AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ಕೈಕಚ್ಚಿದ ಬೈಕ್ ಸವಾರ, ವಿಡಿಯೋ ನೋಡಿ

ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಬಿಎಂಟಿಸಿ ಬಸ್ ಕಂಡಕ್ಟರ್​ವೊಬ್ಬರು ವಿದ್ಯಾರ್ಥಿ ಕೈಕಚ್ಚಿರುವ ಪ್ರಕರಣ ನಡೆದಿತ್ತು. ಇದೇ ತರಹನಾದ ಮತ್ತೊಂದು ಸುದ್ದಿ ಬೆಳಕಿಗೆ ಬಂದಿದೆ. ಆದ್ರೆ, ಹೆಲ್ಮೆಟ್​ ಧರಿಸದಿರುವುದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸ್ ಪೇದೆಯ ಕೈಕಚ್ಚಿರುವ ಘಟನೆ ನಡೆದಿದ್ದು, ಇದೀಗ ವಿಡಿಯೋ ಫುಲ್ ವೈರಲ್ ಆಗಿದೆ.

ಹೆಲ್ಮೆಟ್​ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ಕೈಕಚ್ಚಿದ ಬೈಕ್ ಸವಾರ, ವಿಡಿಯೋ ನೋಡಿ
TV9 Web
| Edited By: |

Updated on:Feb 12, 2024 | 5:48 PM

Share

ಬೆಂಗಳೂರು, (ಫೆಬ್ರವರಿ 21): ಹೆಲ್ಮೆಟ್​ ಸಂಬಂಧ (helmet) ಸಂಚಾರಿ ಪೊಲೀಸರು (Traffic Police) ಹಾಗೂ ವಾಹನ ಸವಾರರ ನಡುವೆ ಕಿರಿಕ್ ನಡೆಯುತ್ತಿರುತ್ತವೆ. ಆದ್ರೆ, ಇಲ್ಲೋರ್ವ ಬೈಕ್ ಸವಾರ ಹೆಲ್ಮೆಟ್ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೊಲೀಸ್ ಪೇದೆಯ ಕೈಕಚ್ಚಿದ್ದಾನೆ. ಬೆಂಗಳೂರಿನ (Bengaluru) ವಿಲ್ಸನ್ ಗಾರ್ಡನ್ 10ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದೆ. ಬಳಿಕ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ಕರೆಸಿ ಬೈಕ್​ ಸವಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಬೈಕ್​ ಸವಾರನ ವಿರುದ್ಧ ಸಂಚಾರಿ ಪೊಲೀಸರು ದೂರು ದಾಖಲಿಸಿದ್ದಾರೆ.

ಹೆಲ್ಮೆಟ್​ ಹಾಕದಿರುವ ಬೈಕ್ ಸವಾರನನ್ನು ಸಂಚಾರಿ ಪೊಲೀಸ್​ ಪೇದೆ ಅಡ್ಡಹಾಕಿದ್ದಾರೆ. ಬಳಿಕ ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿ ಕೀ ಕಿತ್ತುಕೊಂಡಿದ್ದಾರೆ.  ಈ ವೇಳೆ ಇಬ್ಬರ ನಡುವೆ ವಾಗ್ದಾದ ನಡೆದಿದ್ದು, ಕೊನೆಗೆ ಬೈಕ್​ ಸವಾರ ಸಿಟ್ಟಿನಿಂದ ಕೀ ಕೊಡುವಂತೆ ಪೊಲೀಸ್​ ಕಾನ್ಸ್​ಟೇಬಲ್​ ಕೈ ಕಚ್ಚಿದ್ದಾನೆ. ಕೂಡಲೇ ಕಾನ್ಸ್​ಟೇಬಲ್ ಹೊಯ್ಸಳಗೆ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಕೆಆರ್​ ಜಯತೀರ್ಥ ಎನ್ನುವವರು ವಿಡಿಯೋವನ್ನು ಟ್ವಿಟ್ಟರ್​(ಎಕ್ಸ್​) ನಲ್ಲಿ ಶೇರ್ ಮಾಡಿದ್ದು, ಹೆಲ್ಮೆಟ್ ರಹಿತ ಚಾಲಕನ ಫೋಟೋ ಹಿಡಿದಿದಕ್ಕೆ ಫೋಟೋ ಅಪ್ಲೋಡ್ ಮಾಡಿದರೆ ಫೋನ್ ಒಡೆದು ಹಾಕುವುದಾಗಿ ಅವಾಜ್ ಹಾಕಿ ಎಳೆದಾಡಿ ಪೋಲೀಸರ ಕೈಕಚ್ಚಿದ ಸವಾರ. ಪೋಲೀಸರ ಕೈ ಬಲ ಪಡಿಸಿ ಎಂದು ಬರೆದುಕೊಂಡಿದ್ದಾರೆ.

ದೂರಿಗೆ ಪ್ರತಿದೂರು

ದೇವದುರ್ಗ ಜೆಡಿಎಸ್​ ಶಾಸಕಿ ಕರೆಮ್ಮ ಪುತ್ರ ಹಾಗೂ ಆಪ್ತ ಸಹಾಯಕ (ಪಿಎ) ಕಾನ್ಸ್​ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಸಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಪೊಲೀಸ್ ಪೇದೇ ಸೇರಿದಂತೆ ಇತರೆ ಸಿಬ್ಬಂದಿ ವಿರುದ್ಧ ಪ್ರತಿ ದೂರು ದಾಖಲಾಗಿದೆ. ಟ್ರ್ಯಾಕ್ಟರ್​ ತಡೆದು ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಟ್ರಾಕ್ಟರ್ ಚಾಲಕ ಮೌನೇಶ್​ ನೀಡಿದ ದೂರಿನ ಮೇರೆಗೆ ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾಗಿರುವ ಪೊಲೀಸ್​​ ಕಾನ್ಸ್​ಟೇಬಲ್ ಹನುಮಂತರಾಯ, ಹನುಮೇಶ್ ಹಾಗೂ ಮಹೇಶ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಪುತ್ರನ ಮೇಲೆ ಕೇಸ್ ದಾಖಲಾದ ಬೆನ್ನಲ್ಲೇ ಕೌಂಟರ್ ಕೇಸ್ ದಾಖಲಿಸಿಕೊಳ್ಳುವಂತೆ ಒತ್ತಾಯಿಸಿ ಶಾಸಕಿ ಕರೆಮ್ಮ ಪೊಲೀಸ್ ಠಾಣೆ ಮುಂದೆ ತಮ್ಮ ಬೆಂಬಗಲಿಗರ ಜೊತೆ ಪ್ರತಿಭಟನೆ  ಮಾಡಿದ್ದರು. ಇದೀಗ ಕರೆಮ್ಮ ಆಗ್ರಹ ಮೇರೆಗೆ ಪ್ರತಿದೂರು ದಾಖಲಾಗಿದೆ.

Published On - 5:44 pm, Mon, 12 February 24

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?