AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮ್ಯೂಸಿಯಮ್​ಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಆರೋಪಿಗಳ ಲೊಕೇಷನ್ ​ಟ್ರೇಸ್​ ​

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿರುವ ಮ್ಯೂಸಿಯಂಗಳಿಗೆ ಬಾಂಬ್​ ಬೆದರಿಕೆ ಇಮೇಲ್​ ಬಂದಿತ್ತು. ಈ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದಿದೆ. ಅದು ದುಷ್ಕರ್ಮಿಗಳು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ಬಳಸಿ ಇಮೇಲ್. ಇದು ಪೊಲೀಸರಿಗೆ ತಲೆನೋವಾಗಿದೆ.

ಬೆಂಗಳೂರಿನ ಮ್ಯೂಸಿಯಮ್​ಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಆರೋಪಿಗಳ ಲೊಕೇಷನ್ ​ಟ್ರೇಸ್​ ​
ಸಾಂದರ್ಭಿಕ ಚಿತ್ರ
Jagadisha B
| Edited By: ವಿವೇಕ ಬಿರಾದಾರ|

Updated on: Jan 09, 2024 | 8:06 AM

Share

ಬೆಂಗಳೂರು, ಜನವರಿ 09: ನಗರದ ಮ್ಯೂಸಿಯಮ್​ಗಳಿಗೆ (Museum) ಬಾಂಬ್ ಬೆದರಿಕೆ (Bomb Threat Call) ಇಮೇಲ್ ಬಂದಿದ್ದ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದುಬಂದಿದೆ. ದುಷ್ಕರ್ಮಿಗಳು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ಬಳಸಿ ಇಮೇಲ್ ಮಾಡಿರುವುದು ಪೊಲೀಸರಿಗೆ ತಿಳಿದಿದೆ. ದುಷ್ಕರ್ಮಿಗಳು ಗೂಗಲ್ ಇ-ಮೇಲ್ ವೆಬ್ ಬಳಸಿಯೇ ಮೇಲ್ ಮಾಡಿದ್ದಾರೆ. ಆದರೆ ನೆಟ್​ವರ್ಕ್ ಮಾತ್ರ ವಿಪಿಎನ್ ಬಳಸಿದ್ದಾರೆ. ಹೀಗಾಗಿ ಕೇಂದ್ರ ವಿಭಾಗದ ಪೊಲೀಸರಿಂದ (Police) ತನಿಖೆ ಮುಂದುವರೆದಿದೆ.

ವಿಪಿಎನ್ ನೆಟ್​ವರ್ಕ್ ಬಳಸಿಕೊಂಡರೇ ಐಪಿ ಅಡ್ರೆಸ್ ಟ್ರೇಸ್ ಮಾಡುವುದು ಕಷ್ಟವಾಗುತ್ತದೆ. ಸಾಧಾರಣವಾಗಿ ಇಂತಹ ಪ್ರಕರಣಗಳಲ್ಲಿ ಐಪಿ ಅಡ್ರೆಸ್ ಟ್ರೇಸ್ ಮಾಡಲು ಕಷ್ಟವಾಗುತ್ತದೆ. ಬೇರೆ ಬೇರೆ ದೇಶಗಳಿಂದ ಮೇಲ್ ಬಂದಿರುವ ಹಾಗೆ ಐಪಿ ಅಡ್ರೆಸ್ ತೋರಿಸುತ್ತದೆ. ಈ ಪ್ರಕರಣದಲ್ಲಿ ಐಪಿ ಅಡ್ರೆಸ್ ಮೂರು ದೇಶದ ಲೊಕೇಷನ್​ಗಳನ್ನು ತೋರಿಸುತ್ತಿದೆ. ಇದರಿಂದ ಪೊಲೀಸರಿಗೆ ತಲೆನೋವಾಗಿದೆ. ಆದರೆ ಅದರ ಸರಿಯಾದ ಐಪಿ ಅಡ್ರೆಸ್ ಹುಡುಕಲು ಕಾಲಾವಕಾಶ ಬೇಕು.

ಇದನ್ನೂ ಓದಿ: Bomb Threat: ದೇಶದ 20ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ಬಾಂಬ್​ ಬೆದರಿಕೆ ಕರೆ

ಏನಿದು ಪ್ರಕರಣ

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಶಾಲೆಗಳಿಗೆ ಬಾಂಬ್​ ಬೆದರಿಕೆಗೂ ವಿಪಿಎನ್​ ಬಳಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು. ದುಷ್ಕರ್ಮಿ ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳನ್ನು ಕಳುಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ