Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೆಟ್ರೋ ಟನಲ್ ಕಾಮಗಾರಿ 2025ರ ಮಾರ್ಚ್​ ವೇಳೆಗೆ ಪೂರ್ಣ: ಡಿಕೆ ಶಿವಕುಮಾರ್

ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಶುಕ್ರವಾರ ಬೆಂಗಳೂರು ಮೆಟ್ರೋದ ಪಿಂಕ್ ಲೈನ್‌ ಸುರಂಗ ಮಾರ್ಗದ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು.

ಬೆಂಗಳೂರು ಮೆಟ್ರೋ ಟನಲ್ ಕಾಮಗಾರಿ 2025ರ ಮಾರ್ಚ್​ ವೇಳೆಗೆ ಪೂರ್ಣ: ಡಿಕೆ ಶಿವಕುಮಾರ್
ಬೆಂಗಳೂರು ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ವೀಕ್ಷಣೆ ಮಾಡಿದ ಡಿಕೆ ಶಿವಕುಮಾರ್Image Credit source: BMRCL
Follow us
Kiran Surya
| Updated By: Rakesh Nayak Manchi

Updated on: Jul 14, 2023 | 7:06 PM

ಬೆಂಗಳೂರು, ಜುಲೈ 14: ಮೆಟ್ರೋದ ಪಿಂಕ್ ಲೈನ್‌ ಸುರಂಗ ಮಾರ್ಗದ (Bengaluru Metro Tunnel) ಕಾಮಗಾರಿ 2025ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಸುರಂಗ ಮಾರ್ಗದ ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದೆ. ಸುರಂಗ ಮಾರ್ಗದಲ್ಲಿ ಒಟ್ಟು 18 ಮೆಟ್ರೋ ನಿಲ್ದಾಣಗಳು ಇರಲಿದೆ ಎಂದರು.

ಅಧಿಕಾರಿಗಳು ಹೇಳುವುದು ಹೇಳುತ್ತಾರೆ, ಆದರೆ ಸಾಧಕ ಬಾಧಕ ನೋಡಬೇಕಾಗುತ್ತದೆ. ಅಧಿಕಾರಿಗಳ ಮಾಹಿತಿ ಪ್ರಕಾರ ಸುರಂಗ ಮಾರ್ಗವು 21.26 ಕಿ.ಮೀ. ಇರಲಿದ್ದು, ಡಬಲ್ ಲೇನ್ ಇರಲಿದೆ. 4 ಪ್ಯಾಕೇಜ್​ನಲ್ಲಿ ಯೋಜನೆ ಇದ್ದು ಶೇ 75 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಲಕ್ಕಸಂದ್ರ ಮೆಟ್ರೋ ವೀಕ್ಷಣೆ ಮುಗಿಸಿದ ನಂತರ ಅವರು ಎಂಜಿ ರಸ್ತೆ ಟನಲ್‌ಗೆ ತೆರಳಿ ವೀಕ್ಷಿಸಿದರು.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’

ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ 6 ನಿಲ್ದಾಣಗಳೊಂದಿಗೆ 7.50 ಕಿಮೀ ಎಲಿವೇಟೆಡ್ ವಿಭಾಗವನ್ನು ಒಳಗೊಂಡಿದೆ ಮತ್ತು ಡೈರಿ ಸರ್ಕಲ್‌ನಿಂದ ನಾಗವಾರದವರೆಗೆ 12 ನಿಲ್ದಾಣಗಳೊಂದಿಗೆ 13.76 ಕಿಮೀ ಭೂಗತ ವಿಭಾಗವನ್ನು ಒಳಗೊಂಡಿದೆ” ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಒಂಬತ್ತು ಸುರಂಗ ಕೊರೆಯುವ ಯಂತ್ರಗಳನ್ನು (ಟಿಬಿಎಂ) ಸುರಂಗ ಕಾಮಗಾರಿಗೆ ತೊಡಗಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಐದು ಟಿಬಿಎಂಗಳು ಸುರಂಗ ಕಾಮಗಾರಿಯನ್ನು ಪೂರ್ಣಗೊಳಿಸಿದ್ದು, ಉಳಿದವುಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ