SM ಕೃಷ್ಣ ನಿಧನ: ನಾಳೆ ಮೆಟ್ರೋ ಕಚೇರಿಗೆ ರಜೆ, ರೈಲು ಸಂಚಾರ ಇರುತ್ತಾ? ಇಲ್ವಾ?

ಕರ್ನಾಟಕದ ಮಾಜಿ ಸಿಎಂ, ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರಿಗೆ ಗೌರವಾರ್ಥವಾಗಿ ನಾಳೆ ಅಂದರೆ ಡಿಸೆಂಬರ್ 11ರಂದು ಸರ್ಕಾರಿ ಕಚೇರಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದೇ ವೇಳೆ ಬೆಂಗಳೂರಿ ನಮ್ಮ ಮೆಟ್ರೋ ಕಚೇರಿಗೂ ಸಹ ರಜೆ ಘೋಷಿಸಲಾಗಿದ್ದು, ರೈಲು ಸಂಚಾರ ಇರುತ್ತೋ ಇಲ್ವಾ? ಎನ್ನುವ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಬಿಎಂಆರ್​ಸಿಎಲ್​ ಸ್ಪಷ್ಟೀಕರಣ ನೀಡಿದ್ದು, ಅದು ಈ ಕೆಳಗಿನಂತಿದೆ.

SM ಕೃಷ್ಣ ನಿಧನ: ನಾಳೆ ಮೆಟ್ರೋ ಕಚೇರಿಗೆ ರಜೆ, ರೈಲು ಸಂಚಾರ ಇರುತ್ತಾ? ಇಲ್ವಾ?
ನಮ್ಮ ಮೆಟ್ರೋ

Updated on: Dec 10, 2024 | 9:40 PM

ಬೆಂಗಳೂರು, (ಡಿಸೆಂಬರ್ 10): ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲು ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನ ಶೋಚಾರಣೆ ಘೋಷಿಸಿದೆ. ಅಲ್ಲದೇ ನಾಳೆ(ಡಿಸೆಂಬರ್ 11) ಒಂದು ದಿನ ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಹೀಗಾಗಿ ಬುಧವಾರ ನಮ್ಮ ಮೆಟ್ರೋ ಕಚೇರಿಗೂ ಸಹ ರಜೆ ನೀಡಲಾಗಿದೆ. ಇದರಿಂದ ನಾಳೆ ನಮ್ಮ ಮೆಟ್ರೋ ಸಂಚಾರ ಬಗ್ಗೆ ಹಲವು ಗೊಂದಲಗಳು ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್​ಸಿಎಲ್​ ಟ್ವೀಟ್ ಮಾಡಿದ್ದು, ಕೇವಲ ಕಚೇರಿಗೆ ಮಾತ್ರ ರಜೆ ಇದ್ದು, ಎಂದಿನಂತೆ ರೈಲು ಸಂಚಾರ ಇರಲಿದೆ ಎಂದು ಸ್ಪಷ್ಟಪಡಿಸಿದೆ.

ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದೆ. ಅದರಂತೆ ನಮ್ಮ ಮೆಟ್ರೋ ಕಚೇರಿಗೆ ಸಹ ಬಿಎಂಆರ್​ಸಿಎಲ್​ ರಜೆ ನೀಡಿದೆ. ಈ ಬಗ್ಗೆ ಬಿಎಂಆರ್​ಸಿಎಲ್​ ಟ್ವೀಟ್ ಮಾಡಿದೆ. ಆದ್ರೆ, ರೈಲು ಸಂಚಾರ ಸಹ ಇರುವುದಿಲ್ಲ ಎನ್ನುವ ಸುಳ್ಳು ವದಂತಿ ಹರಿದಾಡುತ್ತಿದೆ. ಇನ್ನು ಈ ವಿಚಾರ ಗಮನಕ್ಕೆ ಬಂದ ಕೂಡಲೇ ಬಿಎಂಆರ್​ಸಿಎಲ್, ಮತ್ತೊಂದು ಟ್ವೀಟ್ ಮಾಡಿದ್ದು, ನಮ್ಮ ಮೆಟ್ರೋ ಎಂದಿನಂತೆ ಸೇವೆ ಸಲ್ಲಿಸಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ ಎಂದು ಸ್ಪಷ್ಟೀಕರಣ ನೀಡಿದೆ.

ಇದನ್ನೂ ಓದಿ: ಎಸ್.ಎಂ. ಕೃಷ್ಣ ನಿಧನಕ್ಕೆ ಶೋಕ; ಕರ್ನಾಟಕದ ಬ್ಯಾಂಕುಗಳಿಗೂ ಬುಧವಾರ ರಜೆಯಾ? ಇಲ್ಲಿದೆ ಡೀಟೇಲ್ಸ್

ಪ್ರತಿನಿತ್ಯ ಯಾವ ಸಮಯಕ್ಕೆ ಮೆಟ್ರೋ ಸಂಚಾರ ಆರಂಭವಾಗುತ್ತೋ ಅದೇ ಸಮಯಕ್ಕೆ ಲಭ್ಯವಿರಲಿದೆ. ಇದರಿಂದ ಮೆಟ್ರೋ ಪ್ರಯಾಣಿಕರೇ ಯಾವುದೇ ಗೊಂದಲಕ್ಕೀಡಾಗದೇ  ಎಂದಿನಂತೆ ಮೆಟ್ರೋದಲ್ಲಿ ಸಂಚರಿಸಬಹುದು.

ಇನ್ನು ಸರ್ಕಾರಿ ಕಚೇರಿಗಳು, ಸರ್ಕಾರಿ ಶಾಲಾ-ಕಾಲೇಜುಗಳು, ಖಾಸಗಿ ಶಾಲೆಗಳೂ ನಾಳೆ ಬಂದ್ ಆಗಿರುತ್ತವೆ.  ಸರ್ಕಾರಿ ಕಚೇರಿಗಳಲ್ಲಿನ ಕೆಲಸದ ನಿಮಿತ್ತ ಹೋಗುವವರು ಈ ಬಗ್ಗೆ ಗಮನಿಸಬೇಕು.

Published On - 9:23 pm, Tue, 10 December 24

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us