AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗ್ಳೂರಿನಲ್ಲಿ 3BHK ಅಪಾರ್ಟ್‌ಮೆಂಟ್‌ನ ತಿಂಗಳ ಬಾಡಿಗೆ 1.1 ಲಕ್ಷ ರೂ, ವೈರಲ್ ಆಯ್ತು ಪೋಸ್ಟ್

ಬೆಂಗಳೂರಿನಲ್ಲಿ ತಿಂಗಳ ಸಂಬಳದಲ್ಲಿ ಅರ್ಧ ಪಾಲು ಹಣವನ್ನು ಬಾಡಿಗೆ ಕಟ್ಟಲು ಇಡಬೇಕು. ಅಗ್ಗದ ಬೆಲೆಗೆ ಬಾಡಿಗೆ ಮನೆಗಳು ಸಿಗೋದು ತುಂಬಾ ಕಷ್ಟ. ಇದೀಗ ಪೋಸ್ಟ್‌ವೊಂದು ವೈರಲ್‌ ಆಗಿದ್ದು, ಇದರಲ್ಲಿ ಬೆಂಗಳೂರಿನ 3BHK ಅಪಾರ್ಟ್‌ಮೆಂಟ್‌ನ ಮಾಸಿಕ ಬಾಡಿಗೆ 1.1 ಲಕ್ಷ ರೂಯಂತೆ. ಈ ಪೋಸ್ಟ್‌ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಾಡಿಗೆಗಳು ಮತ್ತು ಜೀವನ ವೆಚ್ಚದ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಬೆಂಗ್ಳೂರಿನಲ್ಲಿ 3BHK ಅಪಾರ್ಟ್‌ಮೆಂಟ್‌ನ ತಿಂಗಳ ಬಾಡಿಗೆ 1.1 ಲಕ್ಷ ರೂ, ವೈರಲ್ ಆಯ್ತು ಪೋಸ್ಟ್
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: May 27, 2026 | 7:50 PM

Share

ಬೆಂಗಳೂರು, ಮೇ 27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬಾಡಿಗೆ ಮನೆಯ ದರಗಳು ಗಗನಕ್ಕೇರುತ್ತಿವೆ. ಹೀಗಾಗಿ ತಿಂಗಳ ಸಂಬಳದ ಮುಕ್ಕಾಲು ಭಾಗ ಹಣವನ್ನು ಮನೆ ಬಾಡಿಗೆಗೆ ಮೀಸಲಿಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ವ್ಯಕ್ತಿಯೊಬ್ಬರು ಇದೇ ಬಾಡಿಗೆ ಮನೆ ವಿಚಾರವಾಗಿ ಪೋಸ್ಟ್ ಮಾಡಿದ್ದಾರೆ. ಹೌದು, ಬೆಂಗಳೂರಿನಲ್ಲಿ 3 ಬಿಹೆಚ್ ಕೆ ಅಪಾರ್ಟ್ಮೆಂಟ್‌ನ ತಿಂಗಳ ಬಾಡಿಗೆ 1.1 ಲಕ್ಷ ರೂ ಹಾಗೂ ಡೆಪಾಸಿಟ್ 4 ಲಕ್ಷ ರೂಪಾಯಿ ಎಂದಿದ್ದಾರೆ. ಈ ಪೋಸ್ಟ್ ನಗರದ ಗಗನಕ್ಕೇರುತ್ತಿರುವ ವಸತಿ ವೆಚ್ಚಗಳ ಬಗ್ಗೆ ಆನ್‌ಲೈನ್‌ನಲ್ಲಿ ಚರ್ಚೆ ಹುಟ್ಟುಹಾಕಿದೆ.

@kipupwidanshika ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್ ನ ಶೀರ್ಷಿಕೆಯಲ್ಲಿ ಬೆಂಗಳೂರಿನಲ್ಲಿ 3ಬಿಹೆಚ್ ಕೆ ಮನೆಗೆ 1.1 ಲಕ್ಷ ರೂಪಾಯಿಗೆ ಬಾಡಿಗೆ. ಇದು ನಿಜಕ್ಕೂ ಯಾರೊಬ್ಬರ ಮಾಸಿಕ ಸಂಬಳವೇ? ಎಂದು ಬರೆದುಕೊಂಡಿದ್ದಾರೆ. ಪೋಸ್ಟ್‌ನೊಂದಿಗೆ ಸ್ಕ್ರೀನ್‌ಶಾಟ್‌ನಲ್ಲಿ ದೊಮ್ಮಲೂರು ಮತ್ತು ಇಂದಿರಾನಗರದ ಎಂಬಸಿ ಗಾಲ್ಫ್ ಲಿಂಕ್ಸ್ ಬಿಸಿನೆಸ್ ಪಾರ್ಕ್ ಬಳಿ ಇರುವ ಅರೆ ಸುಸಜ್ಜಿತ 3BHK ಫ್ಲಾಟ್‌ನ ವಿವರಗಳನ್ನು ತೋರಿಸಲಾಗಿದೆ. ಈ ಅಪಾರ್ಟ್ಮೆಂಟ್ ಸುಮಾರು 1800 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ.

ವೈರಲ್ ಪೋಸ್ಟ್ ಇಲ್ಲಿದೆ

ಖಾಸಗಿ ಟೆರೇಸ್, ಬಾಲ್ಕನಿ, ಪೂಜಾ ಕೊಠಡಿ, ಮಾಡ್ಯುಲರ್ ಅಡುಗೆಮನೆ ಮತ್ತು ಲಿವಿಂಗ್ ರೂಮಿನಲ್ಲಿ ಮರದ ನೆಲಹಾಸು ಮುಂತಾದ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮಾಸಿಕ ಬಾಡಿಗೆಯನ್ನು 1.1 ಲಕ್ಷ ರೂ, ನಿರ್ವಹಣಾ ಶುಲ್ಕಗಳು ಸುಮಾರು 6,000 ರೂ ಫ್ಲಾಟ್‌ಗೆ ಭದ್ರತಾ ಠೇವಣಿ 4 ಲಕ್ಷ ರೂ ಎಂದು ಉಲ್ಲೇಖಿಸಿರುವುದನ್ನು ಕಾಣಬಹುದು. ಈ ಅಪಾರ್ಟ್‌ಮೆಂಟ್ ನ ಸಂಕೀರ್ಣದಲ್ಲಿ ಈಜುಕೊಳ, ಜಿಮ್ನಾಷಿಯಂ, ಟೆನಿಸ್ ಕೋರ್ಟ್, ಸ್ಕ್ವಾಷ್ ಕೋರ್ಟ್, ಸ್ಕೇಟಿಂಗ್ ರಿಂಕ್, ಉದ್ಯಾನಗಳು ಮತ್ತು ಸಮುದಾಯ ಭವನ ಸೇರಿದಂತೆ ಇನ್ನಿತ್ತರ ಸೌಲಭ್ಯಗಳನ್ನು ಹೊಂದಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮನೆ ಬಾಗಿಲಿಗೆ ಬರುವ ಪೌರ ಕಾರ್ಮಿಕರಿಗೆ ಚಹಾ ಬಿಸ್ಕೆಟ್ ಕೊಟ್ಟು ಉಪಚರಿಸುವ ಮಹಿಳೆ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇದು ಲೂಟಿ ಮಾಡುವ ವಿಧಾನ. ಇದಕ್ಕೆ ಹಣ ನೀಡುವ ಯಾರಾದರೂ ಮೂರ್ಖರೇ ಸರಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ಅಪಾರ್ಟ್ಮೆಂಟ್ ನನ್ನ ಅಪಾರ್ಟ್ಮೆಂಟ್ ನ ಪಕ್ಕದಲ್ಲಿದೆ. ಹಿಂದಿನ ದಾಖಲೆಗಳ ಆಧಾರದ ಮೇಲೆ ಈ ಮಾಲೀಕರು ಕೆಟ್ಟವರು. ಅವರು ತಮ್ಮ ಫ್ಲಾಟ್ ಅನ್ನು ಬಾಡಿಗೆಗೆ ನೀಡುವ ಮೂಲಕ ಒಂದು ಉಪಕಾರ ಮಾಡುತ್ತಿರುವಂತೆ ವರ್ತಿಸುತ್ತಾರೆ. ಇದು 20 ವರ್ಷ ಹಳೆಯ ಫ್ಲಾಟ್ ಮತ್ತು ಹೊರಗಿನಿಂದ ಬಿರುಕುಗಳು ಗೋಚರಿಸುತ್ತವೆ ಎಂದು ಕಾಮೆಂಟ್ ನಲ್ಲಿ ಹೇಳಿದ್ದಾರೆ. ಇನ್ನೊಬ್ಬರು, ಬಾಡಿಗೆ ಮನೆಗಿಂತ ಸ್ವಂತ ಮನೆ ಖರೀದಿಸಿದರೆ ಅದೇ ಬಾಡಿಗೆ ದುಡ್ಡಲ್ಲಿ ಸಾಲ ತೀರಿಸಬಹುದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ