AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ಕೈಕಚ್ಚಿದ ಬೈಕ್ ಸವಾರ, ವಿಡಿಯೋ ನೋಡಿ

ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಬಿಎಂಟಿಸಿ ಬಸ್ ಕಂಡಕ್ಟರ್​ವೊಬ್ಬರು ವಿದ್ಯಾರ್ಥಿ ಕೈಕಚ್ಚಿರುವ ಪ್ರಕರಣ ನಡೆದಿತ್ತು. ಇದೇ ತರಹನಾದ ಮತ್ತೊಂದು ಸುದ್ದಿ ಬೆಳಕಿಗೆ ಬಂದಿದೆ. ಆದ್ರೆ, ಹೆಲ್ಮೆಟ್​ ಧರಿಸದಿರುವುದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸ್ ಪೇದೆಯ ಕೈಕಚ್ಚಿರುವ ಘಟನೆ ನಡೆದಿದ್ದು, ಇದೀಗ ವಿಡಿಯೋ ಫುಲ್ ವೈರಲ್ ಆಗಿದೆ.

ಹೆಲ್ಮೆಟ್​ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ಕೈಕಚ್ಚಿದ ಬೈಕ್ ಸವಾರ, ವಿಡಿಯೋ ನೋಡಿ
TV9 Web
| Edited By: |

Updated on:Feb 12, 2024 | 5:48 PM

Share

ಬೆಂಗಳೂರು, (ಫೆಬ್ರವರಿ 21): ಹೆಲ್ಮೆಟ್​ ಸಂಬಂಧ (helmet) ಸಂಚಾರಿ ಪೊಲೀಸರು (Traffic Police) ಹಾಗೂ ವಾಹನ ಸವಾರರ ನಡುವೆ ಕಿರಿಕ್ ನಡೆಯುತ್ತಿರುತ್ತವೆ. ಆದ್ರೆ, ಇಲ್ಲೋರ್ವ ಬೈಕ್ ಸವಾರ ಹೆಲ್ಮೆಟ್ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೊಲೀಸ್ ಪೇದೆಯ ಕೈಕಚ್ಚಿದ್ದಾನೆ. ಬೆಂಗಳೂರಿನ (Bengaluru) ವಿಲ್ಸನ್ ಗಾರ್ಡನ್ 10ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದೆ. ಬಳಿಕ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ಕರೆಸಿ ಬೈಕ್​ ಸವಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಬೈಕ್​ ಸವಾರನ ವಿರುದ್ಧ ಸಂಚಾರಿ ಪೊಲೀಸರು ದೂರು ದಾಖಲಿಸಿದ್ದಾರೆ.

ಹೆಲ್ಮೆಟ್​ ಹಾಕದಿರುವ ಬೈಕ್ ಸವಾರನನ್ನು ಸಂಚಾರಿ ಪೊಲೀಸ್​ ಪೇದೆ ಅಡ್ಡಹಾಕಿದ್ದಾರೆ. ಬಳಿಕ ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿ ಕೀ ಕಿತ್ತುಕೊಂಡಿದ್ದಾರೆ.  ಈ ವೇಳೆ ಇಬ್ಬರ ನಡುವೆ ವಾಗ್ದಾದ ನಡೆದಿದ್ದು, ಕೊನೆಗೆ ಬೈಕ್​ ಸವಾರ ಸಿಟ್ಟಿನಿಂದ ಕೀ ಕೊಡುವಂತೆ ಪೊಲೀಸ್​ ಕಾನ್ಸ್​ಟೇಬಲ್​ ಕೈ ಕಚ್ಚಿದ್ದಾನೆ. ಕೂಡಲೇ ಕಾನ್ಸ್​ಟೇಬಲ್ ಹೊಯ್ಸಳಗೆ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಕೆಆರ್​ ಜಯತೀರ್ಥ ಎನ್ನುವವರು ವಿಡಿಯೋವನ್ನು ಟ್ವಿಟ್ಟರ್​(ಎಕ್ಸ್​) ನಲ್ಲಿ ಶೇರ್ ಮಾಡಿದ್ದು, ಹೆಲ್ಮೆಟ್ ರಹಿತ ಚಾಲಕನ ಫೋಟೋ ಹಿಡಿದಿದಕ್ಕೆ ಫೋಟೋ ಅಪ್ಲೋಡ್ ಮಾಡಿದರೆ ಫೋನ್ ಒಡೆದು ಹಾಕುವುದಾಗಿ ಅವಾಜ್ ಹಾಕಿ ಎಳೆದಾಡಿ ಪೋಲೀಸರ ಕೈಕಚ್ಚಿದ ಸವಾರ. ಪೋಲೀಸರ ಕೈ ಬಲ ಪಡಿಸಿ ಎಂದು ಬರೆದುಕೊಂಡಿದ್ದಾರೆ.

ದೂರಿಗೆ ಪ್ರತಿದೂರು

ದೇವದುರ್ಗ ಜೆಡಿಎಸ್​ ಶಾಸಕಿ ಕರೆಮ್ಮ ಪುತ್ರ ಹಾಗೂ ಆಪ್ತ ಸಹಾಯಕ (ಪಿಎ) ಕಾನ್ಸ್​ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಸಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಪೊಲೀಸ್ ಪೇದೇ ಸೇರಿದಂತೆ ಇತರೆ ಸಿಬ್ಬಂದಿ ವಿರುದ್ಧ ಪ್ರತಿ ದೂರು ದಾಖಲಾಗಿದೆ. ಟ್ರ್ಯಾಕ್ಟರ್​ ತಡೆದು ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಟ್ರಾಕ್ಟರ್ ಚಾಲಕ ಮೌನೇಶ್​ ನೀಡಿದ ದೂರಿನ ಮೇರೆಗೆ ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾಗಿರುವ ಪೊಲೀಸ್​​ ಕಾನ್ಸ್​ಟೇಬಲ್ ಹನುಮಂತರಾಯ, ಹನುಮೇಶ್ ಹಾಗೂ ಮಹೇಶ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಪುತ್ರನ ಮೇಲೆ ಕೇಸ್ ದಾಖಲಾದ ಬೆನ್ನಲ್ಲೇ ಕೌಂಟರ್ ಕೇಸ್ ದಾಖಲಿಸಿಕೊಳ್ಳುವಂತೆ ಒತ್ತಾಯಿಸಿ ಶಾಸಕಿ ಕರೆಮ್ಮ ಪೊಲೀಸ್ ಠಾಣೆ ಮುಂದೆ ತಮ್ಮ ಬೆಂಬಗಲಿಗರ ಜೊತೆ ಪ್ರತಿಭಟನೆ  ಮಾಡಿದ್ದರು. ಇದೀಗ ಕರೆಮ್ಮ ಆಗ್ರಹ ಮೇರೆಗೆ ಪ್ರತಿದೂರು ದಾಖಲಾಗಿದೆ.

Published On - 5:44 pm, Mon, 12 February 24

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!