AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳದಲ್ಲಿ ಬಿಎಂಆರ್​ಸಿಎಲ್​​ನಿಂದ ಬಹುಮಾದರಿ ಸಾರಿಗೆ ಕೇಂದ್ರ ನಿರ್ಮಾಣ ವಿಳಂಬ: ಡಿಕೆ ಶಿವಕುಮಾರ್​ಗೆ ಸುರೇಶ್ ಕುಮಾರ್ ಪತ್ರ

ಬೆಂಗಳೂರಿನ ಹೆಬ್ಬಾಳದಲ್ಲಿ ಮೆಟ್ರೋ ಸಂಸ್ಥೆಯ 45 ಎಕರೆ ಜಾಗವನ್ನು ಖಾಸಗಿ ಸಂಸ್ಥೆ ಪಂಚತಾರಾ ಹೋಟೆಲ್‌ಗೆ ಬಳಸಲು ಯೋಜಿಸಿದೆ. ಇದು ಮೆಟ್ರೋ ವಿಸ್ತರಣೆಗೆ ಅಡ್ಡಿಯಾಗುತ್ತಿದೆ. ಸರ್ಕಾರ ಮೆಟ್ರೋ ಯೋಜನೆಗೆ ಆದ್ಯತೆ ನೀಡಬೇಕು ಮತ್ತು ಖಾಸಗಿ ಹಿತಾಸಕ್ತಿಗಳನ್ನು ಪರಿಗಣಿಸಬಾರದು. ಭೂಮಾಲೀಕರಿಗೆ ಸೂಕ್ತ ಪರಿಹಾರ ನೀಡುವುದು ಅಗತ್ಯ ಎಂದು ಶಾಸಕ ಸುರೇಶ್ ಕುಮಾರ್ ಡಿಸಿಎಂ ಡಿಕೆ ಶಿವಕುಮಾರ್​, ಸಚಿವ ಎಂ.ಬಿ. ಪಾಟೀಲ್​​ಗೆ ಪತ್ರ ಬರೆದಿದ್ದಾರೆ.

ಹೆಬ್ಬಾಳದಲ್ಲಿ ಬಿಎಂಆರ್​ಸಿಎಲ್​​ನಿಂದ ಬಹುಮಾದರಿ ಸಾರಿಗೆ ಕೇಂದ್ರ ನಿರ್ಮಾಣ ವಿಳಂಬ: ಡಿಕೆ ಶಿವಕುಮಾರ್​ಗೆ ಸುರೇಶ್ ಕುಮಾರ್ ಪತ್ರ
ಹೆಬ್ಬಾಳದಲ್ಲಿ ಬಿಎಂಆರ್​ಸಿಎಲ್​​ನಿಂದ ಬಹುಮಾದರಿ ಸಾರಿಗೆ ಕೇಂದ್ರ ನಿರ್ಮಾಣ ವಿಳಂಬ: ಡಿಕೆ ಶಿವಕುಮಾರ್​ಗೆ ಸುರೇಶ್ ಕುಮಾರ್ ಪತ್ರ
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 27, 2025 | 10:48 PM

Share

ಬೆಂಗಳೂರು, ಫೆಬ್ರವರಿ 27: ನಗರದ ಹೆಬ್ಬಾಳದಲ್ಲಿ ಬಿಎಂಆರ್​​ಸಿಎಲ್​ನಿಂದ (BMRCL​​) ಬಹು ಮಾದರಿ ಸಾರಿಗೆ ಕೇಂದ್ರ ನಿರ್ಮಾಣ ವಿಚಾರವಾಗಿ ಕೆಐಎಡಿಬಿಯ 45 ಎಕರೆ ಜಮೀನನ್ನು ಶೀಘ್ರ ಹಸ್ತಾಂತರಿಸಲು ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್​​ಗೆ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಬಹಿರಂಗ ಪತ್ರ ಬರೆದಿದ್ದಾರೆ.

ಹೆಬ್ಬಾಳದ ಬಳಿ ನಮ್ಮ ಮೆಟ್ರೋ ಸಂಸ್ಥೆ ಬಹುಮಾದರಿಯ ಸಾರಿಗೆ ಕೇಂದ್ರ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿರುವ 45 ಎಕರೆ ಜಾಗದಲ್ಲಿಯೇ ಖಾಸಗಿ ಸಂಸ್ಥೆಯೊಂದು ಪಂಚತಾರಾ ಹೋಟೆಲ್, ಮಾಲ್ ಮತ್ತು ರೆಸಾರ್ಟ್ ಸೇರಿದಂತೆ ಪ್ರೀಮಿಯಂ ಟೌನ್​​ಶಿಪ್​​ ನಿರ್ಮಾಣವನ್ನು ಯೋಜಿಸಿದೆ ಎಂದು ಮಾಧ್ಯಮ ವರದಿಗಳಿಂದ ನಾನು ಅರಿತಿದ್ದೇನೆ.

ಇದನ್ನೂ ಓದಿ: ಕೆಂಪೇಗೌಡ ಲೇಔಟ್​ಗೆ ಮೂಲಭೂತ ಸೌಕರ್ಯ ವಿಳಂಬ: ಬಿಡಿಎ ಅಧಿಕಾರಿಗಳ ವರ್ತನೆಗೆ ಅರ್ಜಿ ಸಮಿತಿ ಸದಸ್ಯರು ಸಭಾತ್ಯಾಗ

ಸಂಚಾರ ದಟ್ಟಣೆಯಿಂದ ನಲುಗುತ್ತಿರುವ ಅಸಂಖ್ಯ ಜನಸಾಮಾನ್ಯರ ಬಳಕೆಗೆ ನಮ್ಮ ಮೆಟ್ರೋ ಸೇವೆ ಮೌಲ್ಯಾತೀತದ್ದಾಗಿದ್ದು, ನಮ್ಮ ಮೆಟ್ರೋ ಸಂಸ್ಥೆಯ ಬೇಡಿಕೆಗಳನ್ನು ಪುರಸ್ಕರಿಸುವುದು ಬೆಂಗಳೂರು ನಗರದ ಹಿತದೃಷ್ಟಿಯಿಂದ ಸರ್ಕಾರದ ಮೊದಲ ಆದ್ಯತೆಯಾಗಬೇಕಾದ ಅನಿವಾರ್ಯತೆ ಇದೆ. ನಿಮಗೆ ತಿಳಿದಿರುವಂತೆ, ನಮ್ಮ ಮೆಟ್ರೋ ಸಂಸ್ಥೆಯು ತನ್ನ ಸಾರ್ವಜನಿಕ ಸಾರಿಗೆ ಅಗತ್ಯಗಳಿಗಾಗಿ ಬೆಂಗಳೂರಿನ ಯಾವುದೇ ಮೂಲೆಯಲ್ಲಿ ಇಷ್ಟು ವಿಶಾಲವಾದ ಭೂಮಿಯನ್ನು ಪಡೆಯುವುದು ಅಸಾಧ್ಯ. ನನಗೆ ತಿಳಿದಂತೆ ಬಿಎಂಆರ್ ಸಿಎಲ್ ಸಂಸ್ಥೆ ಮಾರ್ಚ್ 2024 ರಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿ “ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ವಾಧೀನದಲ್ಲಿರುವ ಹೆಬ್ಬಾಳದಲ್ಲಿನ 45-ಎಕರೆ ಭೂಮಿಯನ್ನು ತನ್ನ ಸುಪರ್ದಿಗೆ ಕೋರಿದೆ. ಭೂ ಮಾಲೀಕರಿಗೆ ಪಾವತಿಸಲು ಮಂಡಳಿ ನಿಗದಿಪಡಿಸಿದ ಬೆಲೆಯನ್ನು ಪಾವತಿಸಲು ಕೂಡಾ ಬಿಎಂಆರ್​ಸಿಎಲ್ ಸಿದ್ಧವಾಗಿದೆ. ಆದರೆ ಈ ಭೂಮಿಯನ್ನು ಬಿಎಂಆರ್​ಸಿಎಲ್​​ಗೆ ವರ್ಗಾಯಿಸಲು ನಗರಾಭಿವೃದ್ಧಿ ಮತ್ತು ಕೈಗಾರಿಕೆ ಇಲಾಖೆಗಳು ತಮ್ಮದೇ ಆದ ಕಾರಣಗಳಿಗೆ ವಿಳಂಬ ಮಾಡುತ್ತಿವೆ ಎನ್ನುವುದು ಅನವಶ್ಯಕ ಸಂದೇಹವನ್ನು ಸೃಷ್ಟಿಸುತ್ತಿದೆ ಎಂದಿದ್ದಾರೆ.

ಇದು ಸಾರ್ವಜನಿಕ ‌ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ, ‌ ನಿರ್ಣಾಯಕ ಮೂಲಸೌಕರ್ಯ ಯೋಜನೆಗಳ ಕುರಿತಾದ ನಿರ್ಧಾರಗಳನ್ನು ಯಾವುದೇ ಸರ್ಕಾರಗಳು ವಿಳಂಬ ಮಾಡಬಾರದು. ಜೊತೆಗೆ ಈ ಪ್ರಕರಣವು ಇನ್ನಷ್ಟು ಹೆಚ್ಚು ಸೂಕ್ಷವೆಂದು ನನ್ನ ಪ್ರಾಮಾಣಿಕ ಅನಿಸಿಕೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ಕೆಲ ರೈಲುಗಳ ಸಂಚಾರ ಭಾಗಶಃ ರದ್ದು, ಮಾರ್ಗ ಬದಲಾವಣೆ

ನಾಳಿನ ಮಹತ್ವದ ಸಭೆಯಲ್ಲಿ ಈ ಎಲ್ಲ ಅಂಶಗಳನ್ನು ಗಂಭೀರವಾಗಿ ಗಮನಿಸಬೇಕು. ಯಾವುದೇ ರಿಯಲ್ ಎಸ್ಟೇಟ್ ಲಾಬಿಯ ಒತ್ತಡಕ್ಕೆ ಸರ್ಕಾರ ಮಣಿಯಬಾರದು ಮತ್ತು ಅಂತಹ ಎಲ್ಲಾ ಪ್ರಯತ್ನಗಳನ್ನು ಮೊಳಕೆಯಲ್ಲಿ ಚಿವುಟಿ ಹಾಕಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿ ಮಾಡಿದ್ದಾರೆ. ಇಲ್ಲಿ ಖಾಸಗಿ ಹಿತಾಸಕ್ತಿಗಿಂತ ಸಾರ್ವಜನಿಕ ಹಿತಾಸಕ್ತಿ ಮುಖ್ಯವಾಗಬೇಕಿದ್ದು, ಈ ನಿಟ್ಟಿನ ನಿಮ್ಮ ನಿರ್ಧಾರ ಅತ್ಯಂತ ನಿರ್ಣಾಯಕವಾದದ್ದಾಗಲಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ