು ಸಂಚಾರ ಇರುತ್ತೋ ಇಲ್ವಾ? ಎನ್ನುವ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಬಿಎಂಆರ್​ಸಿಎಲ್​ ಸ್ಪಷ್ಟೀಕರಣ ನೀಡಿದ್ದು, ಅದು ಈ ಕೆಳಗಿನಂತಿದೆ.

SM ಕೃಷ್ಣ ನಿಧನ: ನಾಳೆ ಮೆಟ್ರೋ ಕಚೇರಿಗೆ ರಜೆ, ರೈಲು ಸಂಚಾರ ಇರುತ್ತಾ? ಇಲ್ವಾ?
ನಮ್ಮ ಮೆಟ್ರೋ
ರಮೇಶ್ ಬಿ. ಜವಳಗೇರಾ
|

Updated on:Dec 10, 2024 | 9:40 PM

Share

ಬೆಂಗಳೂರು, (ಡಿಸೆಂಬರ್ 10): ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲು ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನ ಶೋಚಾರಣೆ ಘೋಷಿಸಿದೆ. ಅಲ್ಲದೇ ನಾಳೆ(ಡಿಸೆಂಬರ್ 11) ಒಂದು ದಿನ ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಹೀಗಾಗಿ ಬುಧವಾರ ನಮ್ಮ ಮೆಟ್ರೋ ಕಚೇರಿಗೂ ಸಹ ರಜೆ ನೀಡಲಾಗಿದೆ. ಇದರಿಂದ ನಾಳೆ ನಮ್ಮ ಮೆಟ್ರೋ ಸಂಚಾರ ಬಗ್ಗೆ ಹಲವು ಗೊಂದಲಗಳು ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್​ಸಿಎಲ್​ ಟ್ವೀಟ್ ಮಾಡಿದ್ದು, ಕೇವಲ ಕಚೇರಿಗೆ ಮಾತ್ರ ರಜೆ ಇದ್ದು, ಎಂದಿನಂತೆ ರೈಲು ಸಂಚಾರ ಇರಲಿದೆ ಎಂದು ಸ್ಪಷ್ಟಪಡಿಸಿದೆ.

ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದೆ. ಅದರಂತೆ ನಮ್ಮ ಮೆಟ್ರೋ ಕಚೇರಿಗೆ ಸಹ ಬಿಎಂಆರ್​ಸಿಎಲ್​ ರಜೆ ನೀಡಿದೆ. ಈ ಬಗ್ಗೆ ಬಿಎಂಆರ್​ಸಿಎಲ್​ ಟ್ವೀಟ್ ಮಾಡಿದೆ. ಆದ್ರೆ, ರೈಲು ಸಂಚಾರ ಸಹ ಇರುವುದಿಲ್ಲ ಎನ್ನುವ ಸುಳ್ಳು ವದಂತಿ ಹರಿದಾಡುತ್ತಿದೆ. ಇನ್ನು ಈ ವಿಚಾರ ಗಮನಕ್ಕೆ ಬಂದ ಕೂಡಲೇ ಬಿಎಂಆರ್​ಸಿಎಲ್, ಮತ್ತೊಂದು ಟ್ವೀಟ್ ಮಾಡಿದ್ದು, ನಮ್ಮ ಮೆಟ್ರೋ ಎಂದಿನಂತೆ ಸೇವೆ ಸಲ್ಲಿಸಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ ಎಂದು ಸ್ಪಷ್ಟೀಕರಣ ನೀಡಿದೆ.

ಇದನ್ನೂ ಓದಿ: ಎಸ್.ಎಂ. ಕೃಷ್ಣ ನಿಧನಕ್ಕೆ ಶೋಕ; ಕರ್ನಾಟಕದ ಬ್ಯಾಂಕುಗಳಿಗೂ ಬುಧವಾರ ರಜೆಯಾ? ಇಲ್ಲಿದೆ ಡೀಟೇಲ್ಸ್

ಪ್ರತಿನಿತ್ಯ ಯಾವ ಸಮಯಕ್ಕೆ ಮೆಟ್ರೋ ಸಂಚಾರ ಆರಂಭವಾಗುತ್ತೋ ಅದೇ ಸಮಯಕ್ಕೆ ಲಭ್ಯವಿರಲಿದೆ. ಇದರಿಂದ ಮೆಟ್ರೋ ಪ್ರಯಾಣಿಕರೇ ಯಾವುದೇ ಗೊಂದಲಕ್ಕೀಡಾಗದೇ  ಎಂದಿನಂತೆ ಮೆಟ್ರೋದಲ್ಲಿ ಸಂಚರಿಸಬಹುದು.

ಇನ್ನು ಸರ್ಕಾರಿ ಕಚೇರಿಗಳು, ಸರ್ಕಾರಿ ಶಾಲಾ-ಕಾಲೇಜುಗಳು, ಖಾಸಗಿ ಶಾಲೆಗಳೂ ನಾಳೆ ಬಂದ್ ಆಗಿರುತ್ತವೆ.  ಸರ್ಕಾರಿ ಕಚೇರಿಗಳಲ್ಲಿನ ಕೆಲಸದ ನಿಮಿತ್ತ ಹೋಗುವವರು ಈ ಬಗ್ಗೆ ಗಮನಿಸಬೇಕು.

Published On - 9:23 pm, Tue, 10 December 24

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!