AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC EV ಪವರ್ ಪ್ಲಸ್ ಬಸ್​​​ಗೆ ಹಸಿರು ನಿಶಾನೆ ತೋರಿದ ಸಚಿವ ಶ್ರೀರಾಮುಲು; ಇಲ್ಲಿದೆ ಬಸ್​​ನ ವಿಶೇಷತೆಗಳು

ಎಲೆಕ್ಟ್ರಿಕ್ ಬಸ್​ಗೆ ಸಾರಿಗೆ ಸಚಿವ ಶ್ರೀರಾಮುಲು ಹಸಿರು ನಿಶಾನೆ ತೋರಿದ್ದು, ಹೊಸ ಬಸ್‌ಗೆ EV ಪವರ್ ಪ್ಲಸ್ ಎಂದು ಹೆಸರಿಡಲಾಗಿದ್ದು, ಇಂದಿನಿಂದಲೇ ಬಸ್​ಗಳು ರಸ್ತೆಗಳಿಯಲಿವೆ.

KSRTC EV ಪವರ್ ಪ್ಲಸ್ ಬಸ್​​​ಗೆ ಹಸಿರು ನಿಶಾನೆ ತೋರಿದ ಸಚಿವ ಶ್ರೀರಾಮುಲು; ಇಲ್ಲಿದೆ ಬಸ್​​ನ ವಿಶೇಷತೆಗಳು
KSRTC EV ಪವರ್ ಪ್ಲಸ್ ಬಸ್​​​ಗೆ ಚಾಲನೆ ನೀಡಿದ ಸಚಿವ ಶ್ರೀರಾಮುಲು
TV9 Web
| Edited By: |

Updated on:Dec 31, 2022 | 12:55 PM

Share

ಬೆಂಗಳೂರು: ಎಲೆಕ್ಟ್ರಿಕ್ ಬಸ್​​ (Electric Bus)ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು (B.Sriramulu) ಅವರು ಹಸಿರು ನಿಶಾನೆ ತೋರಿದ್ದು, ಇಂದಿನಿಂದಲೇ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಆರಂಭಿಸಲಿದೆ. MEIL ಹಾಗೂ KSRTC ಜಂಟಿಯಾಗಿ ರಸ್ತೆಗೆ ಇಳಿಯುತ್ತಿರುವ ಈ ಹೊಸ ಬಸ್‌ಗೆ EV ಪವರ್ ಪ್ಲಸ್ ಎಂದು ಹೆಸರಿಡಲಾಗಿದೆ.​ KSRTC EV ಪವರ್ ಪ್ಲಸ್ ಹಲವು ವಿಶೇಷತೆಗಳನ್ನು ಹೊಂದಿದ್ದು, ಅವುಗಳು ಈ ಕೆಳಗಿನಂತಿವೆ.

  • ಎರಡೂವರೆ ತಾಸು ಚಾರ್ಜ್ ಮಾಡಿದರೆ 300 km ಕ್ರಮಿಸುವಷ್ಟು ಸಾಮರ್ಥ್ಯ ಈ ಬಸ್ ಹೊಂದಿದೆ
  • ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ
  • ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ
  • ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರಿ ಚಾರ್ಜ್ ಆಗುವ ರಿ ಜನರೇಷನ್ ಆಗುವ ಸಿಸ್ಟಮ್ ಈ ಬಸ್​​ನಲ್ಲಿ ಇದೆ
  • ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್ ಇದೆ
  • ಮನರಂಜನೆಗಾಗಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ

ಇದಲ್ಲದೆ, ಈ ಪರಿಸರ ಸ್ನೇಹಿ ಬಸ್ ಸಂಪೂರ್ಣವಾಗಿ ಸೆನ್ಸಾರ್ ಹಿಡಿತದಲ್ಲಿ ಇರಲಿದ್ದು, ಒಟ್ಟಾರೆ ಬಸ್​​ನಲ್ಲಿ 43 + 2 ಸೀಟಿಂಗ್ ಕೆಪಾಸಿಟಿ ಇದೆ. ಫ್ರಂಟ್ ಲಾಗ್ ಮತ್ತು ಬ್ಯಾಕ್ ಲಾಗ್ ಕ್ಯಾಮೆರಾ ವ್ಯವಸ್ಥೆ ಇರಲಿದೆ. ಡ್ರೈವರ್ ಎಂಡ್ ಸಂಪೂರ್ಣವಾಗಿ ಡಿಜಿಟಲೈಸ್ಡ್ ಸಿಸ್ಟಮ್ ಹೊಂದಿದೆ.

ಇದನ್ನೂ ಓದಿ: Bengaluru New Year Guidelines: ಹೊಸ ವರ್ಷದ ಸಂಭ್ರಮಕ್ಕೆ ರಾಜಧಾನಿ ಬೆಂಗಳೂರು ಸಿದ್ಧ, ಸಂಚಾರ ಮಾರ್ಗದಲ್ಲಿ ಬದಲಾವಣೆ, ಬಿಗಿ ಪೊಲೀಸ್ ಭದ್ರತೆ

ಅಪಘಾತದಲ್ಲಿ ಮೃತ್ತಪಟ್ಟಿದ್ದ ಚಾಲಕನ ಕುಟುಂಬಕ್ಕೆ 1 ಕೋಟಿ ನೆರವು

ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟ ಚಾಲಕನ ಕುಟುಂಬಕ್ಕೆ ಕೆಎಸ್​​ಆರ್​​ಟಿಸಿ ಒಂದು ಕೋಟಿ ರೂಪಾಯಿ ನೆರವು ನೀಡಿದೆ. ಇದರ ಚೆಕ್​ ಅನ್ನು ಸಚಿವ ಶ್ರೀರಾಮುಲು ಅವರು ವಿತರಿಸಿದರು. ಚಿತ್ರದುರ್ಗ ಡಿಪೋದ ಚಾಲಕ ಕಂ ನಿರ್ವಾಹಕರಾಗಿದ್ದ ಉಮೇಶ್ ಜೆ.ಎಸ್ ಬಸ್ ಚಾಲನೆ ಮಾಡುವ ವೇಳೆ ಅಪಘಾತಗೊಂಡು ಮೃತಪಟ್ಟಿದ್ದರು. ಸದ್ಯ ಇನ್ಶ್ಯೂರೆನ್ಸ್ ಕೋಟಾ ಮೂಲಕ ಒಂದು ಕೋಟಿ ಚೆಕ್ ವಿತರಣೆ ರೂಪಾಯಿ ಪ್ರತ್ಯೇಕ ನೆರವು ವಿತರಿಸಲಾಯಿತು. ಆ ಮೂಲಕ ಶಾಂತಿನಗರ KSRTC ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೃತನ ಕುಟುಂಬಕ್ಕೆ ಒಟ್ಟು ಒಂದು ಕೋಟಿ ಹದಿಮೂರು ಲಕ್ಷ ರೂಪಾಯಿ ವಿತರಣೆ ಮಾಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Sat, 31 December 22

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ