AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮ್ಯೂಸಿಯಮ್​ಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಆರೋಪಿಗಳ ಲೊಕೇಷನ್ ​ಟ್ರೇಸ್​ ​

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿರುವ ಮ್ಯೂಸಿಯಂಗಳಿಗೆ ಬಾಂಬ್​ ಬೆದರಿಕೆ ಇಮೇಲ್​ ಬಂದಿತ್ತು. ಈ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದಿದೆ. ಅದು ದುಷ್ಕರ್ಮಿಗಳು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ಬಳಸಿ ಇಮೇಲ್. ಇದು ಪೊಲೀಸರಿಗೆ ತಲೆನೋವಾಗಿದೆ.

ಬೆಂಗಳೂರಿನ ಮ್ಯೂಸಿಯಮ್​ಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಆರೋಪಿಗಳ ಲೊಕೇಷನ್ ​ಟ್ರೇಸ್​ ​
ಸಾಂದರ್ಭಿಕ ಚಿತ್ರ
Jagadisha B
| Updated By: ವಿವೇಕ ಬಿರಾದಾರ|

Updated on: Jan 09, 2024 | 8:06 AM

Share

ಬೆಂಗಳೂರು, ಜನವರಿ 09: ನಗರದ ಮ್ಯೂಸಿಯಮ್​ಗಳಿಗೆ (Museum) ಬಾಂಬ್ ಬೆದರಿಕೆ (Bomb Threat Call) ಇಮೇಲ್ ಬಂದಿದ್ದ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದುಬಂದಿದೆ. ದುಷ್ಕರ್ಮಿಗಳು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ಬಳಸಿ ಇಮೇಲ್ ಮಾಡಿರುವುದು ಪೊಲೀಸರಿಗೆ ತಿಳಿದಿದೆ. ದುಷ್ಕರ್ಮಿಗಳು ಗೂಗಲ್ ಇ-ಮೇಲ್ ವೆಬ್ ಬಳಸಿಯೇ ಮೇಲ್ ಮಾಡಿದ್ದಾರೆ. ಆದರೆ ನೆಟ್​ವರ್ಕ್ ಮಾತ್ರ ವಿಪಿಎನ್ ಬಳಸಿದ್ದಾರೆ. ಹೀಗಾಗಿ ಕೇಂದ್ರ ವಿಭಾಗದ ಪೊಲೀಸರಿಂದ (Police) ತನಿಖೆ ಮುಂದುವರೆದಿದೆ.

ವಿಪಿಎನ್ ನೆಟ್​ವರ್ಕ್ ಬಳಸಿಕೊಂಡರೇ ಐಪಿ ಅಡ್ರೆಸ್ ಟ್ರೇಸ್ ಮಾಡುವುದು ಕಷ್ಟವಾಗುತ್ತದೆ. ಸಾಧಾರಣವಾಗಿ ಇಂತಹ ಪ್ರಕರಣಗಳಲ್ಲಿ ಐಪಿ ಅಡ್ರೆಸ್ ಟ್ರೇಸ್ ಮಾಡಲು ಕಷ್ಟವಾಗುತ್ತದೆ. ಬೇರೆ ಬೇರೆ ದೇಶಗಳಿಂದ ಮೇಲ್ ಬಂದಿರುವ ಹಾಗೆ ಐಪಿ ಅಡ್ರೆಸ್ ತೋರಿಸುತ್ತದೆ. ಈ ಪ್ರಕರಣದಲ್ಲಿ ಐಪಿ ಅಡ್ರೆಸ್ ಮೂರು ದೇಶದ ಲೊಕೇಷನ್​ಗಳನ್ನು ತೋರಿಸುತ್ತಿದೆ. ಇದರಿಂದ ಪೊಲೀಸರಿಗೆ ತಲೆನೋವಾಗಿದೆ. ಆದರೆ ಅದರ ಸರಿಯಾದ ಐಪಿ ಅಡ್ರೆಸ್ ಹುಡುಕಲು ಕಾಲಾವಕಾಶ ಬೇಕು.

ಇದನ್ನೂ ಓದಿ: Bomb Threat: ದೇಶದ 20ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ಬಾಂಬ್​ ಬೆದರಿಕೆ ಕರೆ

ಏನಿದು ಪ್ರಕರಣ

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಶಾಲೆಗಳಿಗೆ ಬಾಂಬ್​ ಬೆದರಿಕೆಗೂ ವಿಪಿಎನ್​ ಬಳಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು. ದುಷ್ಕರ್ಮಿ ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳನ್ನು ಕಳುಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ