AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಮೂರು ಹೆಚ್ಚುವರಿ ಹೊಸ ಬೋಗಿಗಳ ರವಾನೆ

ಬಹು ನಿರೀಕ್ಷಿತ ಹಳದಿ ಮಾರ್ಗವನ್ನು ಚಾಲನೆಗೊಳಿಸುವತ್ತ ಬಿಎಂಆರ್​ಸಿಎಲ್​​ ಮತ್ತೊಂದು ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಮಂಗಳವಾರ ಕೋಲ್ಕತ್ತಾದಿಂದ 3 ಹೊಸ ಬೋಗಿಗಳು ರವಾನೆಯಾಗಿವೆ. ಮೇ 2 ರೊಳಗೆ ಇನ್ನೂ 3 ಮತ್ತು ಮೇ 10-15ರೊಳಗೆ ಅಂತಿಮ ಬೋಗಿಗಳು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಮೂರು ಹೆಚ್ಚುವರಿ ಹೊಸ ಬೋಗಿಗಳ ರವಾನೆ
ಮೆಟ್ರೋ ಹಳದಿ ಮಾರ್ಗ
ಗಂಗಾಧರ​ ಬ. ಸಾಬೋಜಿ
|

Updated on:May 03, 2025 | 9:17 AM

Share

ಬೆಂಗಳೂರು, ಮೇ 01: ಯಲ್ಲೋ ಲೈನ್ ಮೆಟ್ರೋಗಾಗಿ (Namma Metro) ಸಿಲಿಕಾನ್​ ಸಿಟಿ ಜನರು ಕಾಯುತ್ತಿದ್ದಾರೆ. ಹೀಗಿರುವಾಗಲೇ ಬಿಎಂಆರ್​​​ಸಿಎಲ್​​ (BMRCL) ಗುಡ್ ನ್ಯೂಸ್ ಒಂದನ್ನು ನೀಡಿದೆ. ಅದೇನೆಂದರೆ ಟಿಟಾಗಢನಿಂದ 3 ಹೊಸ ಮೆಟ್ರೋ ಬೋಗಿಗಳು ರವಾನೆಯಾಗಿವೆ. ಮೇ 2 ರೊಳಗೆ ಇನ್ನೂ 3 ಬೋಗಿಗಳು ಮತ್ತು ಮೇ 10-15 ರ ನಡುವೆ ಅಂತಿಮ ಕೋಚ್‌ಗಳು ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಎಂಆರ್​​​ಸಿಎಲ್​, ಬಹು ನಿರೀಕ್ಷಿತ ಹಳದಿ ಮಾರ್ಗವನ್ನು ಚಾಲನೆಗೊಳಿಸುವತ್ತ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಮೂರನೇ 6- ಕೋಚ್ ರೈಲಿನ ಮೂರು ಕೋಚ್‌ಗಳನ್ನು ಯಶಸ್ವಿಯಾಗಿ ಟಿಟಾಗಢ ಫ್ಯಾಕ್ಟರಿಯಿಂದ ಏಪ್ರಿಲ್​ 29ರಂದು ಬೆಂಗಳೂರಿಗೆ ರವಾನಿಸಲಾಗಿದ್ದು, ಉಳಿದ ಮೂರು ಕೋಚ್‌ಗಳನ್ನು 2025ರ ಮೇ 2 ರಂದು ರವಾನಿಸಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ ಖಚಿತ, ಮೇ 13ಕ್ಕೆ ಆದೇಶ ಸಾಧ್ಯತೆ
Image
ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇಂದು ಮಳೆ
Image
ಇದೇ ತಿಂಗಳು ಬೆಂಗಳೂರಿಗೆ ಬರಲಿದೆ ನಮ್ಮ ಮೆಟ್ರೋ ಹಳದಿ ಮಾರ್ಗದ ಮೊದಲ ರೈಲು
Image
ನಮ್ಮಮೆಟ್ರೋ ಹಳದಿ ಮಾರ್ಗ ಬೊಮ್ಮಸಂದ್ರ ನಿಲ್ದಾಣಕ್ಕೆ ತೈವಾನ್‌ ಕಂಪನಿ ಹೆಸರು!

ಬಿಎಂಆರ್​​​ಸಿಎಲ್ ಟ್ವೀಟ್​

ಈ ಕೋಚ್‌ಗಳು 2025ರ ಮೇ 10ರಿಂದ ಮೇ 15ರೊಳಗೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ. ಮೂರನೇ ರೈಲಿನ ಕಾರ್ಯಾರಂಭದೊಂದಿಗೆ, ಬಿಎಂಆರ್‌ಸಿಎಲ್ ಹಳದಿ ಮಾರ್ಗವನ್ನು ಸಾಧ್ಯವಾದಷ್ಟು ಅತೀ ಶೀಘ್ರದಲ್ಲಿ ಸೇವೆಗೆ ತರಲು ತೀವ್ರ ಪ್ರಯತ್ನಗಳು ನಡೆಯುತ್ತಿವೆ. ಇದು ನಗರ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲಿದೆ ಮತ್ತು ಪ್ರಯಾಣಿಕರಿಗೆ ಉತ್ತಮ ಸಂಪರ್ಕವನ್ನು ಒದಗಿಸಲಿದೆ ಎಂದಿದೆ.

ಇದನ್ನೂ ಓದಿ: ಇದೇ ತಿಂಗಳು ಬೆಂಗಳೂರಿಗೆ ಬರಲಿದೆ ನಮ್ಮ ಮೆಟ್ರೋ ಹಳದಿ ಮಾರ್ಗದ ಮೊದಲ ರೈಲು: ತೇಜಸ್ವಿ ಸೂರ್ಯ

ಈ ಮೆಟ್ರೋ ಕೋಚ್‌ಗಳ ಆಗಮನವು ಜಾಗತಿಕ ಮಟ್ಟದ ಮೂಲಸೌಕರ್ಯ ಒದಗಿಸಲು ಬಿಎಂಆರ್‌ಸಿಎಲ್ ನಿಂದ ನೀಡಲಾಗುತ್ತಿರುವ ಬದ್ಧತೆಯ ಪ್ರತೀಕವಾಗಿದ್ದು, ಬೆಂಗಳೂರಿನ ಮೆಟ್ರೋ ಜಾಲವನ್ನು ವಿಸ್ತರಿಸಿ ನಿರಂತರವಾಗಿ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನು ಪೂರೈಸುವತ್ತ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಜೂನ್ ಅಥವಾ ಜುಲೈ ಒಳಗೆ ಹಳದಿ ಮಾರ್ಗ ಸಂಚಾರ ಮುಕ್ತ‌!

ಜೂನ್ ಮೊದಲ ವಾರಕ್ಕೆ ಮತ್ತೊಂದು ರೈಲು ಸಿಗಲಿದೆ. ಅಲ್ಲಿಗೆ ಒಟ್ಟು 4 ರೈಲು ಈ ಮಾರ್ಗಕ್ಕೆ ಸಿಗಲಿದೆ. ಈ ರೈಲುಗಳ ಸಂಪೂರ್ಣ ಮಾರ್ಗ ಪರಿಶೀಲನೆ ಮಾಡಿ, ಜೂನ್ ಕೊನೆಯ ಅಥವಾ ಜುಲೈ ಮೊದಲ ವಾರದಲ್ಲಿ, ಈ ನಾಲ್ಕು ರೈಲ್ವೆ ಮಾರ್ಗ ಓಪನ್ ಮಾಡುವುದು ಬಹುತೇಕ ಖಚಿತವಾಗಿದೆ‌. ಪ್ರತಿ 30 ನಿಮಿಷಕ್ಕೊಂದು ರೈಲಿನಂತೆ, ಸಂಚಾರ ಮಾಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಒಟ್ಟು ನಿಲ್ದಾಣಗಳ ಪೈಕಿ ಮೂರು ಅಥವಾ ಐದು ನಿಲ್ದಾಣಕ್ಕೊಂದು ಸ್ಟಾಪ್​​ನಂತೆ ಜನಸಂಖ್ಯೆಗೆ ಅಣುಗುಣವಾಗಿ ಕಾರ್ಯಚರಣೆ ಮಾಡಲು ಪ್ಲ್ಯಾನ್ ಕೂಡ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 am, Thu, 1 May 25

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್