ಬೆಂಗಳೂರು: ಹಣದ ಮಳೆ ಸುರಿಸ್ತೀವಿ ಅಂದೋರು ಮಾಡಿದ್ರು ಚೀಟಿಂಗ್; ಲಕ್ಷ ಲಕ್ಷ ಪಂಗನಾಮ

ಹಣ ಡಬಲಿಂಗ್ ವಿಚಾರದಲ್ಲಿ ಮೋಸಹೋದ ಬೆಂಗಳೂರಿನ ಗುತ್ತಿಗೆದಾರನಿಗೆ ಬರೋಬ್ಬರಿ 28 ಲಕ್ಷ ರೂ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್ಚಿನ ಲಾಭದ ಆಸೆಗೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಪೊಲೀಸರು ಮೂವರನ್ನು ಬಂಧಿಸಿದ್ದು, 40 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಹಣದ ಮಳೆ ಸುರಿಸ್ತೀವಿ ಅಂದೋರು ಮಾಡಿದ್ರು ಚೀಟಿಂಗ್; ಲಕ್ಷ ಲಕ್ಷ ಪಂಗನಾಮ
ಪ್ರಾತಿನಿಧಿಕ ಚಿತ್ರ
Image Credit source: thehindu.com
Edited By:

Updated on: Mar 24, 2026 | 8:13 PM

ಬೆಂಗಳೂರು, ಮಾರ್ಚ್​ 24: ಹಣ ಅಂದರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೋ ಮಾತು ನೂರಕ್ಕೆ ನೂರರಷ್ಟು ಸತ್ಯ. ರೊಕ್ಕದ ಲಾಭ ಆಗುತ್ತೆ ಅಂದರೆ ಕೆಲ ಜನ ಏನು ಬೇಕಾದರು ಮಾಡುತ್ತಾರೆ. ಕೆಲವರು ಮೂರ್ಖರು ಕೂಡ ಆಗುತ್ತಾರೆ. ಈಗಿನ ಕಾಲದಲ್ಲಿ ಲಕ್ಷಕ್ಕೆ ಮೂರು ಲಕ್ಷ ರೂ ಕೊಡ್ತೀವಿ ಅಂದರೆ ಯಾರು ನಂಬ್ತಾರೆ ಹೇಳಿ. ಹೀಗೆ ಡಬಲ್, ತ್ರಿಬಲ್ ಹಣ (money doubling) ಸಿಗುತ್ತೆ ಅಂತಾ ಆಸೆ ಬಿದ್ದವರು ಲಕ್ಷ ಲಕ್ಷ ಕಳ್ಕೊಂಡಿದ್ದಾರೆ.

ಮೂವರ ಬಂಧನ

ಜಗತ್ತಿನಲ್ಲಿ ಮೋಸ ಹೋಗುವವರು ಇರೋವರೆಗೂ ಮೋಸ ಮಾಡೋರು ಇರ್ತಾರೆ ಅನ್ನೋದು ನಿಜಾನೇ ಬಿಡಿ. ಹಣದ ಮಳೆ ರೀತಿ ಸುರಿಯುತ್ತೆ ಅನ್ನೋ ಬಣ್ಣದ ಮಾತುಗಳನ್ನ ನಂಬಿ ಬೆಂಗಳೂರಿನಲ್ಲಿ ಗುತ್ತಿಗೆದಾರ ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದಾನೆ. ಹಣ ಚೀಟ್ ಆಗಿದೆ ಅಂತ ಗೊತ್ತಾದ ಮೇಲೆ ಪೊಲೀಸ್ ಮೊರೆ ಹೋಗಿದ್ದು, ಸದ್ಯ ಪೊಲೀಸರು ಮೂವರನ್ನ ಬಂಧಿಸಿ 40 ಲಕ್ಷ ರೂ ಸೀಜ್ ಮಾಡಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!

ಅಂದ್ಹಾಗೆ ಈ ಘಟನೆ ನಡೆದಿರುವುದು ಬೆಂಗಳೂರಿನ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ. ಹಣ ಡಬ್ಲಿಂಗ್ ಮಾಡುವ ನೆಪದಲ್ಲಿ ಗುತ್ತಿಗೆದಾರ ರಮೇಶ್‌ ಎಂಬುವರಿಗೆ 28 ಲಕ್ಷ ರೂ. ವಂಚಿಸಲಾಗಿದೆ. ವಂಚನೆ ಮಾಡಿದ್ದ ಮಧುಗಿರಿ ಮೂಲದ ವಿಜಯ್, ಕೆರೆಗುಡ್ಡದಹಳ್ಳಿಯ ಕೃಷ್ಣ ಸಿಂಗ್ ಮತ್ತು ಚಾಲಕ ನವೀನ್​ನ ಪೊಲೀಸರು ಬಂಧಿಸಿದ್ದಾರೆ. ಬಾರಿಶ್ ಹಣ ಅಂತಾ ಪುಂಗಿ ಬಿಟ್ಟಿದ್ದ ಖದೀಮರು ನಮ್ಮತ್ರ ದುಡ್ಡಿನ ಸುರಿಮಳೆಯೇ ಇದೆ. ಆದರೆ ಅದು 90 ದಿನದಲ್ಲಿ ನಾರ್ಮಲ್ ಕಾಗದ ಆಗುತ್ತೆ ಹೀಗಾಗಿ ಅದನ್ನ ಖರ್ಚು ಮಾಡಬೇಕು. ನೀವು ನಮಗೆ ಒಂದು ಲಕ್ಷ ರೂ ಕೊಟ್ಟರೆ ಮೂರು ಲಕ್ಷ ರೂ ಕೊಡ್ತೀವಿ. ತೊಂಬತ್ತು ದಿನಗಳ ಒಳಗೆ ಯಾವುದಕ್ಕಾದ್ರು ಖರ್ಚು ಮಾಡಿ ಅಂತಾ ನಂಬಿಸಿದ್ದರು.

ಹಣದ ಸಮೇತ ಖದೀಮರು ಪರಾರಿ

ಆರೋಪಿಗಳ ಮಾತನ್ನು ನಂಬಿದ್ದ ಗುತ್ತಿಗೆದಾರ ರಮೇಶ್, 28 ಲಕ್ಷ 60 ಸಾವಿರ ರೂ ಹಣವನ್ನು 8ನೇ ಮೈಲಿ ಬಳಿ ತಂದಿದ್ದರು. ಇಷ್ಟು ಕೊಟ್ಟರೆ ಆಕಡೆ ಈಕಡೆ ಒಂದು ಕೋಟಿ ರೂ ಸಿಗುತ್ತೆ ಅಂತಾ ಅತಿ ಆಸೆ ಇಟ್ಕೊಂಡಿದ್ದರು. ಹೋಟೆಲ್ ಒಂದಕ್ಕೆ ಕರೆದಿದ್ದ ಆರೋಪಿಗಳು ಹಣ ಪಡೆದು ಅದನ್ನ ಚೆಕ್ ಮಾಡ್ಕೊಂಡ್ ಬರ್ತೀವಿ ಅಂತಾ ಹಣದ ಸಮೇತ ಪರಾರಿಯಾಗಿದ್ದರು.

ಇದನ್ನೂ ಓದಿ: ನಗರದಲ್ಲಿ ಹೆಚ್ಚಿದ ಡಿಜಿಟಲ್ ಅರೆಸ್ಟ್ ಸ್ಕ್ಯಾಮ್; ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!

ಇನ್ನು ಮೋಸ ಹೋಗಿದ್ದು ಗೊತ್ತಾದಾಗಲೇ ರಮೇಶ್​ಗೆ ಎಚ್ಚರವಾಗಿದೆ. ಕೂಡಲೇ ಬಾಗಲಗುಂಟೆ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ್ದ ಪೊಲೀಸರು ವಂಚಕರನ್ನ ಬಂಧಿಸಿ ಒಟ್ಟು 40 ಲಕ್ಷ ರೂಪಾಯಿ ಹಣವನ್ನು ರಿಕವರಿ ಮಾಡಿದ್ದಾರೆ. ಕೇವಲ ರಮೇಶ್ ಮಾತ್ರ ಅಲ್ಲ, ಇದೇ ರೀತಿಯ ವಂಚನೆಗೆ ಇನ್ನೋರ್ವ ವ್ಯಕ್ತಿ ಕೂಡ 18 ಲಕ್ಷ ರೂಪಾಯಿ ಕಳೆದುಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಹಾಗಾಗಿ ಯಾರಾದರೂ ಹಿಂಗೆ ಡಬಲ್ ತ್ರಿಬಲ್ ಹಣ ಕೊಡ್ತೀವಿ ಅಂದರೆ ಆಗಲೇ ಹುಷಾರಾಗಿ. ಹೆಚ್ಚಿನ ಹಣ ಸಿಗುತ್ತೆ ಅಂತಾ ಅತಿ ಆಸೆ ಪಟ್ಟರೆ ಈ ಥರ ನೀವೂ ಮೂರ್ಖರಾಗೋದು ಪಕ್ಕಾ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us