AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲೊಂದು ಹೃದಯ ವಿದ್ರಾವಕ ಘಟನೆ: ಮಕ್ಕಳನ್ನ ಕೊಂದು ನೇಣಿಗೆ ಕೊರಳೊಡ್ಡಿದ ತಾಯಿ

ಹೆತ್ತ ಮಕ್ಕಳನ್ನು ಕೊಂದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಬೆಂಗಳೂರಿನ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಷ್ಟಕ್ಕೂ ನಡೆದದ್ದೇನು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಲ್ಲೊಂದು ಹೃದಯ ವಿದ್ರಾವಕ ಘಟನೆ: ಮಕ್ಕಳನ್ನ ಕೊಂದು ನೇಣಿಗೆ ಕೊರಳೊಡ್ಡಿದ ತಾಯಿ
ಮೃತ ಮಕ್ಕಳು ಮತ್ತು ತಾಯಿ
ಗಂಗಾಧರ​ ಬ. ಸಾಬೋಜಿ
|

Updated on:Oct 10, 2025 | 7:34 PM

Share

ಬೆಂಗಳೂರು, ಅಕ್ಟೋಬರ್​ 10: ಅವರದ್ದು ಮುದ್ದಾದ ಕುಟುಂಬ. ದಂಪತಿಗೆ ಆರತಿಗೊಬ್ಬ ಮಗಳು, ಕೀರ್ತಿಗೊಬ್ಬ ಮಗ ಇದ್ದ. ಮನೆಯಲ್ಲಿ ಬಡತನವಿದ್ದರೂ ಜೀವನ ಸುಂದರವಾಗಿಯೇ ಸಾಗಿತ್ತು. ಈ ನಡುವೆ ಪತಿ ಮತ್ತೋರ್ವಳ‌ ಸಂಗ ಬೆಳೆಸಿದ್ದ. ಅದು ಗಲಾಟೆಗೂ ಕಾರಣವಾಗಿತ್ತು. ಇದರಿಂದ ಬೇಸತ್ತು ಪತ್ನಿ (wife) ಕಟು ನಿರ್ಧಾರ ತೆಗೆದುಕೊಂಡಿದ್ದಾರೆ. ಅದೇನೆಂದರೆ ಇಬ್ಬರು ಮಕ್ಕಳನ್ನು ಕೊಂದು (kill) ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೃದಯ ವಿದ್ರಾವಕ ಘಟನೆ

ಮಕ್ಕಳಾದ ಬೃಂದ(4) ಮತ್ತು ಒಂದೂವರೆ ವರ್ಷದ ಭುವನ್​​ ನನ್ನು ಕೊಂದು ತಾಯಿ ವಿಜಯಲಕ್ಷ್ಮೀ ನೇಣಿಗೆ ಶರಣಾದ ಘಟನೆ ನಗರದ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ವಿಜಯಲಕ್ಷ್ಮೀ ಸಹೋದರಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನ: ಮಾವನ ಆಸ್ತಿ, ಹಣದಾಸೆಗೆ ಅಳಿಯ ಬಲಿ

ಮೂಲತ: ರಾಯಚೂರು ಮೂಲದ ಮಸ್ಕಿಯವರಾದ ವಿಜಯಲಕ್ಷ್ಮೀ ಮತ್ತು ರಮೇಶ್ ದಂಪತಿ, ಕಳೆದ ಐದಾರು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಮೂರು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಜೀವನ ಕಟ್ಟಿಕೊಂಡಿದ್ದರು. ಹೀಗೆ ಬಾಗಲಗುಂಟೆಯ ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆ ಪಡೆದು ಕುಟುಂಬ ವಾಸವಾಗಿತ್ತು.

ಗುರುವಾರ ರಾತ್ರಿ ಗಂಡ ರಮೇಶ್ ಇಲ್ಲದ ಸಮಯದಲ್ಲಿ ಪತ್ನಿ ವಿಜಯಲಕ್ಷ್ಮೀ ಇಬ್ಬರು ಮಕ್ಕಳನ್ನು ನೇಣು ಬಿಗಿದು ತಾನೂ ಫ್ಯಾನಿಗೆ ಕೊರಳೊಡ್ಡಿದ್ದಾರೆ. ಈ ನಡುವೆ ವಿಜಯಲಕ್ಷ್ಮೀ ತಂಗಿ ಮನೆಗೆ ಬಂದಿದ್ದು, ಘಟನೆ ಬೆಳಕಿಗೆ ಬಂದಿದೆ. ಆ ಬಳಿಕ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಬಾಗಲಗುಂಟೆ ಪೊಲೀಸರು ಮೃತದೇಹಗಳನ್ನ ನೇಣಿನ ಕುಣಿಕೆಯಿಂದ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದರು.

ಗಂಡನಿಗೆ ಮತ್ತೊಂದು ಮದುವೆ 

ಇನ್ನು ವಿಜಯಲಕ್ಷ್ಮೀ ಪತಿ ರಮೇಶ್ ಮಾಲ್​ನಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ತಾನು ಮತ್ತೊಂದು ಮದುವೆಯಾಗಿದ್ದು, ಪತ್ನಿಗೆ ಡಿವೋರ್ಸ್ ಕೊಡುವಂತೆ ಬೆದರಿಕೆ ಹಾಕುತ್ತಿದ್ದ. ಮನೆಯಲ್ಲಿದ್ದಾಗ ಬೇರೆ ಬೇರೆ ಹುಡುಗಿಯರ ಜೊತೆ ಫೊನ್​​ನಲ್ಲಿ ಮಾತನಾಡುತ್ತಿದ್ದ. ಇದರಿಂದ ವಿಜಯಲಕ್ಷ್ಮೀ ಮಾನಸಿಕವಾಗಿ ನೊಂದಿದ್ದಳು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿಚಾರವಾಗಿ ಪದೆಪದೇ ಮನೆಯಲ್ಲಿ ಜಗಳ ಕೂಡ ನಡೆಯುತ್ತಿತ್ತು ಎಂದು ರಮೇಶ್ ಮಾವ ಹೇಳಿದ್ದಾರೆ.

ಇದನ್ನೂ ಓದಿ: ಮೂಡಲಗಿ: ಪತ್ನಿ ಕೊಂದು 2 ದಿನ ಶವದೊಂದಿಗೆ ಕಳೆದ ಪತಿ, ಕೊಲೆಗೆ ಅದೇ ಕಾರಣನಾ?

ಸದ್ಯ ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ರಮೇಶ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಏನೇ ಇರಲಿ ಮಕ್ಕಳ ಭವಿಷ್ಯದ ಬಗ್ಗೆ ಸುಂದರವಾದ ಕನಸುಗಳನ್ನ ಕಂಡಿದ್ದ ತಾಯಿಯೇ ತನ್ನ ಕಂದಮ್ಮಗಳ ಉಸಿರನ್ನ ನಿಲ್ಲಿಸಿದ್ದು ದುರ್ದೈವದ ಸಂಗತಿ.

ವರದಿ: ಮಂಜು 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:28 pm, Fri, 10 October 25

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?