AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಇನ್ಮುಂದೆ 18 ಗಂಟೆಯಲ್ಲಿ ಮುಂಬೈ ತಲುಪಬಹುದು! ಅದು ಹೇಗೆ ಗೊತ್ತಾ?

ಬೆಂಗಳೂರು-ಮುಂಬೈ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿತಗೊಳಿಸಲು ಭಾರತೀಯ ರೈಲ್ವೆ ದುರಂತೋ ಎಕ್ಸ್‌ಪ್ರೆಸ್ ಆರಂಭಿಸುವ ಚಿಂತನೆ ನಡೆಸಿದೆ. ಇದು ಕಾರ್ಯರೂಪಕ್ಕೆ ಬಂದರೆ, 24 ಗಂಟೆಗಳ ಬದಲು 18 ಗಂಟೆಗಳಲ್ಲಿ ಮುಂಬೈ ತಲುಪಬಹುದು. ಕಡಿಮೆ ನಿಲ್ದಾಣಗಳು, ವೇಗದ ಸಂಚಾರ ಹಾಗೂ ಟಿಕೆಟ್‌ನಲ್ಲಿ ಊಟದ ಸೌಲಭ್ಯ ಈ ರೈಲಿನ ವಿಶೇಷತೆಯಾಗಿರಲಿದೆ.

ಬೆಂಗಳೂರಿಗರೇ ಇನ್ಮುಂದೆ 18 ಗಂಟೆಯಲ್ಲಿ ಮುಂಬೈ  ತಲುಪಬಹುದು! ಅದು ಹೇಗೆ ಗೊತ್ತಾ?
ಬೆಂಗಳೂರು-ಮುಂಬೈ ಡುರೊಂಟೊ ಎಕ್ಸ್‌ಪ್ರೆಸ್‌
ಭಾವನಾ ಹೆಗಡೆ
| Edited By: |

Updated on:Jan 16, 2026 | 12:10 PM

Share

ಬೆಂಗಳೂರು, ಜನವರಿ 16: ಬೆಂಗಳೂರು–ಮುಂಬೈ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಎರಡು ಮಹಾನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿತಗೊಳಿಸುವ ಉದ್ದೇಶದಿಂದ ದುರಂತೋ ಎಕ್ಸ್‌ಪ್ರೆಸ್ ರೈಲು ಆರಂಭಿಸುವ ಕುರಿತು ರೈಲ್ವೆ ಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ರೈಲು ಸೇವೆ ಆರಂಭವಾದರೆ, ಬೆಂಗಳೂರು–ಮುಂಬೈ ಪ್ರಯಾಣದ ಸಮಯ ಸುಮಾರು 18 ಗಂಟೆಗಳವರೆಗೆ ಇಳಿಯುವ ಸಾಧ್ಯತೆ ಇದೆ.

ಏನೆಲ್ಲಾ ಸೌಲಭ್ಯ ನೀಡಲಿದೆ ದುರಂತೋ ಎಕ್ಸ್‌ಪ್ರೆಸ್‌?

ಇತ್ತೀಚೆಗೆ ಬೆಂಗಳೂರು ಎಸ್‌ಎಂವಿಟಿ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ (LTT) ನಡುವೆ ವಾರಕ್ಕೆ ಎರಡು ಬಾರಿ ಸಂಚರಿಸುವ ಹೊಸ ಸೂಪರ್‌ಫಾಸ್ಟ್ ರೈಲು ಸೇವೆಗೆ ಅನುಮೋದನೆ ದೊರೆತಿತ್ತು. 1,209 ಕಿಲೋಮೀಟರ್ ದೂರವನ್ನು ಈ ರೈಲು ಕ್ರಮಿಸಿದರೂ, ಸುಮಾರು 24 ಗಂಟೆಗಳ ಪ್ರಯಾಣ ಸಮಯ ಹೊಂದಿರುವುದರಿಂದ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಡಿಸೆಂಬರ್ 9 ರಂದು ಆರಂಭವಾದ ಈ ರೈಲು ಹುಬ್ಬಳ್ಳಿ, ಪುಣೆ ಸೇರಿದಂತೆ 14 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಈ ಹಿನ್ನೆಲೆ, ಕೆಎಸ್‌ಆರ್ ಬೆಂಗಳೂರು ಮತ್ತು ಸಿಎಸ್ಎಂಟಿ ಮುಂಬೈ ನಡುವೆ ದುರಂತೋ ಎಕ್ಸ್‌ಪ್ರೆಸ್ ಆರಂಭಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಮೀರಜ್ ಹಾಗೂ ಪುಣೆ ಮಾರ್ಗವಾಗಿ ಈ ರೈಲು ಸಂಚರಿಸುವ ಸಾಧ್ಯತೆ ಇದೆ. ನಿಲ್ದಾಣದ ಸಂಖ್ಯೆ ಕಡಿಮೆಯಿದ್ದು, ವೇಗದ ಸಂಚಾರ ಹಾಗೂ ಟಿಕೆಟ್‌ ಜೊತೆ ಊಟದ ಸೌಲಭ್ಯವೂ ಇರುವ ದುರಂತೋ ರೈಲುಗಳು ದೂರ ಪ್ರಯಾಣಕ್ಕೆ ಹೇಳಿ ಮಾಡಿಸಿದ್ದಾಗಿದೆ.

ತಾತ್ಕಾಲಿಕ ವೇಳಾಪಟ್ಟಿ

ರೈಲು ಸಂಜೆ 4.30ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10.30ಕ್ಕೆ ಮುಂಬೈ ತಲುಪಬಹುದು. 3ಎಸಿ ಟಿಕೆಟ್ ದರ ಸುಮಾರು 2,500 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ಬಗ್ಗೆ ರೈಲ್ವೆ ಅಧಿಕಾರಿಗಳು ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:29 am, Fri, 16 January 26

ಫೈನಲ್​ನಲ್ಲಿ 23 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ಸ್ಮೃತಿ
ಫೈನಲ್​ನಲ್ಲಿ 23 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ಸ್ಮೃತಿ
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ